ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಸುವುದು ಭಾಜಪ ಸರ್ಕಾರದ ಗುರಿ: ಸಿಎಂ ಬೊಮ್ಮಾಯಿ

ರಾಜ್ಯದ 53 ಲಕ್ಷ ರೈತ ಕುಟುಂಬಗಳಿಗೆ 12 ಸಾವಿರ ಕೋಟಿ ಕಿಸಾನ್ ಸಮ್ಮಾನ ಯೋಜನೆ ತಲುಪಿದೆ. 4481 ಕೋಟಿ ರೂ. ರಾಜ್ಯ ಸರ್ಕಾರದಿಂದ ಪಾವತಿಯಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ರಾಜ್ಯ ಸರ್ಕಾರ ರೈತ ಮಕ್ಕಳಿಗೆ, ರೈತ ಕೂಲಿಕಾರರ, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ.

Written by - Prashobh Devanahalli | Edited by - Bhavishya Shetty | Last Updated : Mar 2, 2023, 06:47 PM IST
    • ಕರ್ನಾಟಕವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಸುವುದು ಭಾಜಪ ಸರ್ಕಾರದ ಗುರಿ
    • ರಾಜ್ಯದ 53 ಲಕ್ಷ ರೈತ ಕುಟುಂಬಗಳಿಗೆ 12 ಸಾವಿರ ಕೋಟಿ ಕಿಸಾನ್ ಸಮ್ಮಾನ ಯೋಜನೆ ತಲುಪಿದೆ
    • ವಿಜಯ ಸಂಕಲ್ಪ ರಥ ಯಾತ್ರೆ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ
ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಸುವುದು ಭಾಜಪ ಸರ್ಕಾರದ ಗುರಿ: ಸಿಎಂ ಬೊಮ್ಮಾಯಿ  title=
Basavaraj Bommai

ಬೆಳಗಾವಿ: ಕರ್ನಾಟಕವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಸುವುದು ಭಾಜಪ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥ ಯಾತ್ರೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ: ಸುದೀರ್ಘ 12 ವರ್ಷಗಳ ಬಳಿಕ ಹೋಳಿ ಹಬ್ಬದ ದಿನ ಗ್ರಹಗಳ ವಿಶೇಷ ಕಾಕತಾಳೀಯ, ಈ ರಾಶಿಗಳ ಭಾಗ್ಯ ಸೂರ್ಯನಂತೆ ಹೊಳೆಯಲಿದೆ!

ರಾಜ್ಯದ 53 ಲಕ್ಷ ರೈತ ಕುಟುಂಬಗಳಿಗೆ 12 ಸಾವಿರ ಕೋಟಿ ಕಿಸಾನ್ ಸಮ್ಮಾನ ಯೋಜನೆ ತಲುಪಿದೆ. 4481 ಕೋಟಿ ರೂ. ರಾಜ್ಯ ಸರ್ಕಾರದಿಂದ ಪಾವತಿಯಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ರಾಜ್ಯ ಸರ್ಕಾರ ರೈತ ಮಕ್ಕಳಿಗೆ, ರೈತ ಕೂಲಿಕಾರರ, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ. ದುಡಿಯುವ ವರ್ಗದ ಕುಶಲಕರ್ಮಿಗಳ ಆರ್ಥಿಕ ಅಭಿವೃದ್ಧಿಗೆ ಕಾಯಕ ಯೋಜನೆ, ಮಹಿಳೆಯರ ಸ್ವಯಂಉದ್ಯೋಗಕ್ಕೆ ಸ್ತ್ರೀ ಸಾಮರ್ಥ್ಯ ಯೋಜನೆ, ಯುವಕರಿಗೆ ಸ್ವಾಮಿ ವಿವೇಕಾನಂದ ಯೋಜನೆ ಜಾರಿಗೊಳಿಸಲಾಗುತ್ತಿದೆ. ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ಯೋಜನೆ, ದುಡಿಯುವ ಮಹಿಳೆಗೆ ಮಾಸಿಕ 1000 ರೂ. ಯೋಜನೆಗಳನ್ನು ರೂಪಿಸಲಾಗಿದೆ. ಸುಮಾರು 30 ಲಕ್ಷ ಮಹಿಳೆಯರಿಗೆ ಈ ಯೋಜನೆಗಳಿಂದ ಲಾಭ ದೊರೆಯಲಿದೆ ಎಂದರು.

ಬೆಳಗಾವಿಯಲ್ಲಿ 12 ಸಾವಿರ ಮರಾಠ ಮಕ್ಕಳಿಗೆ ವಿದ್ಯಾರ್ಥಿ ವೇತನ :

ಕೋವಿಡ್ ನಂತರವೂ ಕರ್ನಾಟಕದ ತಲಾವಾರು ಆದಾಯ 3.54 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ. ಕೋವಿಡ್ ನಂತರ ಸವಾಲುಗಳ ನಡುವೆಯೂ ರಾಜ್ಯದ ಆರ್ಥಿಕತೆಯನ್ನು ಮೇಲೆತ್ತಲಾಗಿದೆ. ಮರಾಠ ನಿಗಮಕ್ಕೆ 100 ಕೋಟಿ ಅನುದಾನ ನೀಡಿ, ಮರಾಠ ಜನರ ಶಿಕ್ಷಣ, ಗಂಗಾಕಲ್ಯಾಣ ಉದ್ಯೋಗಕ್ಕೆ ಬಲ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ 12 ಸಾವಿರ ಮರಾಠ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಗಾಣಿಗರ, ಮಾದಾರ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗುತ್ತಿದೆ. ಎಲ್ಲ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಕಮಲ ಸಂಪೂರ್ಣವಾಗಿ ಅರಳಲಿದೆ ಎಂಬ ವಿಶ್ವಾಸವಿದೆ. ಭಾಜಪದ ಸಂಕಲ್ಪಕ್ಕೆ ಜನರ ಆಶೀರ್ವಾದಬೇಕು ಎಂದರು.

ಬ್ರಿಟೀಷ್ ಸಾಮ್ರಾಜ್ಯದ ವಿರುದ್ಧ ಸಿಡಿದೆದ್ದು ಅವರನ್ನು ಹಿಮ್ಮೆಟಿಸಿದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವರು. ಮನೆಮನೆಗೂ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿದ ಸಂಗೊಳ್ಳಿ ರಾಯಣ್ನನವರ ಶಕ್ತಿ ಅಭೂತಪೂರ್ವವಾದದ್ದು. ದೇಶಕ್ಕಾಗಿ ಹೋರಾಡುವ ಅದೇ ಗುಣಧರ್ಮವನ್ನು ಪ್ರಧಾನಿ ಮೋದಿಯವರು ಹೊಂದಿದ್ದಾರೆ ಎಂದರು.

ಇದನ್ನೂ ಓದಿ:  Jasmin Oil: ಈ ಹೂವಿನ 1 ಲೀಟರ್ ತೈಲದ ಬೆಲೆ ಬರೋಬ್ಬರಿ 4 ಲಕ್ಷ ರೂ.: ಆರೋಗ್ಯ-ವಾಸ್ತುದೋಷಕ್ಕೆ ಹೇಳಿಮಾಡಿಸಿದ ಪರಿಹಾರ!

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಸಿ.ಸಿ ಪಾಟೀಲ್, ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತಿತರರು ಹಾಜರಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News