ಶತ್ರುವಿನ ಶತ್ರು ಮಿತ್ರ ಅಂತ ಹೊಂದಾಣಿಕೆ ಮಾಡಿಕೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾರೆ : ಡಿಸಿಎಂ

ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆಗೆ ಮುಂದಾಗಿದ್ದು, ಮಾತುಕತೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. ಎಲ್ಲಿ ಯಾವ ಸಭೆಗಳ ಬಗ್ಗೆ ಏನು ಚಿಂತನೆ ನಡೆಯುತ್ತಿದೆ ಎಂದು ನಮಗೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಆಪರೇಷನ್‌ ಸಿಂಗಾಗಪುರದ ಬಗ್ಗೆ ಮಾತನಾಡಿದರು.

Written by - Prashobh Devanahalli | Edited by - Krishna N K | Last Updated : Jul 24, 2023, 07:35 PM IST
  • ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆಗೆ ಮುಂದಾಗಿದ್ದಾರೆ.
  • ಶತ್ರುವಿನ ಶತ್ರು ಮಿತ್ರ ಎಂಬ ತಂತ್ರಗಾರಿಕೆ ಮೇಲೆ ಸಿಂಗಾಪುರಕ್ಕೆ ತೆರಳಿದ್ದಾರೆ.
  • ಆಪರೇಷನ್‌ ಸಿಂಗಾಪುರ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆ.
ಶತ್ರುವಿನ ಶತ್ರು ಮಿತ್ರ ಅಂತ ಹೊಂದಾಣಿಕೆ ಮಾಡಿಕೊಳ್ಳಲು ಸಿಂಗಾಪುರಕ್ಕೆ ತೆರಳಿದ್ದಾರೆ : ಡಿಸಿಎಂ title=

ಬೆಂಗಳೂರು : ಶತ್ರುವಿನ ಶತ್ರು ಮಿತ್ರ ಎಂಬ ತಂತ್ರಗಾರಿಕೆ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದು, ಅದು ಮುಂದುವರಿಯುತ್ತದೆಯೋ ಇಲ್ಲವೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಡಬ್ಲ್ಯೂಡಿಒ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆಗೆ ಮುಂದಾಗಿದ್ದು, ಇಲ್ಲಿ ಹಾಗೂ ದೆಹಲಿಯಲ್ಲಿ ಮಾತುಕತೆ ಮಾಡಲಾಗದೇ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದರು.

ಇದನ್ನೂ ಓದಿ:ಹೆತ್ತ ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕಾಮುಕ ತಂದೆಗೆ ಬದುಕಿರುವ ತನಕ ಜೈಲು ಶಿಕ್ಷೆ..!

ಇನ್ನು ಪತ್ರಿಕಾಗೋಷ್ಠಿಯ ಪ್ರಶ್ನೋತ್ತರ ವೇಳೆ, ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ತಂತ್ರ ನಡೆಯುತ್ತಿರುವುದು ವ್ಯಾಪಕ ಚರ್ಚೆಯಾಗುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, ಚರ್ಚೆ ಆಗಬೇಕು. ಹೊರಗೆ ಹೋಗಿ ಚರ್ಚೆ ಮಾಡುವವರು ಹೋಗಲಿ. ಇಲ್ಲಿ ಚರ್ಚೆ ಮಾಡುವವರು ಮಾಡಲಿ. ಎಲ್ಲಿ ಯಾವ ಸಭೆಗಳ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ನಮಗೂ ಗೊತ್ತಿದೆ ಎಂದು ತಿಳಿಸಿದರು.

ಇನ್ನು ತ್ಯಾಜ್ಯ ನಿರ್ವಹಣೆ ವಿಚಾರವಾಗಿ ಮಾತನಾಡಿ, ‘ನಾನು ಕೆಲವು ಪ್ರದೇಶಗಳಿಗೆ ಭೇಟಿ ನಿಡಿದ್ದು, ಅನಿಲ ಹಾಗೂ ತ್ಯಾಜ್ಯ ಇಂಧನ ಉತ್ಪಾದನೆ ಯೋಜನೆಗಳ ಬಗ್ಗೆ ನಾವು ಗಮನಹರಿಸುತ್ತಿದ್ದೇವೆ. ತ್ಯಾಜ್ಯಗಳನ್ನು ಒಂದು ಕಡೆ ಗುಡ್ಡೆ ಹಾಕಿದರೆ ಯಾವುದೇ ಪ್ರಯೋಜನವಿಲ್ಲ. ತ್ಯಾಜ್ಯಗಳನ್ನು ಸುಟ್ಟು ಹಾಕಬೇಕು. ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕ ನಿಷ್ಕ್ರಿಯವಾಗಿದ್ದು, ಈ ವಿಚಾರವಾಗಿ ಅಧ್ಯಯನ ಮಾಡಲು ಮುಂಬೈ, ದೆಹಲಿ, ಇಂದೋರ್ ಗಳಿಗೆ ಭೇಟಿ ನೀಡಲಾಗುವುದು’ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News