ಸಮಾನತೆ ಸಿಗುವವರೆಗೂ ಹೋರಾಟ ನಿಲ್ಲದಿರಲಿ; ಡಿಸಿಎಂ ಡಾ.ಜಿ. ಪರಮೇಶ್ವರ ಕರೆ

ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

Last Updated : Jun 4, 2019, 12:44 PM IST
ಸಮಾನತೆ ಸಿಗುವವರೆಗೂ ಹೋರಾಟ ನಿಲ್ಲದಿರಲಿ; ಡಿಸಿಎಂ ಡಾ.ಜಿ. ಪರಮೇಶ್ವರ ಕರೆ title=

ಬೆಂಗಳೂರು: ಅಂಬೇಡ್ಕರ್‌ ಅವರ ಆಶಯದಂತೆ ಸಮಾನತೆ ಸಿಗುವವರೆಗೂ ದಲಿತ ಸಮುದಾಯ ಸದಾ ಹೋರಾಟ ನಡೆಸುತ್ತಿರಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಕರೆಕೊಟ್ಟರು.

ಅಂಬೇಡ್ಕರ್‌ ಭವನದಲ್ಲಿ ಇಂದು ಆಯೋಜಿಸಿದ್ದ ಡಾ.ಎಂ. ವೆಂಕಟಸ್ವಾಮಿ ಅವರ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ನಮ್ಮ ಸಮುದಾಯಕ್ಕೆ ಅವರ ಕೊಡುಗೆ ಅಪಾರ ಎಂದರು.

ಬಿ.ಆರ್. ಅಂಬೇಡ್ಕರ್‌ ಅವರ ಕನಸು ಎಲ್ಲರಿಗೂ ಸಮಾನತೆ. ಎಲ್ಲಿಯವರೆಗೂ ಸಮಾನತೆ ಸಾಧ್ಯವಾಗುವುದಿಲ್ಲವೋ ಅಲ್ಲಿವರೆಗೂ ಈ ಸಮುದಾಯ ಹೋರಾಟ ಮುಂದುವರೆಯಬೇಕು ಎಂದು ಕರೆ ನೀಡಿದರು. 

ನಮ್ಮ ಸಮುದಾಯದ ವತಿಯಿಂದ ಈ ವರ್ಷ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ ಪ್ರಧಾನ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಅವರಿಗೆ ಅಭಿನಂದನೆ ತಿಳಿಸಿದರು.

Trending News