/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಭೀಕರ ಅಪಘಾತ: ಬೆಳಗಾವಿ ಮೂಲದ ಒಂದೇ ಕುಟುಂಬದ ಐವರ ದುರ್ಮರಣ!

Road Accident: ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಕ್ರೂಸರ್ ವಾಹನದಲ್ಲಿ ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ​

Written by - Puttaraj K Alur | Last Updated : Sep 15, 2023, 03:54 PM IST
  • ಭೀಕರ ರಸ್ತೆ ಅಪಘಾತಕ್ಕೆ ಬೆಳಗಾವಿಯ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರ ಬಲಿ
  • ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ
  • ಶ್ರೀಶೈಲ ಮತ್ತು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಮನೆಗೆ ಆಗಮಿಸುತ್ತಿದ್ದ ವೇಳೆ ಜವರಾಯನ ಅಟ್ಟಹಾಸ
ಭೀಕರ ಅಪಘಾತ: ಬೆಳಗಾವಿ ಮೂಲದ ಒಂದೇ ಕುಟುಂಬದ ಐವರ ದುರ್ಮರಣ! title=
ಒಂದೇ ಕುಟುಂಬದ ಐವರ ಬಲಿ!

ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ

ಶುಕ್ರವಾರ ಬೆಳಗಿನ ಜಾವ 3.30ರ ವೇಳೆಗೆ ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕ್ರೂಸರ್​ನಲ್ಲಿದ್ದ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ದುರಂತ ಅಂತ್ಯ ಕಂಡಿದ್ದಾರೆ.

ಇದನ್ನೂ ಓದಿ: ಅಪಘಾತ ಮಾಹಿತಿ ನೀಡುವ ರಕ್ಷಾ ಕ್ಯೂಆರ್‌ ಕೋಡ್‌

ಘಟನೆಯಲ್ಲಿ ಹನುಮಂತ ಆಜೂರ (42), ಶೋಭಾ ಆಜೂರ (36), ಮಾನಂದಾ ಆಜೂರ (32), ಚಾಲಕ ಹನುಮಂತ ಜಾಧವ (32) ಮತ್ತು ಅಂಬಿಕಾ ಆಜೂರ (14) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜವರಾಯನ ಅಟ್ಟಹಾಸ!

ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಕ್ರೂಸರ್ ವಾಹನದಲ್ಲಿ ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಇಂದು ಮನೆಗೆ ವಾಪಸ್ ಆಗುತ್ತಿದ್ದರು. ಆದರೆ ಜವರಾಯ ಅಟ್ಟಹಾಸ ಮೆರೆದಿದ್ದು, ದೇವರ ದರ್ಶನ ಪಡೆದು ವಾಪಸ್ ಮನೆಗೆ ಬರುತ್ತಿದ್ದವರ ಪೈಕಿ ಐವರು ಮಸಣ ಸೇರಿದ್ದಾರೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿರುವುದು ಬಡಚಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.  

ಇದನ್ನೂ ಓದಿ: ಸರ್.ಎಂ. ವಿಶ್ವೇಶ್ವರಯ್ಯರಿಂದಲೇ ಬೆಂಗಳೂರಿಗೆ ಕಾವೇರಿ ನೀರು ಬಂದಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.