" ಅಕ್ರಮ ಮರಳು, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಿ" : ಸಚಿವ ಪ್ರಿಯಾಂಕ್ ಖರ್ಗೆ

ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮರಳು ಸಂಗ್ರಹಣೆ ಮತ್ತು ಮಾರಾಟ, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ.

Written by - Zee Kannada News Desk | Last Updated : Jun 20, 2023, 10:57 PM IST
  • ಅಕ್ರಮ ಮರಳು ಮಾಫಿಯಾಗಿ ಇತ್ತೀಚೆಗೆ ನೆಲೋಗಿ ಪೊಲೀಸ್ ಠಾಣೆಯ ಮಯೂರ್ ಚವ್ಹಾಣ್ ಸಾವನಪ್ಪಿದ್ದು, ಅವರು ಕುಟಂಬದ ಆಧಾರ ಸ್ಥಂಬವೆ ಇಲ್ಲದಂತಾಗಿದೆ
  • ಇಂದು ಅವರ ಮನೆಗೆ ನಾನು ಹೋಗಿ ಬಂದಿದ್ದೇನೆ. ಒಮ್ಮೆ ಆ ಮನೆಗೆ ಭೇಟಿ ಕೊಟ್ಟು ಬನ್ನಿ, ಆ ಕುಟುಂಬದ ನೋವು ಏನೆಂದು ತಿಳಿಯುತ್ತೆ
  • ನಿಮ್ಮ ಇಲಾಖೆಯ ಓರ್ವ ಸಿಬ್ಬಂದಿ ಮಾಫಿಯಾಗೆ ಬಲಿಯಾಗಿದ್ದಾನೆ
" ಅಕ್ರಮ ಮರಳು, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಿ" : ಸಚಿವ ಪ್ರಿಯಾಂಕ್ ಖರ್ಗೆ title=

ಕಲಬುರಗಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಅಕ್ರಮ ಮರಳು ಸಂಗ್ರಹಣೆ ಮತ್ತು ಮಾರಾಟ, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಧಮ್ಮಿದ್ದರೆ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ, ಪೊಲೀಸ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇನ್ನು ಮುಂದೆ ಅಕ್ರಮ ಮರಳು, ಕಲ್ಲು ಗಣಗಾರಿಕೆ ಕುರಿತು ಯಾವುದೇ ದೂರು ಬಂದಲ್ಲಿ ಪೊಲೀಸ್, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನೆ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಅಕ್ರಮ ಮರಳು ಮಾಫಿಯಾಗಿ ಇತ್ತೀಚೆಗೆ ನೆಲೋಗಿ ಪೊಲೀಸ್ ಠಾಣೆಯ ಮಯೂರ್ ಚವ್ಹಾಣ್ ಸಾವನಪ್ಪಿದ್ದು, ಅವರು ಕುಟಂಬದ ಆಧಾರ ಸ್ಥಂಬವೆ ಇಲ್ಲದಂತಾಗಿದೆ. ಇಂದು ಅವರ ಮನೆಗೆ ನಾನು ಹೋಗಿ ಬಂದಿದ್ದೇನೆ. ಒಮ್ಮೆ ಆ ಮನೆಗೆ ಭೇಟಿ ಕೊಟ್ಟು ಬನ್ನಿ, ಆ ಕುಟುಂಬದ ನೋವು ಏನೆಂದು ತಿಳಿಯುತ್ತೆ. ನಿಮ್ಮ ಇಲಾಖೆಯ ಓರ್ವ ಸಿಬ್ಬಂದಿ ಮಾಫಿಯಾಗೆ ಬಲಿಯಾಗಿದ್ದಾನೆ. ರಾಜಕೀಯ ನಾಯಕರು, ಪೊಲೀಸ್ ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳ ಶ್ರೀರಕ್ಷೆ ಇಲ್ಲದೆ ಇದೆಲ್ಲ ನಡೆಯಲ್ಲ. ಇನ್ನು ಮುಂದೆ ನಡೆಯೋದಿಲ್ಲ. ಇದಕ್ಕೆ ಕಡಿವಾಣ ಹಾಕಲೇಬೇಕು ಎಂದು ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳಿಗೆ ಸಚಿವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ದೇಶದಲ್ಲಿಯೇ ಪ್ರಪ್ರಥಮ ಸುಸಜ್ಜಿತ ತಂತ್ರಜ್ಞಾನದ ಪಾಲಿಕೆ ಕೌನ್ಸಿಲ್ ಸಭಾಂಗಣ

ವಾಹನಗಳನ್ನು ಸೀಜ್ ಮಾಡಿ:

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಅಕ್ರಮ ಮರಳು ಗಣಿಗಾರಿಕೆ, ಕಲ್ಲು ಗಣಿಗಾರಿಕೆಯಲ್ಲಿ ಭಾಗಿಯಾಗುವ ವಾಹನಗಳನ್ನು ಆರ್.ಟಿ.ಓ. ಅಧಿಕಾರಿಗಳು ಸೀಜ್ ಮಾಡಬೇಕು. ರಾಯಲ್ಟಿಕ್ಕಿಂತ ಹೆಚ್ಚಿನ ಟ್ರಿಪ್ ಸಾಗಾಣಿಕೆಯಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ಅಕ್ಕಿ ಸಾಗಾಣಿಕೆ ಮೇಲೂ ನಿಗಾ ಇಡಬೇಕು. ಓವರ್ ಲೋಡೆಡ್ ವಾಹನಗಳನ್ನು ವಶಕ್ಕೆ ಪಡೆಯಬೇಕು. ಸಿಮೆಂಟ್ ಖಾರ್ಖಾನೆಗಳಿಗಡೀ ಸಂಬಂಧ ಪತ್ರ ಬರೆದು ಎಚ್ಚರಿಕೆ ನೀಡಬೇಕು. ಓವರ್ ಲೋಡೆಡ್ ವಾಹನಗಳ ಸಂಚಾರದಿಂದ ರಸ್ತೆ ಹಾಳಾಗುತ್ತಿದೆ ಎಂದರು.

ಸಭೆಯಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ್, ಎಸ್.ಪಿ. ಇಶಾ ಪಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವಾರ್ ಸಿಂಗ್ ಮೀನಾ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಎ.ಸಿ.ಪಿ. ದೀಪನ್ ಎಂ.ಎನ್., ಪ್ರಭಾರಿ ಅಪರ ಜಿಲ್ಲಾಧಿಕಾರಿ ಎಂ.ರಾಚಪ್ಪ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಸುಮಿತ್ರಾ ಎಸ್., ತಾಲೂಕಿನ ತಹಶೀಲ್ದಾರರು, ಪೆÇಲೀಸ್ ಇಲಾಖೆಯ ಡಿ.ಎಸ್ಪಿ., ಸಿ.ಪಿ.ಐ., ಪಿ.ಎಸ್.ಐ., ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳು ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News