ಸಿ.ಎಸ್.ಶಿವಳ್ಳಿ ಸಾವು: ಶ್ರೀರಾಮುಲು ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ನಿರ್ಧಾರ

ಕಾಂಗ್ರೆಸ್ ಶಾಸಕರು ಕುಂದಗೋಳ ಪೋಲಿಸ್ ಠಾಣೆಯಲ್ಲಿ ಬಿ.ಶ್ರೀರಾಮುಲು ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 

Last Updated : May 9, 2019, 10:32 AM IST
ಸಿ.ಎಸ್.ಶಿವಳ್ಳಿ ಸಾವು: ಶ್ರೀರಾಮುಲು ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ನಿರ್ಧಾರ title=

ಹುಬ್ಬಳ್ಳಿ: ಕುಂದಗೋಳ ಮಾಜಿ ಶಾಸಕ ಸಿ.ಎಸ್.ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ ಎದ್ನು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪ ಮಾಡಿದ್ದಾರೆ. 

ಈ ಬೆನ್ನಲ್ಲೇ ಸಿಡಿಮಿಡಿಗೊಂಡಿರುವ ಕಾಂಗ್ರೆಸ್ ಶಾಸಕರು ಕುಂದಗೋಳ ಪೋಲಿಸ್ ಠಾಣೆಯಲ್ಲಿ ಬಿ.ಶ್ರೀರಾಮುಲು ವಿರುದ್ಧ ದೂರು ದಾಖಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 

ಕುಂದಗೋಳ ಕ್ಷೇತ್ರದ ಬೆಟದೂರು ಗ್ರಾಮದಲ್ಲಿ ಬುಧವಾರ ಮಾತನಾಡಿದ ಅವರು, ಸಚಿವರಾಗಿದ್ದ ಸಿ. ಎಸ್.ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವೇ ಕಾರಣ. ಮೈತ್ರಿ ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಮೃತಟ್ಟಿದ್ದಾರೆ. ಇದಕ್ಕೆ ಕುಂದಗೋಳ ಜನರಿಗೆ ಸರ್ಕಾರದ ವಿರುದ್ದ ಸೇಡು ತಿರುಸಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದರು. 

Trending News