Manipur Clash: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಎರಡು ಸಮುದಾಯಗಳ ಮಧ್ಯೆ ಭಾರಿ ಘರ್ಷಣೆ

Manipur Communal Clash: ಮಣಿಪುರದ ರಾಜಧಾನಿ ಇಂಫಾಲ್‌ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಭಾರಿ ಘರ್ಷಣೆ ಸಂಭವಿಸಿದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಈ ಘರ್ಷಣೆ ಆರಂಭಗೊಂಡಿದೆ. ಈ ಪ್ರದೇಶದಲ್ಲಿ ಬೆಂಕಿ ಹಚ್ಚಿದ ವರದಿಗಳ ನಡುವೆ ಮತ್ತೆ ಕರ್ಫ್ಯೂ ವಿಧಿಸಲಾಗಿದೆ. ಒಂದು ತಿಂಗಳಿಗೂ ಹೆಚ್ಚು ಕಾಲ ಮಣಿಪುರದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಮುದಾಯಗಳ ನಡುವೆ ಘರ್ಷಣೆಗಳು ನಡೆಯುತ್ತಲೇ ಇದೆ.  

Written by - Nitin Tabib | Last Updated : May 22, 2023, 05:46 PM IST
  • ಮೀಸಲು ಅರಣ್ಯ ಭೂಮಿಯಿಂದ ಕುಕಿ ಗ್ರಾಮಸ್ಥರನ್ನು ಹೊರಹಾಕುವ ಯತ್ನಗಳ ಕಾರಣ ಹಲವಾರು ಘರ್ಷಣೆಗಳು ಸಂಭವಿಸಿವೆ, ಇದು ಹಲವಾರು ಸಣ್ಣ ಆಂದೋಲನಗಳಿಗೆ ಕಾರಣವಾಗಿದೆ.
  • ಇದಲ್ಲದೆ, ರಾಜ್ಯದ ಜನಸಂಖ್ಯೆಯ ಶೇಕಡಾ 64 ರಷ್ಟು ಜನರು ಮೈಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
  • ಅಧಿಸೂಚಿತ ಗುಡ್ಡಗಾಡು ಪ್ರದೇಶಗಳಲ್ಲಿ ಆದಿವಾಸಿಗಳಲ್ಲದವರಿಗೆ ಭೂಮಿ ಖರೀದಿಸಲು ಅವಕಾಶವಿಲ್ಲದ ಕಾರಣ ಅವರು ರಾಜ್ಯದ ಶೇ.10ರಷ್ಟು ಪ್ರದೇಶವನ್ನು ಆಕ್ರಮಿಸಿಕೊಂಡಿದ್ದಾರೆ.
Manipur Clash: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಎರಡು ಸಮುದಾಯಗಳ ಮಧ್ಯೆ ಭಾರಿ ಘರ್ಷಣೆ title=

Communal Clash In Manipur: ಸೋಮವಾರ ಮಧ್ಯಾಹ್ನ ಮಣಿಪುರ ಮತ್ತೊಮ್ಮೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಇಂಫಾಲ್ ಪೂರ್ವದಲ್ಲಿ, ಎರಡು ಸಮುದಾಯಗಳ ಮಧ್ಯೆ ಇದೀಗ ಘರ್ಷಣೆ ಸಂಭವಿಸಿದ್ದು, ನಂತರ ಹಿಂಸಾಚಾರ ಭುಗಿಲೆದ್ದಿದೆ. ದುಷ್ಕರ್ಮಿಗಳು ಖಾಲಿ ಮನೆಗಳಿಗೆ ನುಗ್ಗಿ ಬೆಂಕಿ ಇಟ್ಟಿದ್ದಾರೆ. ಇದಲ್ಲದೆ ಶಿಬಿರದಲ್ಲಿ ಮಲಗಿದ್ದವರ ಮೇಲೂ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ರಾಜ್ಯದ ರಾಜಧಾನಿ ಇಂಫಾಲ್‌ನ ನ್ಯೂ ಚೆಕಾನ್ ಪ್ರದೇಶದಲ್ಲಿ ಮೈತೆ ಮತ್ತು ಕುಕಿ ಸಮುದಾಯಗಳ ನಡುವೆ ಈ ಮಾರಾಮಾರಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯ ಮಾರುಕಟ್ಟೆಯಲ್ಲಿ ಈ ಘರ್ಷಣೆ ಆರಂಭಗೊಂಡಿದ್ದು, ಈ ಪ್ರದೇಶದಲ್ಲಿ ಬೆಂಕಿ ಹಚ್ಚಿದ ವರದಿಗಳ ನಡುವೆ ಮತ್ತೆ ಕರ್ಫ್ಯೂ ವಿಧಿಸಲಾಗಿದೆ. ಒಂದು ತಿಂಗಳಿಗೂ ಹೆಚ್ಚು ಕಾಲ ಮಣಿಪುರದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಮುದಾಯಗಳ ನಡುವೆ ಘರ್ಷಣೆಗಳು ನಡೆಯುತ್ತಲೇ ಇವೆ ಎಂಬುದು ಇಲ್ಲಿ ಉಲ್ಲೇಖನೀಯ.

ದೀರ್ಘಕಾಲದ ಹಿಂಸೆ
ಈ ತಿಂಗಳ ಆರಂಭದಲ್ಲಿ ಮಣಿಪುರದಲ್ಲಿ ಮೇ 3 ರಂದು ಮೇಟಿಗಳಿಗೆ ಪರಿಶಿಷ್ಟ ಪಂಗಡದ ಸ್ಥಾನಮಾನದ ಬೇಡಿಕೆಯನ್ನು ಪ್ರತಿಭಟಿಸಿ ಬುಡಕಟ್ಟು ಜನಾಂಗದವರು ಒಗ್ಗಟ್ಟಿನ ಮೆರವಣಿಗೆಯನ್ನು ಕೈಗೊಂಡ ನಂತರ ಘರ್ಷಣೆಗಳು ಸಂಭವಿಸುತ್ತಿವೆ. ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಈ ಹಿಂಸಾಚಾರದಲ್ಲಿ 70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಬೆಂಕಿಗೆ ಆಹುತಿಯಾಗಿದೆ, ಸಾವಿರಾರು ಜನರು ಸರ್ಕಾರಿ ಶಿಬಿರಗಳಲ್ಲಿ ಆಶ್ರಯ ಪಡೆಯಬೇಕಾದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ-Jaish e Mohammed ಉಗ್ರ ಸಂಘಟನೆಗೆ ಸೇರಿದ ಕುಖ್ಯಾತ ಭಯೋತ್ಪಾದಕನ ಬಂಧನ, ದೊಡ್ಡ ದಾಳಿಯ ಸಂಚು ವಿಫಲ

ಆದಿವಾಸಿಗಳು ಏಕೆ ಆಕ್ರೋಶಗೊಂಡಿದ್ದಾರೆ
 ಮೀಸಲು ಅರಣ್ಯ ಭೂಮಿಯಿಂದ ಕುಕಿ ಗ್ರಾಮಸ್ಥರನ್ನು ಹೊರಹಾಕುವ ಯತ್ನಗಳ ಕಾರಣ ಹಲವಾರು ಘರ್ಷಣೆಗಳು ಸಂಭವಿಸಿವೆ, ಇದು ಹಲವಾರು ಸಣ್ಣ ಆಂದೋಲನಗಳಿಗೆ ಕಾರಣವಾಗಿದೆ. ಇದಲ್ಲದೆ, ರಾಜ್ಯದ ಜನಸಂಖ್ಯೆಯ ಶೇಕಡಾ 64 ರಷ್ಟು ಜನರು ಮೈಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅಧಿಸೂಚಿತ ಗುಡ್ಡಗಾಡು ಪ್ರದೇಶಗಳಲ್ಲಿ ಆದಿವಾಸಿಗಳಲ್ಲದವರಿಗೆ ಭೂಮಿ ಖರೀದಿಸಲು ಅವಕಾಶವಿಲ್ಲದ ಕಾರಣ ಅವರು ರಾಜ್ಯದ ಶೇ.10ರಷ್ಟು ಪ್ರದೇಶವನ್ನು ಆಕ್ರಮಿಸಿಕೊಂಡಿದ್ದಾರೆ. ಅವರನ್ನು ಪರಿಶಿಷ್ಟ ಜಾತಿಗೆ ಸೇರಿಸಿದರೆ ಗುಡ್ಡಗಾಡು ಪ್ರದೇಶದಲ್ಲಿ ಭೂಮಿ ಖರೀದಿಸಲು ಸಾಧ್ಯವಾಗುತ್ತದೆ. ಈ ಕಾರಣದಿಂದ ಆದಿವಾಸಿಗಳು ಆಕ್ರೋಶಗೊಂಡಿದ್ದಾರೆ.

ಇದನ್ನೂ ಓದಿ-BJP On Kejriwal: ಇತರರನ್ನು ಭ್ರಷ್ಟರು ಎಂದು ಕರೆಯುವ ಕೇಜ್ರಿವಾಲ್ ಅವರೇ ಇಂದು ತುಂಬಾ ದೊಡ್ಡ ಕರಪ್ಟ್ ಆಗಿದ್ದಾರೆ

ಅರೆಸೈನಿಕ ಪಡೆಗಳು ಮತ್ತು ಸೇನೆಯು ರಾಜ್ಯದಲ್ಲಿ ಗಸ್ತು ತಿರುಗುವ ಮೂಲಕ ನಾಗರಿಕರಿಗೆ ಸಹಾಯ ಮಾಡುವಲ್ಲಿ ನಿರಂತರವಾಗಿವೆ.  ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದು, ಎರಡು ಸಮುದಾಯಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News