ಮೈತ್ರಿ ಸರ್ಕಾರ ಬೀಳೋದು ಗ್ಯಾರಂಟಿ: ರೇಣುಕಾಚಾರ್ಯ

ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

Last Updated : Jun 4, 2019, 05:43 PM IST
ಮೈತ್ರಿ ಸರ್ಕಾರ ಬೀಳೋದು ಗ್ಯಾರಂಟಿ: ರೇಣುಕಾಚಾರ್ಯ title=

ದಾವಣಗೆರೆ: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ಸರ್ಕಾರ ಪತನ ಆಗೋದು ಗ್ಯಾರೆಂಟಿ, ಬೇಕಾದರೆ ನಾನು ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಉಳಿಗಾಲವಿಲ್ಲ. ಡಾ.ಪರಮೇಶ್ವರ್​​​​​​​​​ ನಾಮಕವಸ್ತೆಗೆ ಉಪಮುಖ್ಯಮಂತ್ರಿ ಆಗಿದ್ದಾರೆ. ಅವರ ಎಲ್ಲ ಕೆಲಸಗಳನ್ನು ರೇವಣ್ಣ ಮಾಡುತ್ತಾರೆ ಎಂದು ವ್ಯಂಗ್ಯ ಮಾಡಿದರು.

ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಕುರಿತು ಪ್ರತಿಕ್ರಿಯಿಸಿದ ಅವರು, ಇಷ್ಟು ದಿನ ತಾಜ್​​ ವೆಸ್ಟ್​​​ ಎಂಡ್​​​​​​​ ಹೋಟೆಲ್​​​​ನಲ್ಲಿ ದಿನಕ್ಕೆ 1 ಲಕ್ಷ ರೂ. ಪಾವತಿಸಿ ಐಷರಾಮಿ ಜೀವನ ನಡೆಸಿ, ಈಗ ಗ್ರಾಮವಾಸ್ತವ್ಯ ಮಾಡಲು ಹೊರಟಿರುವ ಸಿಎಂ ಗ್ರಾಮ ವಾಸ್ತವ್ಯ ಮಾಡುವಷ್ಟರಲ್ಲಿ ಸರ್ಕಾರ ಉರುಳುತ್ತದೆ ಎಂದು ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

Trending News