ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಅಪಘಾತ; ಯುವತಿ ಸಾವು

Belagavi : ದೀರ್ಘ ದಂಡ ನಮಸ್ಕಾರ ಹಾಕುತ್ತಿರುವ ಯುವತಿಯ ತಲೆಮೇಲೆ ಕಾರಿನ ಚಕ್ರ ಹರಿದು ಯುವತಿಯು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.     

Written by - Zee Kannada News Desk | Last Updated : Mar 23, 2023, 04:52 PM IST
  • ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದೆ.
  • ಹರಕೆ ತೀರಿಸುವಾಗ ಕಾರಿನ ಚಕ್ರ ಯುವತಿಯ ತಲೆಯ ಮೇಲೆ ಹರಿದಿದ್ದು,
  • ಯುವತಿಯು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ದೀರ್ಘ ದಂಡ ನಮಸ್ಕಾರ ಸಲ್ಲಿಸುವಾಗ ಅಪಘಾತ; ಯುವತಿ ಸಾವು  title=

Athani : ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದೆ. 

ಮೃತ ಪಟ್ಟ ಯುವತಿಯು ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ಹರಕೆ ತೀರಿಸುವಾಗ ಕಾರಿನ ಚಕ್ರ ಯುವತಿಯ ತಲೆಯ ಮೇಲೆ ಹರಿದಿದ್ದು, ಯುವತಿಯು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ದುರ್ಮರಣ ಹೊಂದಿದ ಈಕೆಯ ಹೆಸರು ಐಶ್ವರ್ಯ.

ಇದನ್ನೂ ಓದಿ-ವಯಸ್ಸಾದ ಗೋವುಗಳ ರಕ್ಷಣೆ ಸರ್ಕಾರ ಮತ್ತು ಸಮಾಜದ ಜವಾಬ್ದಾರಿ : ಸಿಎಂ ಬೊಮ್ಮಾಯಿ 

ಯುವತಿಯು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಿವಾಸಿಯಾಗಿದ್ದು, 22 ವರ್ಷ ವಯಸ್ಸು.  ಈ ಅಪಘಾತದ ವಿಚಾರವಾಗಿ ಅಥಣಿ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳಕ್ಕೆ ಬಂದು ಕಾರು ಚಾಲಕನನ್ನು ಬಂಧಿಸಿದ್ದಾರೆ. 

ಇದನ್ನೂ ಓದಿ-ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News