ಮುಂದಿನ 2 ದಿನ ಈ ಭಾಗಗಳಲ್ಲಿ ಕುಂಭದ್ರೋಣ ಮಳೆ: ಮಿಂಚು-ಗುಡುಗು ಸಹಿತ ಜಲಪ್ರಳಯದ ಭೀತಿ, ಪ್ರಬಲ ಗಾಳಿ ಬೀಸುವ ಸೂಚನೆ

Weather Update in Kannada: ನವೆಂಬರ್ 14 ರಿಂದ ದಕ್ಷಿಣ ಭಾರತದಲ್ಲಿ ಹೊಸ ಹಂತದ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದೆಹಲಿ-ಎನ್‌’ಸಿಆರ್, ಹರಿಯಾಣ-ಪಂಜಾಬ್, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 2 ದಿನ ಭಾರೀ ಮಳೆ ಆಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

Written by - Bhavishya Shetty | Last Updated : Nov 11, 2023, 11:14 PM IST
    • ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.
    • ಮಳೆ ಮತ್ತು ಹಿಮಪಾತದಿಂದಾಗಿ ಮತ್ತೆ ಚಳಿ ಪ್ರಾರಂಭವಾಗಿದೆ
    • ರಾಜ್ಯದ ಕೆಲವು ಪ್ರದೇಶಗಳಲ್ಲಿ 'ಯೆಲ್ಲೋ ಅಲರ್ಟ್' ನೀಡಲಾಗಿದೆ
ಮುಂದಿನ 2 ದಿನ ಈ ಭಾಗಗಳಲ್ಲಿ ಕುಂಭದ್ರೋಣ ಮಳೆ: ಮಿಂಚು-ಗುಡುಗು ಸಹಿತ ಜಲಪ್ರಳಯದ ಭೀತಿ, ಪ್ರಬಲ ಗಾಳಿ ಬೀಸುವ ಸೂಚನೆ title=
Karnataka Rain

Weather Update in Kannada: ಗುಡ್ಡಗಾಡು ರಾಜ್ಯಗಳಲ್ಲಿ ಹಿಮಪಾತ ಮತ್ತು ದೇಶದ ಕೆಲವು ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣದಿಂದ ಚಳಿ ಹೆಚ್ಚಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಉತ್ತರಾಖಂಡ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರದ ಕೆಲವು ಸ್ಥಳಗಳಲ್ಲಿ ಪರ್ವತಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:  ಮಾನಸಿಕವಾಗಿ ಕುಗ್ಗಿದ್ದ ಕೊಹ್ಲಿಗೆ ಶಕ್ತಿ ತುಂಬಿದ್ದೇ ಈ ವ್ಯಕ್ತಿಯ ಮಾತು!

ನವೆಂಬರ್ 14 ರಿಂದ ದಕ್ಷಿಣ ಭಾರತದಲ್ಲಿ ಹೊಸ ಹಂತದ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದೆಹಲಿ-ಎನ್‌’ಸಿಆರ್, ಹರಿಯಾಣ-ಪಂಜಾಬ್, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 2 ದಿನ ಭಾರೀ ಮಳೆ ಆಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮತ್ತು ಹಿಮಪಾತದಿಂದಾಗಿ ಮತ್ತೆ ಚಳಿ ಪ್ರಾರಂಭವಾಗಿದೆ. ಇದರ ಜೊತೆಗೆ ಚಂಡಮಾರುತ, ಮಳೆ ಮತ್ತು ಹಿಮಪಾತದ ಭೀತಿಯಿಂದ ರಾಜ್ಯದ ಕೆಲವು ಪ್ರದೇಶಗಳಲ್ಲಿ 'ಯೆಲ್ಲೋ ಅಲರ್ಟ್' ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್, ಪಂಜಾಬ್-ಹರಿಯಾಣ ಮತ್ತು ರಾಜಸ್ಥಾನದಲ್ಲಿ ಮಳೆಯಾಗಿದೆ. ತಣ್ಣನೆಯ ಗಾಳಿ ಇನ್ನೂ ಬೀಸುತ್ತಿದ್ದು, ಇದರಿಂದಾಗಿ ತಾಪಮಾನದಲ್ಲಿ ಕುಸಿತ ಕಂಡುಬಂದಿದೆ.

ಕರ್ನಾಟಕ ಮಳೆ ಅಪ್ಡೇಟ್:

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ:  ಟೀಂ ಇಂಡಿಯಾದ ಪ್ಲೇಯಿಂಗ್ 11 ಪ್ರಕಟಿಸಿದ ದ್ರಾವಿಡ್! 4ನೇ ಸ್ಥಾನದಲ್ಲಿ ಬ್ಯಾಟ್ ಬೀಸೋದು ಇವರೇ..!

ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News