Rahul Gandhi : ಸದನದಲ್ಲೇ ರಾಹುಲ್ ಗಾಂಧಿಯಿಂದ ಫ್ಲೈಯಿಂಗ್ ಕಿಸ್ ಪಡೆದುಕೊಂಡ ಈಕೆ ಯಾರು..?

Rahul Gandhi  Flying Kiss Controversy: ಈ ಹಿಂದೆ ರಾಹುಲ್‌ ಗಾಂಧಿ ದೇಶದ ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು. ಸದ್ಯ ಲೋಕಸಭೆಯಿಂದ ಹೊರಡುವಾಗ ರಾಹುಲ್ ಗಾಂಧಿ ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.   

Written by - Savita M B | Last Updated : Aug 11, 2023, 07:03 PM IST
  • ರಾಹುಲ್‌ ಗಾಂಧಿ ಆಗ್ಗಾಗೆ ರಾಜಕೀಯ ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಾರೆ.
  • ಇತ್ತೀಚೆಗೆ ರಾಹುಲ್‌ ಗಾಂಧಿ ಅವರು ತಮ್ಮ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು.
  • ಲೋಕಸಭೆಯಿಂದ ನಿರ್ಗಮಿಸುವ ವೇಳೆ ಬಿಜೆಪಿ ಸಂಸದರತ್ತ ಫ್ಲೈಯಿಂಗ್ ಕಿಸ್ ನೀಡಿ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
Rahul Gandhi : ಸದನದಲ್ಲೇ ರಾಹುಲ್ ಗಾಂಧಿಯಿಂದ ಫ್ಲೈಯಿಂಗ್ ಕಿಸ್ ಪಡೆದುಕೊಂಡ ಈಕೆ ಯಾರು..?  title=

Rahul Gandhi : ದೇಶದ ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಶಿಕ್ಷೆಗೆ ಗುರಿಯಾಗಿದ್ದ ರಾಹುಲ್‌ ಗಾಂಧಿ ಅವರು ಸಂಸದೀಯ ಸ್ಥಾನವನ್ನು ಕಳೆದುಕೊಂಡಿದ್ದರು. ನಂತರ ರಾಹುಲ್ ಗಾಂಧಿ ಕಾನೂನು ಹೋರಾಟ ನಡೆಸಿ ಮತ್ತೆ ಅರ್ಹತೆ ಪಡೆದುಕೊಂಡಿದ್ದರು.

ಇನ್ನು ರಾಹುಲ್‌ ಗಾಂಧಿ ಆಗ್ಗಾಗೆ ರಾಜಕೀಯ ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಾರೆ. ಸದ್ಯ ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆಯಲ್ಲಿ ಕಾಂಗ್ರೆಸ್‌ ನಾಯಕ ತೊಡಗಿದ್ದಾರೆ. ಇನ್ನು ಇತ್ತೀಚೆಗೆ ರಾಹುಲ್‌ ಗಾಂಧಿ ಅವರು ತಮ್ಮ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು. ಸದ್ಯ ನಿನ್ನೆ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ಪರವಾಗಿ ಮಾತನಾಡಿದ್ದಾರೆ. ಇದೇ ಸಮಯದಲ್ಲಿ ವಿವಾದಕ್ಕೊಳಗಾಗಿದ್ದಾರೆ. 

ಇದನ್ನೂ ಓದಿ-"ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ"

 ಸಂಸತ್‌ ಸದಸ್ಯೆತ್ವ ರದ್ದಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ಭಾಷಣ ಮಾಡಿದ್ದು, ಲೋಕಸಭೆಯಿಂದ ನಿರ್ಗಮಿಸುವ ವೇಳೆ ಬಿಜೆಪಿ ಸಂಸದರತ್ತ ಫ್ಲೈಯಿಂಗ್ ಕಿಸ್ ನೀಡಿ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಕಾರಣ ರಾಹುಲ್ ಗಾಂಧಿ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಎಐಸಿಸಿ ಮಾಜಿ ವಕ್ತಾರೆ ಹಾಗೂ ಹಾಲಿ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಇದು ಪ್ರೀತಿ ಮತ್ತು ಅಕ್ಕರೆಯ ಸನ್ನೆಯಾಗಿದೆ, ಅದರಿಂದ ಏನು ಸಮಸ್ಯೆ ಆಗಿದೆ? ಅದನ್ನು ಅರ್ಥ ಮಾಡಿಕೊಳ್ಳಲು ವಿಫಲರಾಗಿ ಏಕೆ ದ್ವೇಷ ಸಾಧಿಸುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆಯಿಂದ ಹೊರನಡೆಯುವಾಗ ರಾಹುಲ್‌ ಗಾಂಧಿ ಪೈಲ್‌ಗಳನ್ನು ಬೀಳಿಸಿಕೊಂಡಿದ್ದಾರೆ. ಅದನ್ನು ನೋಡಿ ಬಿಜೆಪಿ ಸಂಸದರು ನಕ್ಕಿದ್ದಾರೆ. ಈ ವೇಳೆ ರಾಹುಲ್‌ ಗಾಂಧಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿ ವರ್ತನೆ ಅನುಚಿತವಾಗಿದೆ. ಅಶ್ಲೀಲ ಮತ್ತು ಸ್ತ್ರೀದ್ವೇಷದ ಪುರುಷ  ಮಾತ್ರ ಈ ರೀತಿ ನಡೆದುಕೊಳ್ಳಲು ಸಾಧ್ಯ..ಇಂತಹ ನಿದರ್ಶನಗಳನ್ನು ಈ ಹಿಂದೆ ಎಲ್ಲಿಯೂ ಕಂಡಿರಲಿಲ್ಲ ಎಂದು ಆರೋಪಿಸಿದ್ದಾರೆ. 

ಇದನ್ನೂ ಓದಿ-ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಯ ಭಯಕ್ಕೆ ಕಾರಣ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News