/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಅಡಿನೊ ವೈರಾಣುವಿನಿಂದ ಹರಡುವ ಮದ್ರಾಸ್ ಐ ರೋಗ ಬಾಧೆ ದಿನದಿಂದ ದಿನಕ್ಕೆ  ಹೆಚ್ಚಳವಾಗುತ್ತಿದೆ. ಅಬಾಲವೃದ್ದರಾದಿಯಾಗಿ ಎಲ್ಲ ವಯಸ್ಸಿನ, ಎಲ್ಲ ರೋಗದ ಜನರು ಜಿಲ್ಲಾ ಆಸ್ಪತ್ರೆಗೆ ಆಗಮಿಸುವದರಿಂದ ಇದು ಪರಸ್ಪರ ಹರಡದಂತೆ ಮುನ್ನಚರಿಕೆಯಾಗಿ ಜಿಲ್ಲಾಸ್ಪತ್ರೆ ಮಾದರಿಯಾಗುವ ಕ್ರಮ ವಹಿಸಿದೆ.

ಜಿಲ್ಲಾ ಆಸ್ಪತ್ರೆಯ ಮುಖ್ಯ ಕಟ್ಟಡದಲ್ಲಿ ಕಣ್ಣಿನ ಚಿಕಿತ್ಸಾ ವಿಭಾಗದಲ್ಲಿ, ಮದ್ರಾಸ್ ಐ ಲಕ್ಷೀತರ, ಪೀಡಿತರ ಚಿಕಿತ್ಸೆಗಾಗಿ ಪ್ರತ್ಯೇಕ ಸಿಬ್ಬಂದಿ ಹಾಗೂ ಕೊಠಡಿ ವ್ಯವಸ್ಥೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ ಅವರು, ಸರಕಾರಿ ಆಸ್ಪತ್ರೆಗೆ ಮುಖ್ಯವಾಗಿ ಗ್ರಾಮೀಣ ಜನರು, ಆರ್ಥಿಕವಾಗಿ ಹಿಂದುಳಿದವರು, ಗರ್ಭಿಣಿ ಮಹಿಳೆಯರು, ಸಣ್ಣ ಮಕ್ಕಳು, ಇತರ ರೋಗಿಗಳು ಚಿಕಿತ್ಸೆಗಾಗಿ ದಿನ ನಿತ್ಯ ಆಗಮಿಸುತ್ತಾರೆ. ಅವರಿಗೆ ಮದ್ರಾಸ್ ಐ ಕಣ್ಣಿನ ಉರಿ ಊತವಾಗಿ ಸಮಸ್ಯೆ ಆಗಬಾರದು. ಅದಕ್ಕಾಗಿ ಮದ್ರಾಸ್ ಐ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಆಗಮಿಸುವವರಿಗೆ ಪ್ರತ್ಯೇಕವಾಗಿ ನೋಂದಣಿ ಕೌಂಟರ್, ದಾಖಲಾತಿ ಕೇಙದ್ರ ಹಾಗೂ ಚಿಕಿತ್ಸಾ ಕೊಠಡಿಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ

ಮದ್ರಾಸ್ ಐ ಚಿಕಿತ್ಸೆಗೆ ಆಗಮಿಸುವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವೈದ್ಯಕೀಯ ಸಿಬ್ಬಂದಿ, ವೈದ್ಯರನ್ನು ನೇಮಿಸಲಾಗಿದ್ದು, ರಜಾ ದಿನಗಳಲ್ಲಿ ಬೆಳಿಗ್ಗೆ 9 ರಿಂದ  ಮಧ್ಯಾಹ್ನ 1 ಗಂಟೆವರೆಗೆ ಹಾಗೂ ಉಳಿದಂತೆ ಎಲ್ಲ ದಿನಗಳಲ್ಲಿ ಬೆಳಿಗ್ಗೆ 9 ರಿಂದ  ಸಂಜೆ 4:30 ರ ವರೆಗೆ ಚಿಕಿತ್ಸೆಗೆ ಲಭ್ಯವಿರುತ್ತಾರೆ. ಚಿಕಿತ್ಸೆ ನಂತರ ಅಲ್ಲಿಯೇ ಅಗತ್ಯ ಔಷಧಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಡಾ.ಗಾಬಿ ಅವರು ತಿಳಿಸಿದ್ದಾರೆ. 

ಕಳೆದ ಜುಲೈ 24 ರ ಸೋಮವಾರದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಮದ್ರಾಸ್ ಐ ಚಿಕಿತ್ಸೆಗೆ ಪ್ರತ್ಯೇಕವಾಗಿ ಕ್ರಮವಹಿಸಿದ್ದು, ಪ್ರತಿದಿನ ಸರಿಸುಮಾರು 60 ರಿಂದ 80 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ, ಕಳೆದ ಆರು ದಿನಗಳಲ್ಲಿ 240 ಕ್ಕೂ ಹೆಚ್ಚು ಜನ ಚಿಕಿತ್ಎ ಪಡೆದುಕೊಂಡಿದ್ದಾರೆ.ಮದ್ರಾಸ್ ಐ ಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಮತ್ತು ಸಿಬ್ಬಂದಿಗಳ ಸುರಕ್ಷತೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.ಮದ್ರಾಸ್ ಐ ವೈರಾಣು ರೋಗ 20 ರಿಂದ 35 ವಯೋಮಾನದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಅದರಲ್ಲೂ ವಿಶೇಷವಾಗಿ ಹಾಸ್ಟೆಲ್, ಪಿಜಿ ಗಳಲ್ಲಿ ವಾಸಿಸುವ ಯುವಕಯುವತಿಯರಲ್ಲಿ ಇದು ಹೆಚ್ಚು ಕಾಣುತ್ತಿದೆ. ಇಂತವರು ವಾಸ ಸ್ಥಳದಲ್ಲಿ ಇತರರೊಂದಿಗೆ ಸುರಕ್ಷಿತ ಅಂತರ, ನೈರ್ಮಲ್ಯ, ಸ್ವಚ್ಛತೆ ಕಾಪಾಡಿಕೊಂಡು, ಆಗಾಗ ಕೈ ತೋಳೆದು ಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಮದ್ರಾಸ್ ಐ ಲಕ್ಷಣ: ಹವಾಮಾನ ವೈಪರೀತ್ಯಗಳಿಂದ ಮತ್ತು ನಿರಂತರ ಮಳೆಯಿಂದಾಗಿ  ಕಣ್ಣಿನ‌ಉರಿ ಊತದ ಸಮಸ್ಯೆ ಕಂಡು ಬರುತ್ತಿದೆ. ಕಣ್ಣಿನಿನ ಬಿಳಿ ಭಾಗ ಕೆಂಪಾಗುವುದು, ಕಣ್ಣುಗಳಲ್ಲಿ ಉರಿ ಮತ್ತು ಊತ ಬರುವುದು, ಕಣ್ಣುಗಳಿಂದ ನಿರಂತರವಾಗಿ ನೀರು ಬರುವುದು, ಕಣ್ಣಲ್ಲಿ ಪಿಚ್ಚು ಬರುವುದು ಮತ್ತು ಕಣ್ಣು ಊತುಕೊಳ್ಳುವುದು ಮದ್ರಾಸ್ ಐ ದ ಮುಖ್ಯ ಲಕ್ಷಣಗಳಾಗಿವೆ.ಮದ್ರಾಸ್ ಐ ಪೀಡಿತ ಜನರಿಗೆ ನೋವು ನಿವಾರಕ ಮಾತ್ರೆ, ಕಣ್ಣಿನ ಡ್ರಾಪ್ಸ್ ನೀಡುವುದು ಮತ್ತು ಕಣ್ಣಿಗೆ ಕೂಲಿಂಗ್ ಗ್ಲಾಸ್ ಅಥವಾ ಕಪ್ಪು ಕನ್ನಡಕ ಧರಿಸಲು ಸೂಚಿಸಲಾಗುತ್ತದೆ. ಆಗಾಗ ಕೈ ತೊಳೆಯುವುದು, ಅನಗತ್ಯವಾಗಿ ಇತರ, ಇತರರ ವಸ್ತು ಮುಟ್ಟದಿರುವುದು, ಕಣ್ಣು ಒರೆಸಲು ಪ್ರತ್ಯೇಕ ವಸ್ತ್ರ ಅಥವಾ ಮೆತ್ತನೆಯ  ಬಟ್ಟೆ ಬಳಸುವುದು ಹಾಗೂ ಆದಷ್ಟು ಜನನಿಬಿಡ ಸ್ಥಳದಿಂದ ದೂರವಿರುವುದು ಉತ್ತಮ. ಕಣ್ಣು ಕೆಂಪಾದಾಗ ಆ್ಯಂಟಿಬಯಾಟಿಕ್ ಔಷಧಿ ಬಳಸಬೇಕು. ಕಣ್ಣನ್ನು ಆಗಾಗ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: "ನಮಗೆ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯ": ಶೋಭಾ ಕರಂದ್ಲಾಜೆ

ಮದ್ರಾಸ್ ಐ ವೈರಾಣುರೋಗವಾಗಿದ್ದು, ಇದು ಗಾಳಿ ಮೂಲಕ ಹರಡುವದಿಲ್ಲ. ಸ್ವಚ್ಚತೆ ಮತ್ತು ವೈದ್ಯರ ಸಲಹೆಗಳನ್ನು ಪಾಲಿಸಿದರೆ, ರೋಗ ನಿರೋಧಕ ಶಕ್ತಿಗೆ ಅನುಗುಣವಾಗಿ 3 ರಿಂದ 6 ದಿನಗಳಲ್ಲಿ ಕಡಿಮೆ ಆಗುತ್ತದೆ. ನಿರ್ಲಕ್ಷ್ಯ ಮಾಡಿದರೆ ಕಣ್ಣಿನ ದೃಷ್ಟಿಗೆ ತೊಂದರೆ ಆಗಬಹುದು. ಮುಂಜಾಗೃತೆ ವಹಿಸಿ ನಿಮ್ಮ ಆರೋಗ್ಯದೊಂದಿಗೆ ಇತರರ ಆರೋಗ್ಯವನ್ನು ರಕ್ಷಿಸಿ ಎಂದು ಡಾ. ಸಂಗಪ್ಪ ಗಾಬಿ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Section: 
English Title: 
Increase in cases of Madras eye disease in Dharwad district
News Source: 
Home Title: 

ಧಾರವಾಡ ಜಿಲ್ಲೆಯಲ್ಲಿ ಮದ್ರಾಸ್ ಐ ರೋಗ ಬಾಧೆಯ ಪ್ರಕರಣಗಳ ಹೆಚ್ಚಳ 

ಧಾರವಾಡ ಜಿಲ್ಲೆಯಲ್ಲಿ ಮದ್ರಾಸ್ ಐ ರೋಗ ಬಾಧೆಯ ಪ್ರಕರಣಗಳ ಹೆಚ್ಚಳ 
Yes
Is Blog?: 
No
Tags: 
Facebook Instant Article: 
Yes
Highlights: 

ಮದ್ರಾಸ್ ಐ ಲಕ್ಷಣ: ಹವಾಮಾನ ವೈಪರೀತ್ಯಗಳಿಂದ ಮತ್ತು ನಿರಂತರ ಮಳೆಯಿಂದಾಗಿ  ಕಣ್ಣಿನ‌ಉರಿ ಊತದ ಸಮಸ್ಯೆ ಕಂಡು ಬರುತ್ತಿದೆ.

ಕಣ್ಣಿನಿನ ಬಿಳಿ ಭಾಗ ಕೆಂಪಾಗುವುದು, ಕಣ್ಣುಗಳಲ್ಲಿ ಉರಿ ಮತ್ತು ಊತ ಬರುವುದು, ಕಣ್ಣುಗಳಿಂದ ನಿರಂತರವಾಗಿ ನೀರು ಬರುವುದು,

ಕಣ್ಣಲ್ಲಿ ಪಿಚ್ಚು ಬರುವುದು ಮತ್ತು ಕಣ್ಣು ಊತುಕೊಳ್ಳುವುದು ಮದ್ರಾಸ್ ಐ ದ ಮುಖ್ಯ ಲಕ್ಷಣಗಳಾಗಿವೆ.

Mobile Title: 
ಧಾರವಾಡ ಜಿಲ್ಲೆಯಲ್ಲಿ ಮದ್ರಾಸ್ ಐ ರೋಗ ಬಾಧೆಯ ಪ್ರಕರಣಗಳ ಹೆಚ್ಚಳ 
Manjunath N
Publish Later: 
No
Publish At: 
Saturday, July 29, 2023 - 15:41
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No
Word Count: 
418