ʼಕೇಸರಿʼ ತೊಟ್ಟ ಸ್ವಾಮಿಗಳು ರೇಪ್‌ ಮಾಡ್ತಾರೆ : ದೀಪಿಕಾ ಬಟ್ಟೆ ಏನ್‌ ಮಾಡ್ತು..!

ಬಾಲಿವುಡ್‌ ಬಾದ್‌ ಶಾ ಶಾರುಖ್‌ ಖಾನ್‌ ನಟನೆಯ, ನಿರ್ದೇಶಕ ಸಿದ್ಧಾರ್ಥ್ ಆನಂದ್ ನಿರ್ದೇಶಿಸಿರುವ ʼಪಠಾಣ್ʼ ಚಿತ್ರ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ಹಾಡಿನ ದೃಶ್ಯ ಒಂದರಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಧರಿಸಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಹಿಂದೂ ಸಂಘಟನೆಗಳು ಸಿನಿಮಾ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು, ನಟ, ರಾಜಕಾರಣಿ ಪ್ರಕಾಶ್‌ ರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

Written by - Krishna N K | Last Updated : Dec 17, 2022, 01:16 PM IST
  • ಶಾರುಖ್‌ ಖಾನ್‌ ʼಪಠಾಣ್ʼ ಚಿತ್ರ ವಿವಾದಕ್ಕೆ ಕಾರಣವಾಗಿದೆ.
  • ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಧರಿಸಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
  • ದೀಪಿಕಾ ಪರವಾಗಿ ಧ್ವನಿ ಎತ್ತಿದ ಬಹುಬಾಷಾ ನಟ ಪ್ರಕಾಶ್‌ ರಾಜ್‌.
ʼಕೇಸರಿʼ ತೊಟ್ಟ ಸ್ವಾಮಿಗಳು ರೇಪ್‌ ಮಾಡ್ತಾರೆ : ದೀಪಿಕಾ ಬಟ್ಟೆ ಏನ್‌ ಮಾಡ್ತು..! title=

Boycott Pathan : ಬಾಲಿವುಡ್‌ ಬಾದ್‌ ಶಾ ಶಾರುಖ್‌ ಖಾನ್‌ ನಟನೆಯ, ನಿರ್ದೇಶಕ ಸಿದ್ಧಾರ್ಥ್ ಆನಂದ್ ನಿರ್ದೇಶಿಸಿರುವ ʼಪಠಾಣ್ʼ ಚಿತ್ರ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ಹಾಡಿನ ದೃಶ್ಯ ಒಂದರಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಧರಿಸಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಹಿಂದೂ ಸಂಘಟನೆಗಳು ಸಿನಿಮಾ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು, ನಟ, ರಾಜಕಾರಣಿ ಪ್ರಕಾಶ್‌ ರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

ಪ್ಯಾನ್ ಇಂಡಿಯಾ ಪಠಾಣ್‌ ಚಿತ್ರ 2023 ಜನವರಿ 25 ರಂದು ಥಿಯೇಟರ್‌ಗೆ ಬರಲಿದೆ. ಇತ್ತೀಚೆಗಷ್ಟೇ ಈ ಚಿತ್ರದ ಮೊದಲ ಹಾಡು 'ಬೇಷರಂ ರಂಗ್' ಬಿಡುಗಡೆಯಾಗಿದೆ. ಒಂದೇ ದಿನದಲ್ಲಿ ಈ ಹಾಡು 1.9 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಯೂಟ್ಯೂಬ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.. ಈ ಚಿತ್ರಕ್ಕಾಗಿ ದೀಪಿಕಾ ಪಡುಕೋಣೆ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇದೀಗ ಈ ಹಾಡಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ರೆ, ನೆಟ್ಟಿಗರಿಂದ ಭಾರಿ ಟೀಕೆಗೆ ಒಳಗಾಗಿದೆ.

ಇದನ್ನೂ ಓದಿ: Bagheera : ಶ್ರೀಮುರಳಿ ಫ್ಯಾನ್ಸ್‌ಗೆ ಸಿಕ್ತು ಸರ್‌ಪ್ರೈಸ್‌! ಸಿನಿಪ್ರಿಯರ ಕುತೂಹಲ ಕೆರಳಿಸಿದ ಬಘೀರ ಪೋಸ್ಟರ್‌

ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಕೆಲವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಸರಿ ಬಿಕಿನಿ ತೊಟ್ಟು ಹಿಂದುತ್ವಕ್ಕೆ ಅಪಮಾನ ಮಾಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ದೀಪಿಕಾ ಅವರ ಬಿಕಿನಿ ತುಂಬಾ ಆಕ್ಷೇಪಾರ್ಹವಾಗಿದ್ದು ಅಂತ ವಿರೋಧಿಸಿದ್ದರು. ಅಲ್ಲದೆ, ಈ ಹಾಡನ್ನು ಡರ್ಟಿ ಮೂಡ್‌ನಲ್ಲಿ ಚಿತ್ರೀಕರಿಸಲಾಗಿದೆ, ಅಶ್ಲೀಲವಾಗಿದೆ ಎಂಬ ಮಾತುಗಳು ಕೇಳಿಬಂದಿದೆ.

ಇದೀಗ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಟ್ವಿಟ್ಟರ್ ಪೇಜ್ ನಲ್ಲಿ ʼಕೇಸರಿ ಬಟ್ಟೆ ತೊಟ್ಟ ಸ್ವಾಮಿಗಳು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ.. ಆದರೆ ಚಿತ್ರದಲ್ಲಿ ತೊಟ್ಟ ಕೇಸರಿ ಬಟ್ಟೆ ಅಲ್ಲ.ʼ ಇಂದೋರ್‌ನಲ್ಲಿ ಪ್ರತಿಭಟನಾಕಾರರು ಶಾರುಖ್ ಖಾನ್ ಅವರ ಪ್ರತಿಕೃತಿ ದಹಿಸಿದರು. ‘ಪಠಾಣ್‌’ ನಿಷೇಧಿಸಬೇಕು ಎಂಬುದು ಅವರ ಬೇಡಿಕೆ.ʼ ಅಂತ ಕಿಡಿಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News