ಮುಂದಿನ 48 ಗಂಟೆಯಲ್ಲಿ ಈ ಭಾಗಗಳಲ್ಲಿ ವರುಣಾಘಾತ: ಇಡೀ ವಾರ ಗುಡುಗು, ಸಿಡಿಲು ಸಹಿತ ಜಲಪ್ರವಾಹದ ಮುನ್ನೆಚ್ಚರಿಕೆ

Weather Alert 27-08-2023: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಶನಿವಾರ ಕೆಲವೆಡೆ ಮಳೆಯಾಗಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.

Written by - Bhavishya Shetty | Last Updated : Aug 27, 2023, 08:33 AM IST
    • ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
    • ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ
    • ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ
ಮುಂದಿನ 48 ಗಂಟೆಯಲ್ಲಿ ಈ ಭಾಗಗಳಲ್ಲಿ ವರುಣಾಘಾತ: ಇಡೀ ವಾರ ಗುಡುಗು, ಸಿಡಿಲು ಸಹಿತ ಜಲಪ್ರವಾಹದ ಮುನ್ನೆಚ್ಚರಿಕೆ title=
Karnataka Rain

Weather Alert 27-08-2023: ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 21 ವರ್ಷಗಳ ಬಳಿಕ ಕೂಡಿಬಂತು ಗುರುಬಲ: ಇನ್ನೊಂದು ತಿಂಗಳಲ್ಲಿ ದುಡ್ಡಿನಲ್ಲೇ ಮಿಂದೇಳುವರು ಈ ರಾಶಿಯವರು-ಅದೃಷ್ಟ ಅಂದ್ರೆ ಇವರದ್ದೇ

ಇನ್ನು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಶನಿವಾರ ಕೆಲವೆಡೆ ಮಳೆಯಾಗಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.

ಇನ್ನೊಂದೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಸೂಚಿಸಿದ್ದು, ಎಚ್ಚರಿಕೆ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ನೀಡಿದೆ. ಮಂಚಿರ್ಯಾಲ, ಜನಗಾಂ, ಸಿದ್ದಿಪೇಟೆ, ಕೊಮುರಂಭೀಮ್ ಆಸಿಫಾಬಾದ್, ವಾರಂಗಲ್ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಆದರೂ ಜನರಿಗೆ ಬಿಸಿತಾಪ ನಿರಾಸೆಯನ್ನುಂಟು ಮಾಡಿದೆ.

ಇದನ್ನೂ ಓದಿ: ಏಕಾದಶಿ ತಿಥಿಯ ಅದ್ಭುತ ದಿನ: ಇಂದು ಈ ರಾಶಿಯವರಿಗೆ ವಿಶೇಷ ಫಲ-ಉದ್ಯೋಗದಲ್ಲಿ ಹಿಂದೆಂದೂ ಕಂಡಿರದ ಯಶ

ಇನ್ನೊಂದೆಡೆ ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ಬಿಹಾರದಾದ್ಯಂತ ಇಡೀ ವಾರ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News