ಟ್ರೇಲರ್ ಮೂಲಕ ಗಮನಸೆಳೆದ ಹೊಸಬರ ʻಆರʼ : ಜುಲೈ 28 ರಂದು ಸಿನಿಮಾ ರಿಲೀಸ್

Aura Movie: ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ 'ಆರ'. ಈ ಚಿತ್ರವನ್ನು ಅಶ್ವಿನ್ ವಿಜಯಮೂರ್ತಿ ನಿರ್ದೇಶಿಸಿದ್ದಾರೆ.  

Written by - YASHODHA POOJARI | Last Updated : Jul 13, 2023, 01:58 PM IST
  • ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ
  • ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ 'ಆರ'
  • ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿರುವ ಹೊಸಬರ ಆರ ಸಿನಿಮಾ
ಟ್ರೇಲರ್ ಮೂಲಕ ಗಮನಸೆಳೆದ ಹೊಸಬರ ʻಆರʼ : ಜುಲೈ 28 ರಂದು ಸಿನಿಮಾ ರಿಲೀಸ್  title=

Aura Movie: ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿರುವ ಹೊಸಬರ ಆರ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ 'ಆರ'. ಈ ಚಿತ್ರವನ್ನು ಅಶ್ವಿನ್ ವಿಜಯಮೂರ್ತಿ ನಿರ್ದೇಶಿಸಿದ್ದಾರೆ. ಸಿನಿಮಾ, ಸಂಪೂರ್ಣ ಹೊಸ ಪ್ರತಿಭೆಗಳಿಂದ, ಹೊಸತನದಿಂದ ಕೂಡಿದೆ. ರೋಹಿತ್ ಹಾಗೂ ದೀಪಿಕಾ ಆರಾಧ್ಯ 'ಆರ' ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಚಿತ್ರದ ನಾಯಕ ರೋಹಿತ್ ಬರೆದಿದ್ದು. ಆನಂದ್ ನೀನಾಸಂ ಸತ್ಯ ರಾಜ್ ನಿಖಿಲ್ ಶ್ರೀಪಾದ್ ಪ್ರತೀಕ್ ಲೋಕೇಶ್ ಹಾಗೂ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Sudeep: ಸುದೀಪ್ ಮೇಲಿನ ಆರೋಪಗಳ ಹಿಂದೆ ಸೂರಪ್ಪ ಬಾಬು ಕೈವಾಡ? ವೀರಕಪುತ್ರ ಶ್ರೀನಿವಾಸ ಬಟಾ ಬಯಲು ಮಾಡಿದ್ರು ಆ ಸತ್ಯ.!

ನಿರ್ದೇಶಕ ಅಶ್ವಿನ್ ವಿಜಯಮೂರ್ತಿ ಮಾತನಾಡಿ, ಒಬ್ಬ ಹುಡುಗನ ಜರ್ನಿ ಕಥೆ ಇದು. ಆ ಜರ್ನಿಯಲ್ಲಿ ಅವನು ಆಧ್ಯಾತ್ಮಿಕವಾಗಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ. ಅದು ಯಾವುದೇ ಮುಖಾಂತರವಾಗಿಯಾದರು ಬರಬಹುದು. ಹೆಣ್ಣಿನ ಮೂಲಕವಾದರೂ ಬರಬಹುದು. ದುಡ್ಡಿನ ಮೂಲಕವಾದರು ಬರಬಹುದು. ಸಂಬಂಧಗಳ ಮೂಲಕವಾದರ ಬರಬಹುದು. ನಮ್ಮ ಜೀವನದಲ್ಲಿ ಯಾರೊಬ್ಬರಾದರೂ ಬಂದರು. ಅವರು ತೋರಿಸಿಕೊಳ್ಳಲು ಬರುತ್ತಾರೆ. ತಿಳಿಸಿಕೊಡಲು ಬರ್ತಾರೆ. ಈ ಸವಾಲುಗಳನ್ನು ಎದುರಿಸಿ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಾರಾ ಅನ್ನೋದು ಕಥೆ. ಇದನ್ನು ಕಮರ್ಷಿಯಲ್ ಆಗಿ ಆಧ್ಯಾತ್ಮಿಕವಾಗಿ ತೋರಿಸಲಾಗಿದೆ ಎಂದರು.

'ಆರ' ಎಂಬ ಯುವಕನ ಸುತ್ತ ಹೆಣೆದ ಕಥೆಯಿದು. ವಿಧಿಯ ಜೊತೆ ಸೇರಿ ಸಂರಕ್ಷಣೆಗಾಗಿ ಹೋರಾಡುವ ಸ್ಟೋರಿ ಚಿತ್ರದಲ್ಲಿ ಇದೆ. ಚಿತ್ರದ ಬಹುತೇಕ ಚಿತ್ರೀಕರಣ ಉಡುಪಿಯಲ್ಲಿ ನಡೆದಿದೆ. ಚಿತ್ರದಲ್ಲಿ ಉಡುಪಿಯ ಕನ್ನಡವನ್ನು ಬಳಸಲಾಗಿದೆ. ಈ ಚಿತ್ರವನ್ನು 'ಎಆರ್' ಫಿಲ್ಮ್ಸ್‌ ಬ್ಯಾನರ್ ಅಡಿ ಸುಜಾತ ಚಡಗ, ಚಂದ್ರಶೇಖರ್ ಸಿ ಜಂಬಿಗಿ ನಿರ್ಮಾಣ ಮಾಡಿದ್ದಾರೆ. ಯುವ ಪ್ರತಿಭೆ ಶ್ರೀಹರಿ ಛಾಯಾಗ್ರಾಹಣ, ಗಿರೀಶ್ ಹೊತ್ತೂರ್ ಸಂಗೀತ ನಿರ್ದೇಶನ, ಮಾದೇಶ್ ಸಂಕಲನ, ದೇವಿ ಪ್ರಕಾಶ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರ ಇದೇ ಜುಲೈ 28ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲಿದೆ.

ಇದನ್ನೂ ಓದಿ: Nisha Noor: ವೇಶ್ಯಾವಾಟಿಕೆಗೆ ಬಲಿಪಶುವಾದ ರಜನಿಕಾಂತ್ ಜೊತೆ ನಟಿಸಿದ್ದ ಈ ನಟಿ, ಏಡ್ಸ್‌ನಿಂದ ಅಂತ್ಯವಾಯ್ತು ಈ ಸುಂದರಿಯ ಬಾಳು.!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News