ಜೆಡಿಎಸ್‌ಗೆ ನೂತನ ಸಾರಥಿ: ದಲಿತರಿಗೆ ಅವಕಾಶ ಕೊಡುವ ಚಿಂತನೆಯಲ್ಲಿ ದೇವೇಗೌಡರು!

ಜೆಡಿಎಸ್ ಪಕ್ಷದಿಂದ ಆರು ಮಂದಿ ಪರಿಶಿಷ್ಟ ಸಮುದಾಯದ ಶಾಸಕರು ಗೆದ್ದಿದ್ದಾರೆ.

Last Updated : Jun 27, 2019, 09:52 AM IST
ಜೆಡಿಎಸ್‌ಗೆ ನೂತನ ಸಾರಥಿ: ದಲಿತರಿಗೆ ಅವಕಾಶ ಕೊಡುವ ಚಿಂತನೆಯಲ್ಲಿ ದೇವೇಗೌಡರು! title=
File Image

ಬೆಂಗಳೂರು: ಈ ವಾರಾಂತ್ಯದೊಳಗೇ ಜೆಡಿಎಸ್‌ಗೆ ನೂತನ ಸಾರಥಿ ನೇಮಕ ಮಾಡಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದು, ಈ ಬಾರಿ ದಲಿತರಿಗೆ ರಾಜ್ಯಾಧ್ಯಕ್ಷರ ಪಟ್ಟ ಕಟ್ಟಲು ಹೆಚ್.ಡಿ. ದೇವೇಗೌಡರು ಚಿಂತನೆ ನಡೆಸಿದ್ದಾರೆ.

ಒಂದೆರಡು ದಿನದಲ್ಲೇ  ಪಕ್ಷಕ್ಕೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ದೇವೇಗೌಡರು ಮುಂದಾಗಿದ್ದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹುದ್ದೆಗೆ ದಲಿತರಿಗೆ ಅವಕಾಶ ಮಾಡಿಕೊಡುವ ಚಿಂತನೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಸದ್ಯದಲ್ಲೇ ಎಲ್ಲರನ್ನೂ ಕರೆದು ಸಭೆ ನಡೆಸಿ ಒಂದೆರಡು ದಿನಗಳಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಮಧು ಬಂಗಾರಪ್ಪ ಅವರಿಗೆ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೇವೇಗೌಡರು,  ಮಧು ಬಂಗಾರಪ್ಪ ಅವರೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ಶಕ್ತಿ ಅವರಿಗಿದೆ ಎಂದರು.

Trending News