ಬಿಜೆಪಿ ಮುಖಂಡನ ಬರ್ಬರ ಹತ್ಯೆ; ಓರ್ವನಿಗೆ ಗಾಯ

ಮೃತ ವ್ಯಕ್ತಿಯನ್ನು ಸಂದೀಪ್ ಘೋಷ್ ಎಂದು ಗುರುತಿಸಲಾಗಿದ್ದು, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Last Updated : Dec 10, 2018, 11:21 AM IST
ಬಿಜೆಪಿ ಮುಖಂಡನ ಬರ್ಬರ ಹತ್ಯೆ; ಓರ್ವನಿಗೆ ಗಾಯ title=

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತ್ತೆ ರಾಜಕೀಯ ಗಲಭೆ ಭುಗಿಲೆದ್ದಿದ್ದು, ದುರ್ಗಾಪುರ ಜಿಲ್ಲೆಯ ಸರಸ್ವತಿಗಂಜ್ ಪ್ರದೇಶದಲ್ಲಿ ಬಿಜೆಪಿ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. 

ಮೃತ ವ್ಯಕ್ತಿಯನ್ನು ಸಂದೀಪ್ ಘೋಷ್ ಎಂದು ಗುರುತಿಸಲಾಗಿದ್ದು, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಲ್ಲಿ ಜೈದೀಪ್ ಬ್ಯಾನರ್ಜಿ ಎಂಬಾತ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಸ್ವತಿಗಂಜ್ ಪ್ರದೇಶದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬೂತ್ ಸಮಿತಿ ಸಭೆಯ ಬಳಿಕ ಹೊರಬಂದ ಬಿಜೆಪಿ ಮುಖಂಡನ ಮೇಲೆ ಗುಂಡು ಹಾರಿಸುವ ಮೂಲಕ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎನ್ನಲಾಗಿದೆ. 

ಘಟನೆ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಲಕ್ಹಾನ್ ಗರೂಯಿ ಆಗ್ರಹಿಸಿದ್ದಾರೆ. 

Trending News