ಜೆಡಿಎಸ್‌ನಿಂದಲೇ ಹೆಚ್.ಡಿ. ದೇವೇಗೌಡರ ಉಚ್ಛಾಟನೆ : ಸುಳಿವು ನೀಡಿದ ಸಿಎಂ ಇಬ್ರಾಹಿಂ

ಡಿ.9 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದರೆ, ಇನ್ನೊಂದೆಡೆ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರು, ಡಿಸೆಂಬರ್ 11 ರಂದು ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ತಿಳಿಸಿದರು.

Written by - Prashobh Devanahalli | Edited by - Krishna N K | Last Updated : Dec 8, 2023, 05:50 PM IST
  • ಡಿ 11ರಂದು ಜನತಾ ದಳದ ರಾಷ್ಟೀಯ ಕಾರ್ಯಕಾರಣಿ ಸಮಿತಿ ಸಭೆ
  • ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡರನ್ನು ಉಚ್ಚಾಟನೆ ಮಾಡುವ ಸಾಧ್ಯತೆ
  • ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾಹಿತಿ
ಜೆಡಿಎಸ್‌ನಿಂದಲೇ ಹೆಚ್.ಡಿ. ದೇವೇಗೌಡರ ಉಚ್ಛಾಟನೆ : ಸುಳಿವು ನೀಡಿದ ಸಿಎಂ ಇಬ್ರಾಹಿಂ title=

ಬೆಂಗಳೂರು : ಡಿ 11ರಂದು ಜನತಾ ದಳದ ರಾಷ್ಟೀಯ ಕಾರ್ಯಕಾರಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಆಯೋಜನೆ ಆಗಲಿದೆ, ಬಿಜೆಪಿ ಜೊತೆ ಮೈತ್ರಿ ಏಕಪಕ್ಷಿಯ ನಿರ್ಧಾರ ಹಿನ್ನಲೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇದೇ ಎಂದು ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು.

ಒಂದೆಡೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಡಿ.9 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದರೆ, ಇನ್ನೊಂದೆಡೆ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರು, ಡಿಸೆಂಬರ್ 11 ರಂದು ರಾಷ್ಟ್ರೀಯ ಕಾರ್ಯಕಾರಣಿ ಸಭೆ ಕರೆದಿದ್ದಾರೆ.ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಅವರು, ಇಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Viral Video: 'ತಾಳಿ ಕಟ್ಟುವ ಶುಭ ವೇಳೆ' ಕೈ ಅಡ್ಡ ಹಿಡಿದ ವಧು! ವರನಿಗೆ ಏನಾಯ್ತು..?

ರಾಷ್ಟ್ರೀಯ ಉಪಾಧ್ಯಕ್ಷರು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ಬೆಂಗಳೂರಿನಲ್ಲಿ ಡಿ.11 ರಂದು  ಕರೆದಿದ್ದು, ಎಲ್ಲಾ ರಾಜ್ಯದ ಅಧ್ಯಕ್ಷರು, ಉಪಾಧ್ಯಕ್ಷರನ್ನು ಸಭೆಗೆ ಆಹ್ವಾನಿಸಿದ್ದಾರೆ. ಗುಜರಾತ್, ರಾಜಸ್ಥಾನ, ತಮಿಳುನಾಡು, ತೆಲಂಗಾಣದ ಅಧ್ಯಕ್ಷರ ಸಭೆ ಕರೆಯಲಾಗಿದೆ. ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇರುವ ಎಲ್ಲರೂ ಬರಬಹುದು ಎಂದು ಕರೆ ನೀಡಿದರು. 

ದೇವೇಗೌಡರ ಉಚ್ಚಾಟನೆ ಸುಳಿವು : ಬಿಜೆಪಿ ಜೊತೆ ಮೈತ್ರಿ ವಿಚಾರವನ್ನು ಜೆಡಿಎಸ್ ಕಾರ್ಯಕಾರಣಿ ಸದಸ್ಯರು ಒಪ್ಪಿಲ್ಲ. ಇದು ನನ್ನ ನಿರ್ಧಾರ ಅಲ್ಲ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಈ ಕಾರಣದಿಂದ ದೇವೇಗೌಡರನ್ನು ಉಚ್ಛಾಟನೆ ಮಾಡುವ ನಿರ್ಧಾರ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಇಬ್ರಾಹಿಂ ಪರೋಕ್ಷವಾಗಿ ಸುಳಿವು ನೀಡಿದರು. 

ಇದನ್ನೂ ಓದಿ:ಮೋಡ ಬಿತ್ತನೆ ವಿಚಾರವಾಗಿ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗಳು ಸಮಂಜಸವಲ್ಲ. ಭಜರಂಗದಳದವರೂ ಈ ರೀತಿಯ ಹೇಳಿಕೆ ನೀಡಲ್ಲ. ನೀವು (ಹೆಚ್ಡಿಕೆ) ಕೇಶವಕೃಪದಲ್ಲಿ ಬಾಳಲಾರರಿ-ತಾಳಲಾರರಿ, ನೀವು ಇಲ್ಲಿಗೇ ಬರಬೇಕು, ಬೇರೆ ವಿಧಿ ಇಲ್ಲ. ಹೆಚ್.ಡಿ. ದೇವೇಗೌಡರು ಒತ್ತಡಕ್ಕೆ ಒಳಗಾಗಿದ್ದಾರೆ. ಹೆಚ್.ಡಿ. ರೇವಣ್ಣ ಚಿಂತಾಜನಕವಾಗಿದ್ದಾರೆ  ಎಂದು ಹೇಳಿದರು.

ನಾನೇ ಜನತಾದಳ ಅಧ್ಯಕ್ಷ. ಯಾವ ಆಧಾರದ ಮೇಲೆ ಉಚ್ಚಾಟನೆ ಮಾಡ್ತಾರೆ. ಜಿ.ಟಿ. ದೇವೇಗೌಡರನ್ನು ನಾನೇ ಕಮಿಟಿ ಅಧ್ಯಕ್ಷರನ್ನಾಗಿ ಮಾಡಿದ್ದು. ನಮ್ಮ ಸಭೆ ಹಾಗೂ ಅವರ ಸಭೆಗೆ ಯಾರು ಬರುತ್ತಾರೆ ನೋಡಿ. 12 ಮಂದಿ ಶಾಸಕರ ಸಂಖ್ಯೆ ನಮ್ಮ ಪರವಾಗಲಿದೆ. ಜೆಡಿಎಸ್ ನ ಐದು ಮಂದಿ ಶಾಸಕರು ಸಂಪರ್ಕದಲ್ಲಿ ಇದ್ದಾರೆ. ಜನವರಿ ನಂತರ ಕ್ಲಿಯರ್ ಪಿಚ್ಚರ್ ಸಿಗಲಿದೆ. ನಾವು ಆತುರ ಮಾಡಲ್ಲ, ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಆರೋಗ್ಯ ಮುಖ್ಯ ಎಂದು ವ್ಯಂಗ್ಯವಾಡಿದರು.  

ಜಾತ್ಯಾತೀತ ಶಕ್ತಿಗಳನ್ನು ಒಗ್ಗೂಡಿಸುತ್ತೇವೆ : ಜಾತ್ಯಾತೀತ ಶಕ್ತಿಗಳನ್ನು ಒಗ್ಗೂಡಿಸುತ್ತೇವೆ. ಹಾಗಾಗಿ,  ನಿತೀಶ್ ಕುಮಾರ್, ಅಖಿಲೇಶ್  ಅವರನ್ನು ಭೇಟಿ ಮಾಡುತ್ತೇನೆ.  ದೇವೇಗೌಡರ ನಂತರ ನಾನೇ ಸೀನಿಯರ್ ಮೋಸ್ಟ್. ಮಧ್ಯ ಪ್ರದೇಶ, ರಾಜಸ್ಥಾನ ಹೋಗಿದ್ರೂ, ಸಿದ್ಧಾಂತ ಬಿಡಲ್ಲ. ಡಿ. 11 ರ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಮಾಜಿ ಶಾಸಕರಾದ ನಾಡಗೌಡ, ಮಹೀಮಾ ಪಟೇಲ್ ರ ಜೊತೆಗೆ ಹಾಲಿ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ  ಎಂದು ಹೇಳಿದರು.

ಇದನ್ನೂ ಓದಿ:ಸಾಲ ಮರು ಪಾವತಿ ನೋಟಿಸ್ ನೀಡಲು ಬಂದವ ಮೇಲೆ ಕಲ್ಲು ಎಸೆದ ಅಜ್ಜ..! 

ಬಕೆಟ್ ಹಿಡಿಯುವ ಕೆಲಸವೇ? : ಪಕ್ಷದ ಅಧ್ಯಕ್ಷ ನಾನು ಇದ್ದೇನೆ. ಅಮಿತ್ ಶಾ ಭೇಟಿಗೆ ಹಿಂಬಾಗಿಲಿನಿಂದ ದೇವೇಗೌಡರು ಹೋದ್ರು, ಮುಂಬಾಗಿಲಿನಿಂದ ಕುಮಾರಸ್ವಾಮಿ ಹೋದ್ರು. ವಿಜಯೇಂದ್ರ- ಅಶೋಕ್ ಅವರ ಹಿಂದೆ ನೀವು ಹೋಗಬೇಕು? ನಿಮ್ಮದು ಏನು ಉಳಿದಿದೆ. ಎಲ್ಲರಿಗೂ ಬಕೆಟ್ ಹಿಡಿಯಲು ಕುಮಾರಸ್ವಾಮಿ ಹೋಗಿದ್ದಾರೆ. ಪುಟ್ಟಪ್ಪನವರ, ಬಸವಣ್ಣನವರ ತತ್ವ ಒಪ್ಪಿಕೊಳ್ಳಿ  ಎಂದು  ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು.

ಮೋದಿ ಎಷ್ಟು ಬಾರಿ ನಿಮಗೆ ಕರೆ ಮಾಡಿದ್ರು?  ಎಂದು ಪ್ರಶ್ನಿಸಿದ ಇಬ್ರಾಹಿಂ, ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಆಗದಿದ್ರೆ ಜೆಡಿಎಸ್  2 ಸ್ಥಾನ ಗೆಲ್ಲುತಿತ್ತು. ಈ ಸತ್ಯ ಯಾರೂ ಮರೆಮಾಚಲು‌ ಆಗಲ್ಲ. ನೀವು ಅಲ್ಲೇ ಬೇಕಾದರೂ ಇರಿ. ಭಜರಂಗದಳದ ರಾಜ್ಯಾಧ್ಯಕ್ಷರ ಥರ ಹೇಳಿಕೆ ನೀಡಬೇಡಿ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಯಾರೇ ಸ್ಪರ್ಧೆ ಮಾಡಿದರೂ ಜೆಡಿಎಸ್ ಸೋಲಲಿದೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜ್ ಅವರನ್ನು ನಿಲ್ಲಿಸಬೇಕೆಂದು ಚರ್ಚೆ ಮಾಡಿದ್ದಾರೆ. ಯಡಿಯೂರಪ್ಪ ಮಗ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ನಂತರ ಬಸನಗೌಡ ಪಾಟೀಲ್ ಯತ್ನಾಳ್  ಹತಾಶರಾಗಿದ್ದಾರೆ.

ಹಿಂದುತ್ವದ ವಿಚಾರದಲ್ಲಿ ಯತ್ನಾಳ್ ಹಾಗೂ ಕುಮಾರಸ್ವಾಮಿ ನಡುವೆ ಪೈಟ್ ನಡೆಯುತ್ತಿದೆ. ದತ್ತಮಾಲೆ, ಶಬರಿ ಮಾಲೆ ಒಂದು ತಿಂಗಳಿಗೆ ಹಾಕಬೇಡಿ, 12 ತಿಂಗಳಿಗೂ ಹಾಕಿ. ಸುಳ್ಳು ಹೇಳಲಾಗದು, ಮದ್ಯ ಕುಡಿಯಂಗಿಲ್ಲ ಎಂದು ಇಬ್ರಾಹಿಂ ವ್ಯಂಗ್ಯವಾಡಿದರು. 

ಯತ್ನಾಳ್ ಕುಟುಂಬದವರು ದರ್ಗಾಕ್ಕೆ ಹೋಗ್ತಾರೆ. ಜನರ ಸಮಸ್ಯೆ, ಬರಗಾಲ, ಉದ್ಯೋಗ ಸೇರಿದಂತೆ ಸಾಕಷ್ಟು ಸಮಸ್ಯೆಗಳು ರಾಜ್ಯದಲ್ಲಿವೆ. ಉಡುಪಿ ಹೋಟಲ್ ಗೆ ಹೋಗಿ ಬಿರಿಯಾನಿ ಕೇಳಬೇಡಿ, ನಿಮ್ಮ ಕೆಲಸ ನೀವು ಮಾಡಿ, ನಮ್ಮ ಕೆಲಸ ನಾವು ಮಾಡ್ತೇವೆ ಎಂದರು. 

ಇದನ್ನೂ ಓದಿ: "ಪ್ರಧಾನಿ ಮೋದಿ ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ಯತ್ನಾಳ್ ಆರೋಪ ಮಾಡುತ್ತಿದ್ದಾರೆ"

ರಾಜ್ಯದಲ್ಲಿ ಬೀಕರ ಬರಗಾಲ ಇದೆ. ಬಿಜೆಪಿ ನಾಯಕರು ವಿಧಾನಸೌಧದ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಮನೆ ಮುಂದೆ ಕುಳಿತು ಮನವಿ ಮಾಡಲಿ. ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ಮಾಡಿ , ವಾರಕ್ಕೆ ಒಂದು ಬಾರಿ ಸಭೆ ಸೇರಿ ರೈತರಿಗೆ ಪರಿಹಾರ ತಲುಪಿಸಿ, ಒಂದು ಕಮಿಟಿ ಮಾಡುವಂತೆ ಸಿಎಂಗೆ ಇಬ್ರಾಹಿಂ ಮನವಿ ಮಾಡಿದರು. 

ಮಧ್ಯ ಪ್ರದೇಶ ಚುನಾವಣೆ ಫಲಿತಾಂಶ ವಿಚಾರಕ್ಕೆ ಪ್ರತಿಕ್ರಿಯಿಸಿದ ಇಬ್ರಾಹಿಂ ಅವರು, ಇವಿಎಂ ಹ್ಯಾಕ್ ಮಾಡಿದ್ದಾರೆ. ಅಮೆರಿಕ ಸೇರಿದಂತೆ ಇತರ ದೇಶಗಳಲ್ಲಿ ಇವಿಎಂ ಇಲ್ಲ. ಇವಿಎಂ ಇರುವ ಕಡೆಗಳಲ್ಲಿ ಬಿಜೆಪಿ ಗೆದ್ದಿದೆ. ಎಲ್ಲಿ ಬೇಕೋ ಅಲ್ಲೇ ಬಿಜೆಪಿ ಬರುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇವಿಎಂನಲ್ಲಿ ಮತದಾನ ನಡೆಯಬಾರದು ಎಂದು ಹೇಳಿದರು.

ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ರಾಹುಲ್ ಗಾಂಧಿಯವರು ರಾಜ್ಯದಿಂದ ಸ್ಪರ್ಧೆಗೆ ಸ್ವಾಗತ. ಇಂದಿರಾ ಗಾಂಧಿ ರಾಜ್ಯದಿಂದ ಗೆದ್ದರು. ಅವರ ಮೊಮ್ಮಗ ಕೂಡ ರಾಜ್ಯದಿಂದ ಗೆಲ್ಲಲಿ. ನನಗೆ ಕಾಂಗ್ರೆಸ್ ಮೇಲೆ ಸಿಟ್ಟಿಲ್ಲ. ಕಾಂಗ್ರೆಸ್ ನಾಯಕ ಸಂಪರ್ಕದಲ್ಲೂ ಇಲ್ಲ ಎಂದ ಅವರು, ಮೂರನೇ ಶಕ್ತಿಯನ್ನು ಕಟ್ಟಲು ಹೊರಟಿದ್ದೇವೆ.  I.N.D.I.A  ಗೆ ಬೆಂಬಲ ನೀಡುವುದಾಗಿ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News