ಹಲವು ಪ್ರಥಮಗಳಿಗೆ ಸಾಕ್ಷಿಯಾಗುತ್ತಿದೆ ಧ್ರುವ ಸರ್ಜಾ ಮತ್ತು ಎಪಿ ಅರ್ಜುನ್ ಅವರ 'ಮಾರ್ಟಿನ್'

ಧ್ರುವ ಸರ್ಜಾ ನಾಯಕರಾಗಿರುವ ‘ಮಾರ್ಟಿನ್‌’ಸಿನಿಮಾ ಒಂದೇ ಫೈಟ್‌ಗೆ ಭಾರತೀಯ ಚಿತ್ರರಂಗದ ಖ್ಯಾತ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ. ಹೌದು, ಮಾರ್ಟಿನ್‌ ಚಿತ್ರದ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ.

Written by - YASHODHA POOJARI | Last Updated : Feb 14, 2023, 01:42 PM IST
  • ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ 'ಮಾರ್ಟಿನ್
  • ಧ್ರುವ ಸರ್ಜಾ ನಾಯಕರಾಗಿರುವ ಸಿನಿಮಾ‘ಮಾರ್ಟಿನ್‌’
  • ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.
ಹಲವು ಪ್ರಥಮಗಳಿಗೆ ಸಾಕ್ಷಿಯಾಗುತ್ತಿದೆ ಧ್ರುವ ಸರ್ಜಾ ಮತ್ತು ಎಪಿ ಅರ್ಜುನ್ ಅವರ  'ಮಾರ್ಟಿನ್' title=

ಬೆಂಗಳೂರು : ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ 'ಮಾರ್ಟಿನ್'. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಸಿನಿಮಾ ಅಂದ್ರೆ ಅಲ್ಲಿ ಮನರಂಜನೆಗೆ ಕೊರತೆ ಇರುವುದಿಲ್ಲ. ಇಡೀ ಕುಟುಂಬ ಕುಳಿತು ನೋಡೋ ಸಿನಿಮಾಗಳನ್ನೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಾಡೋದು. ವರ್ಷಕ್ಕೆ ಒಂದು ಸಿನಿಮಾ ಆದ್ರೂ ಪರವಾಗಿಲ್ಲ ಒಳ್ಳೆ ಪ್ರಾಜೆಕ್ಟ್ ಗಳನ್ನ ಮಾತ್ರ ಕೈಗೆ ಎತ್ತಿಕೊಳ್ಳುತ್ತಾರೆ ಧ್ರುವ.

ಧ್ರುವ ಸರ್ಜಾ ನಾಯಕರಾಗಿರುವ ‘ಮಾರ್ಟಿನ್‌’ ಸಿನಿಮಾದಲ್ಲಿ ಒಂದೇ ಫೈಟ್‌ಗೆ ಭಾರತೀಯ ಚಿತ್ರರಂಗದ ಖ್ಯಾತ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ. ಹೌದು, ಮಾರ್ಟಿನ್‌ ಚಿತ್ರದ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿರೋದು ಎಂದು ಹೇಳಲಾಗುತ್ತಿದೆ.
ಸಿನಿಮಾದ ಕ್ಲೈಮ್ಯಾಕ್ಸ್ ಸೀಕ್ವೆನ್ಸ್‌ಗಾಗಿ 40 ದಿನಗಳ ಚಿತ್ರೀಕರಣ ನಡೆಸಲಾಗಿದೆ.  ಚೇಸ್ ದೃಶ್ಯಗಳಿಗೆ ಕೊರಿಯೋಗ್ರಫಿ ಮಾಡಲು ರವಿವರ್ಮ ಮತ್ತು ಫೈಟ್ ದೃಶ್ಯಗಳಿಗೆ ರಾಮ್-ಲಕ್ಷ್ಮಣ್ ಜೋಡಿಯನ್ನು ನಿರ್ದೇಶಕ ಅರ್ಜುನ್ ಬಳಸಿಕೊಂಡಿದ್ದಾರೆ. ಅದ್ಧೂರಿ ಸೆಟ್‌ನಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. 

ಇದನ್ನೂ ಓದಿ ಪೂಜಾ ಹೆಗ್ಡೆ ಹಾಗೂ ಸಲ್ಮಾನ್ ಖಾನ್ ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ

ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜೊತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕ್ಲೈಮ್ಯಾಕ್ಸ್‌ನ ಚಿತ್ರೀಕರಣಕ್ಕಾಗಿ ಚಿತ್ರತಂಡ ಕೊಮ್ಮಘಟ್ಟದಲ್ಲಿ ಬೃಹತ್‌ ಸೆಟ್‌ ಹಾಕಿ ಚಿತ್ರೀಕರಣ ಮಾಡಿ ಮುಗಿಸಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ಕೆಲಸ ಬಹುತೇಕ ಮುಗಿದಿದ್ದು, ಉಳಿದ ವಿಚಾರಗಳನ್ನ ಚಿತ್ರತಂಡ ಯಾವಾಗ ರಿವಿಲ್ ಮಾಡುತ್ತದೆ ಅನ್ನೋದನ್ನ ಕಾದು ನೋಡಬೇಕು. 

ಇದನ್ನೂ ಓದಿ : ದೇಶದ ಪ್ರಧಾನಿ ಮೋದಿಯವರ ಜೊತೆ ಸಮಯ ಕಳೆದ ಬಗ್ಗೆ ರಿಷಬ್ ಶೆಟ್ಟಿ ಮತ್ತು ಯಶ್ ಹೇಳಿದ್ದೇನು?

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News