ಸುಳ್ಯ ಬಳಿ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ದುರ್ಮರಣ

ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. 

Last Updated : Jul 14, 2019, 04:48 PM IST
ಸುಳ್ಯ ಬಳಿ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ದುರ್ಮರಣ title=

ಸುಳ್ಯ: ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಮನಗರ ಜಿಲ್ಲೆಯ ಮೂವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರು ಬಳಿ ಭಾನುವಾರ ನಡೆದಿದೆ.

ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಉಳಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ, ಸೋಮಣ್ಣ, ನಾಗೇಂದ್ರ ಎಂದು ಗುರುತಿಸಲಾಗಿದ್ದು, ಜಯಶೀಲ ಮತ್ತು ಬಾಲಕಿ ತನ್ಮಯಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಳ್ಯದ ಚೊಕ್ಕಾಡಿ ಸತ್ಯ ಸಾಯಿ ವಿದ್ಯಾಸಂಸ್ಥೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗ ಪೂರ್ವಿಕ್ ನನ್ನು ಭೇಟಿ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೋಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
 

Trending News