Samyukta Hornad : ಪ್ರಾಣಿಗಳ ʼಪ್ರಾಣʼ ರಕ್ಷಣೆಗೆ ಮುಂದಾದ ನಟಿ ಸಂಯುಕ್ತ ಹೊರನಾಡು..!

ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ʼಪ್ರಾಣ ಅನಿಮಲ್ ಫೌಂಡೇಶನ್ʼ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿಯನ್ನು ಕೂಡ ತೆರೆದಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಂದು ಅಂಬುಲೆನ್ಸ್ ಹಾಗೂ ಸಹಾಯವಾಣಿಗೆ ಚಾಲನೆ ನೀಡಿದರು.

Written by - YASHODHA POOJARI | Edited by - Krishna N K | Last Updated : Feb 17, 2023, 04:46 PM IST
  • ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
  • ʼಪ್ರಾಣ ಅನಿಮಲ್ ಫೌಂಡೇಶನ್ʼ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ.
  • ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಂದು ಅಂಬುಲೆನ್ಸ್ ಹಾಗೂ ಸಹಾಯವಾಣಿಗೆ ಚಾಲನೆ ನೀಡಿದರು.
Samyukta Hornad : ಪ್ರಾಣಿಗಳ ʼಪ್ರಾಣʼ ರಕ್ಷಣೆಗೆ ಮುಂದಾದ ನಟಿ ಸಂಯುಕ್ತ ಹೊರನಾಡು..! title=

Samyukta Hornad : ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟಿ ಸಂಯುಕ್ತಾ ಹೊರನಾಡು ಈಗ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ʼಪ್ರಾಣ ಅನಿಮಲ್ ಫೌಂಡೇಶನ್ʼ ಮೂಲಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಾಣಿಗಳಿಗೆ ಆಂಬುಲೆನ್ಸ್ ಸೇವೆ ನೀಡಿದ್ದಾರೆ ಹಾಗೂ ಈ ಕುರಿತು ಮಾಹಿತಿ ನೀಡಲು ಸಹಾಯವಾಣಿಯನ್ನು ಕೂಡ ತೆರೆದಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಂದು ಅಂಬುಲೆನ್ಸ್ ಹಾಗೂ ಸಹಾಯವಾಣಿಗೆ ಚಾಲನೆ ನೀಡಿದರು.

ಇತ್ತೀಚೆಗೆ ಬನಶಂಕರಿಯ ಸುಚಿತ್ರ ಫಿಲಂ ಸೊಸೈಟಿಯಲ್ಲಿ ʼಪ್ರಾಣ ಅನಿಮಲ್ ಫೌಂಡೇಶನ್ʼ ಸಂಸ್ಥೆಯಿಂದ ಪ್ರಾಣಿಗಳ ಆ್ಯಂಬುಲೆನ್ಸ್ 24×7 ಮತ್ತು ಪ್ರಾಣಿಗಳ ರಕ್ಷಣೆಯ ಸಹಾಯವಾಣಿ ಸೇವೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಚಾಲನೆ ನೀಡಿದರು. ಪ್ರಕಾಶ್ ಬೆಳವಾಡಿ, ಸುಧಾ ನಾರಾಯಣ್, ಅನಿರುದ್ಧ, ಸುಧಾ ಬೆಳವಾಡಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

No description available.

ಇದನ್ನೂ ಓದಿ: Gowli Official Trailer: ‘ಗೌಳಿ’ಯ ರಗಡ್ ಅವತಾರದಲ್ಲಿ ಮತ್ತೆ ಶ್ರೀನಗರ ಕಿಟ್ಟಿ ಕಮ್‍ಬ್ಯಾಕ್!  

ಪ್ರಾಣಿಗಳ ಮೇಲೆ ನಾವು ಹೆಚ್ಚು ಪ್ರೀತಿಯಿಂದ ಮಾತನಾಡಿದಾಗ ಕೆಲವರು ಹುಚ್ಚರು ಎಂದುಕೊಳ್ಳಬಹುದು. ಆದರೆ ನನಗೆ ಮೊದಲಿನಿಂದಲೂ ಪ್ರಾಣಿ ಪ್ರೀತಿ  ಹೆಚ್ಚು. ಈಗಿನ ಪೀಳಿಗೆಯ ಯುವಕ- ಯುವತಿಯರಿಗೂ ಪ್ರಾಣಿಗಳ ಮೇಲಿನ ಪ್ರೀತಿ ಹೆಚ್ಚಾಗುತ್ತಿದೆ. ಇದು ಸಂತೋಷ ಪಡುವ ವಿಚಾರ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ನಮ್ಮ ಅಜ್ಜಿ ಭಾರ್ಗವಿ ನಾರಾಯಣ್ ಅವರು ನಿಧನರಾಗಿದ್ದು ಫೆ.14ರಂದು. ಅಜ್ಜಿಯ ನೆನಪಿನಲ್ಲಿ ಈ ಕಾರ್ಯಕ್ರಮ ನಡೆಸಲು ನನಗೆ ಅವರೆ ಅವಕಾಶ ನೀಡಿದ್ದಾರೆ. ಪ್ರಾಣಿಗಳು ತುಂಬಾ ಪ್ರೀತಿ ಕೊಡುತ್ತದೆ. ಅವುಗಳ ನೋವನ್ನು ಕಡಿಮೆ ಮಾಡುವುದೆ "ಪ್ರಾಣ ಅನಿಮಲ್ ಫೌಂಡೇಶನ್" ನ ಉದ್ದೇಶ. ಸದ್ಯಕ್ಕೆ ಬೆಂಗಳೂರಿನಲ್ಲಿ "ಪ್ರಾಣ" ಅಂಬುಲೆನ್ಸ್‌ 24×7 ಕೆಲಸ ಮಾಡುತ್ತದೆ. ಅದರೊಂದಿಗೆ ಪ್ರಾಣಿಗಳ ನೆರವಿಗೆ ಸಹಾಯವಾಣಿ ಸಹ ಸ್ಥಾಪಿಸಿದ್ದೇವೆ. ಮುಂದೆ ಇದನ್ನು ವಿಸ್ತರಿಸುವ ಉದ್ದೇಶವೂ ಇದೆ.  ಪ್ರಾಣ ಫೌಂಡೇಶನ್ ಆರಂಭಿಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು ಪ್ರಾಣ ಅನಿಮಲ್ ಫೌಂಡೇಶನ್ ಸ್ಥಾಪಕಿ ಸಂಯುಕ್ತ ಹೊರನಾಡು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News