India squad for ODI series: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಅಲ್ಲ, ಈ ಆಟಗಾರನಿಗೆ ಲಭಿಸಿದ ನಾಯಕತ್ವ!

India squad announced for ODI series: ತಂಡವನ್ನು ಘೋಷಿಸುವುದರ ಜೊತೆಗೆ, ಸರಣಿಯ ಆರಂಭಿಕ ಏಕದಿನದಲ್ಲಿ ರೋಹಿತ್ ಶರ್ಮಾ ನಾಯಕತ್ವವನ್ನು ವಹಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಕೌಟುಂಬಿಕ ಕಾರಣಗಳಿಂದಾಗಿ ತಂಡದ ಭಾಗವಾಗಲು ಸಾಧ್ಯವಾಗುವುದಿಲ್ಲ. ಈ ಅವಧಿಯಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.

Written by - Bhavishya Shetty | Last Updated : Feb 19, 2023, 06:06 PM IST
    • ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟ
    • ಗೆಲುವು ಸಾಧಿಸಿದ ಕೆಲವೇ ಗಂಟೆಗಳ ನಂತರ ಬಿಸಿಸಿಐ ತಂಡವನ್ನು ಪ್ರಕಟಿಸಿದೆ
    • ಆರಂಭಿಕ ಏಕದಿನ ಪಂದ್ಯದಲ್ಲಿ ಓಪನರ್ ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳುವುದಿಲ್ಲ
India squad for ODI series: ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಅಲ್ಲ, ಈ ಆಟಗಾರನಿಗೆ ಲಭಿಸಿದ ನಾಯಕತ್ವ! title=
Team India Announced for ODI Series

India squad announced for ODI series: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾನುವಾರ ನಡೆದ ದೆಹಲಿ ಟೆಸ್ಟ್‌ನಲ್ಲಿ ಗೆಲುವು ಸಾಧಿಸಿದ ಕೆಲವೇ ಗಂಟೆಗಳ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಸರಣಿಯ ಆರಂಭಿಕ ಏಕದಿನ ಪಂದ್ಯದಲ್ಲಿ ಓಪನರ್ ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳುವುದಿಲ್ಲ. ಬದಲಾಗಿ ಈ ಆಟಗಾರನಿಗೆ ನೀಡಲಾಗಿದೆ.

ಇದನ್ನೂ ಓದಿ: Delhi Test: ರೋಹಿತ್ ಬತ್ತಳಿಕೆಯಲ್ಲಿದ್ದ ಈ ಅಪಾಯಕಾರಿ ಗೇಮ್ ಚೇಂಜರ್: ಈತನ ತಂತ್ರಕ್ಕೆ ಸಿಲುಕಿ ಒದ್ದಾಡಿದ ಕಾಂಗಾರು ಪಡೆ!

ತಂಡವನ್ನು ಘೋಷಿಸುವುದರ ಜೊತೆಗೆ, ಸರಣಿಯ ಆರಂಭಿಕ ಏಕದಿನದಲ್ಲಿ ರೋಹಿತ್ ಶರ್ಮಾ ನಾಯಕತ್ವವನ್ನು ವಹಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಕೌಟುಂಬಿಕ ಕಾರಣಗಳಿಂದಾಗಿ ತಂಡದ ಭಾಗವಾಗಲು ಸಾಧ್ಯವಾಗುವುದಿಲ್ಲ. ಈ ಅವಧಿಯಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ರವೀಂದ್ರ ಜಡೇಜಾ ಅವರಿಗೂ ಸ್ಥಾನ ನೀಡಲಾಗಿದೆ. ಆದರೆ ಅಶ್ವಿನ್ ತಂಡದ ಭಾಗವಾಗಿಲ್ಲ. ಸ್ಪಿನ್ನರ್‌ಗಳಾದ ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಾಲ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಪಂದ್ಯದ ಮಧ್ಯದಲ್ಲೇ Virat Kohliಗೆ ಪಾರ್ಸೆಲ್ ನಲ್ಲಿ ಬಂದಿದ್ದೇನು ಗೊತ್ತಾ? ರಹಸ್ಯ ಬಹಿರಂಗಪಡಿಸಿದ ದ್ರಾವಿಡ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ:

ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕತ್.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News