ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಪೇಂದ್ರ ಕುಶ್ವಾಹಾ

ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ರಾಷ್ಟ್ರೀಯ ಲೋಕ ಸಮಾತಾ ಪಕ್ಷದ (ಆರ್ಎಲ್ಪಿ) ಮುಖಂಡ ಉಪೇಂದ್ರ ಕುಶ್ವಾಹ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಈಗ ಈ ಸುದ್ದಿಯನ್ನು ಎಎನ್ಐ ಸುದ್ದಿ ಸಂಸ್ಥೆ ಧೃಡಿಕರಿಸಿದೆ. 

Last Updated : Dec 10, 2018, 01:56 PM IST
ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಪೇಂದ್ರ ಕುಶ್ವಾಹಾ  title=

ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ರಾಷ್ಟ್ರೀಯ ಲೋಕ ಸಮಾತಾ ಪಕ್ಷದ (ಆರ್ಎಲ್ಪಿ) ಮುಖಂಡ ಉಪೇಂದ್ರ ಕುಶ್ವಾಹ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಈಗ ಈ ಸುದ್ದಿಯನ್ನು ಎಎನ್ಐ ಸುದ್ದಿ ಸಂಸ್ಥೆ ಧೃಡಿಕರಿಸಿದೆ. 

ಉಪೇಂದ್ರ ಕುಶ್ವಾಹಾ ತಮ್ಮ ರಾಜೀನಾಮೆ ಪತ್ರವನ್ನು ಪಿಎಂಒ ಅನುಮೋದನೆಗಾಗಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯದಲೇ ಅವರು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವನ್ನು ತೊರೆಯಲು ನಿರ್ಧರಿಸಿದ್ದೇಕೆ ಎನ್ನುವುದರ ಕುರಿತಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

2019 ರ ಲೋಕಸಭೆಯಲ್ಲಿ  ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಬಿಜೆಪಿ ನಾಯಕತ್ವದ ಬಗ್ಗೆ ಕುಶ್ವಾಹಾ ಅಸಮಾಧಾನಗೊಂಡಿದ್ದರು. ಈ ಹಿನ್ನಲೆಯಲ್ಲಿ ಅವರು ಎನ್ಡಿಎ ಮೈತ್ರಿಕೂಟಗಳ ಪ್ರಮುಖ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದರು.ಎಲ್ಲ ಐದು ರಾಜ್ಯಗಳ ಚುನಾವಣಾ ಫಲಿತಾಂಶಕ್ಕೂ ಮುನ್ನ ಎನ್ಡಿಎಕೂಟದ ಎಲ್ಲ ಮಿತ್ರ ಪಕ್ಷಗಳ ಸಭೆಯನ್ನು ಕರೆಯಲಾಗಿತ್ತು.

Trending News