ಚುನಾವಣೆ ಹೊತ್ತಲ್ಲಿ ದಾಖಲೆಯಿಲ್ಲದ ವಿದೇಶಿ ಕರೆನ್ಸಿ ಸೀಜ್ ಮಾಡಿದ ಬನಶಂಕರಿ ಪೊಲೀಸರು

ಬೆಂಗಳೂರು : ಚುನಾವಣೆ ಹೊತ್ತಲ್ಲಿ ಕುರುಡು ಕಾಂಚಾಣ ಸದ್ದು ಮಾಡಲಾರಂಭಿಸಿದೆ. ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಶಿವಕುಮಾರ್ ಹಾಗೂ ಸಂದೀಪ್ ಎಂಬುವವರನ್ನ ಭಾನುವಾರ ರಾತ್ರಿ ಬನಶಂಕರಿಯ ಯಾರಬ್ ನಗರ ಚೆಕ್ ಪೋಸ್ಟಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು 5.33 ಲಕ್ಷ ರೂ ವಿದೇಶಿ ಕರೆನ್ಸಿ ಜಪ್ತಿ ಮಾಡಿದ್ದಾರೆ. 

Written by - Zee Kannada News Desk | Last Updated : Apr 4, 2023, 01:24 PM IST
  • ಚುನಾವಣೆ ಹೊತ್ತಲ್ಲಿ ಕುರುಡು ಕಾಂಚಾಣ ಸದ್ದು ಮಾಡಲಾರಂಭಿಸಿದೆ.
  • ಕಾರಿನಲ್ಲಿದ್ದ ಕಂದು ಬಣ್ಣದ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ.
  • ನಂತರ ವಿಚಾರಣೆ ನಡೆಸಿ ಠಾಣಾ ಜಾಮೀನಿನ ಆಧಾರದಲ್ಲಿ ಇಬ್ಬರನ್ನೂ ಬಿಡುಗಡೆಗೊಳಿಸಿದ್ದಾರೆ.
ಚುನಾವಣೆ ಹೊತ್ತಲ್ಲಿ ದಾಖಲೆಯಿಲ್ಲದ ವಿದೇಶಿ ಕರೆನ್ಸಿ ಸೀಜ್ ಮಾಡಿದ ಬನಶಂಕರಿ ಪೊಲೀಸರು title=

ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಬರುತ್ತಿದ್ದ ಆರೋಪಿಗಳನ್ನ ಯಾರಬ್ ನಗರದ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿದ್ದ ಪೊಲೀಸರು ತಡೆದು ಪರಿಶೀಲಿಸಿದಾಗ ಕಾರಿನಲ್ಲಿದ್ದ ಕಂದು ಬಣ್ಣದ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ. 

ಇದನ್ನೂ ಓದಿ-Corona New Wave: ಕೊರೊನಾ ಪ್ರಕರಣಗಳಲ್ಲಿ ಭಾರೀ ಹೆಚ್ಚಳ.. ಭಾರತದಲ್ಲಿ ಮತ್ತೆ ತಲ್ಲಣ ಸೃಷ್ಟಿಸಲಿದ್ಯಾ ಕೋವಿಡ್‌ ಹೊಸ ಅಲೆ? 

ಹಣದ ಸಹಿತ ಇಬ್ಬರು ಆರೋಪಿಗಳನ್ನ ಬಂಧಿಸಿದ ಬನಶಂಕರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ವಿಚಾರಣೆ ನಡೆಸಿ ಠಾಣಾ ಜಾಮೀನಿನ ಆಧಾರದಲ್ಲಿ ಇಬ್ಬರನ್ನೂ ಬಿಡುಗಡೆಗೊಳಿಸಿದ್ದಾರೆ.

ಇದನ್ನೂ ಓದಿ-Viral Video: ಪ್ರಿಯಕರನ ಜೊತೆ ಮದುವೆ ಮಾಡುವಂತೆ ಪೊಲೀಸ್ ಠಾಣೆಯಲ್ಲಿ ವಧುವಿನ ರಂಪಾಟ! 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News