/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಕೊಪ್ಪಳ: ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಜನವರಿ 26ರಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮಗಳು ಆರಂಭಗೊಂಡಿವೆ.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ಸಂವಿಧಾನ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದು. ಪ್ರಶ್ನಾವಳಿ ನೀಡುವ ಮೂಲಕ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲಾ ಪಂಚಾಯತ್ ಮುಂದಾಗಿದೆ. ಈ ಪ್ರಶ್ನಾವಳಿಯಲ್ಲಿ ವಿದ್ಯಾರ್ಥಿ, ಯುವಜನರು ಸೇರಿದಂತೆ ಎಲ್ಲಾ ವಯೋಮಾನದವರು ಭಾಗಿಯಾಗಬಹುದಾಗಿದೆ. ಗೂಗಲ್ ಫಾರ್ಮ್ನಲ್ಲಿ ತಮ್ಮ ಹೆಸರು, ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಹುದ್ದೆಯನ್ನು ನಮೂದಿಸಿ, ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಹೆಸರು, ಇಮೇಲ್ ಐಡಿ ಸೇರಿದಂತೆ ಅಗತ್ಯ ಮಾಹಿತಿಯನ್ನು ನಮೂದಿಸಿದ ಬಳಿಕ ಪ್ರಶ್ನೋತ್ತರಕ್ಕೆ 10 ನಿಮಿಷಗಳ ಕಾಲ ಸಮಯವಿದ್ದು, ಒಟ್ಟು 15 ಪ್ರಶ್ನೆಗಳಿರುತ್ತವೆ. ಪ್ರಶ್ನಾವಳಿಯು ಕನ್ನಡ ಹಾಗೂ ಆಂಗ್ಲ ಭಾಷೆ ಎರಡಲ್ಲೂ ಲಭ್ಯವಿರುತ್ತದೆ. ಈ ಪ್ರಶ್ನಾವಳಿಯಲ್ಲಿ ಭಾಗವಹಿಸಲು ಇಚ್ಛೀಸುವ ಆಸಕ್ತರು ಕನ್ನಡ ಭಾಷೆಯಲ್ಲಿನ ಪ್ರಶ್ನೆಗಳಿಗಾಗಿ http://form-timer.com/start/09a56358 ನ್ನು ಮತ್ತು ಆಂಗ್ಲ ಭಾಷೆಯಲ್ಲಿನ ಪ್ರಶ್ನೆಗಳಿಗಾಗಿ http://form-timer.com/start/9a312aa1 ಲಿಂಕ್ ಮೂಲಕ ಭಾಗಿಯಾಗಬಹುದಾಗಿದೆ.

ಉತ್ತಮ ಪ್ರತಿಕ್ರಿಯೆ: ಸಂವಿದಾನ ಜಾಗೃತಿ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ರೂಪಿಸಿದ ಪ್ರಶ್ನಾವಳಿಗೆ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಫೆಬ್ರವರಿ 8ರವರೆಗೆ ಕನ್ನಡದಲ್ಲಿ 800 ಜನರು, ಅದೆ ರೀತಿ ಇಂಗ್ಲೀಷ್ ಪ್ರಶ್ನಾವಳಿಯಲ್ಲಿ 370 ಜನರು ಈಗಾಗಲೇ ಭಾಗಿಯಾಗಿದ್ದಾರೆ.

ಇದನ್ನೂ ಓದಿ: 2025 ರ ವೇಳೆಗೆ 2ನೇ ಹಂತದ ಮೆಟ್ರೋ ಮಾರ್ಗ ಲೋಕಾರ್ಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಜಿಲ್ಲಾ ಪಂಚಾಯತ್ ಸಿಇಓ ಮನವಿ: ಜನರಿಂದ ಜನರಿಗೋಸ್ಕರ ಜನರೇ ಆಳುವಂತಹ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರ್ಥಪೂರ್ಣವಾಗಿ ತಿಳಿಸುವ ಹಾಗೂ ಎಲ್ಲರೂ ಸಮಾನರಾಗಿ ಬಾಳಬೇಕು, ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವ ಸಂದೇಶ ನೀಡುವ ಭಾರತ ಸಂವಿಧಾನದ ಬಗ್ಗೆ ಪ್ರತಿಯೊಬ್ಬರೂ ಅರಿಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳು ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಸಂವಿಧಾನ ಜನಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಮುಂದುವರೆದು ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಪ್ರಶ್ನಾವಳಿಗಳ ಮೂಲಕ ಸಂವಿಧಾನ ಜಾಗೃತಿ ಕಾರ್ಯಕ್ರಮ ರೂಪಿಸಲಾಗಿದೆ. ಈ ಅಭಿಯಾನದಲ್ಲಿ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳ ಜನರು ಸಹ ಭಾಗಿಯಾಗಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Section: 
English Title: 
This District Panchayat took forward to create constitutional awareness through questioning..!
News Source: 
Home Title: 

ಪ್ರಶ್ನಾವಳಿ ಮೂಲಕ ಸಂವಿಧಾನ ಜಾಗೃತಿಗೆ ಮುಂದಾದ ಈ ಜಿಲ್ಲಾ ಪಂಚಾಯತಿ..!

 ಪ್ರಶ್ನಾವಳಿ ಮೂಲಕ ಸಂವಿಧಾನ ಜಾಗೃತಿಗೆ ಮುಂದಾದ ಈ ಜಿಲ್ಲಾ ಪಂಚಾಯತಿ..!
Caption: 
file photo
Yes
Is Blog?: 
No
Tags: 
Facebook Instant Article: 
Yes
Highlights: 

ಜನರಿಂದ ಜನರಿಗೋಸ್ಕರ ಜನರೇ ಆಳುವಂತಹ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರ್ಥಪೂರ್ಣವಾಗಿ ತಿಳಿಸುವ ಹಾಗೂ ಎಲ್ಲರೂ ಸಮಾನರಾಗಿ ಬಾಳಬೇಕು,

ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವ ಸಂದೇಶ ನೀಡುವ ಭಾರತ ಸಂವಿಧಾನದ ಬಗ್ಗೆ ಪ್ರತಿಯೊಬ್ಬರೂ ಅರಿಯಬೇಕು

ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿದೆ.

Mobile Title: 
ಪ್ರಶ್ನಾವಳಿ ಮೂಲಕ ಸಂವಿಧಾನ ಜಾಗೃತಿಗೆ ಮುಂದಾದ ಈ ಜಿಲ್ಲಾ ಪಂಚಾಯತಿ..!
Manjunath N
Publish Later: 
No
Publish At: 
Friday, February 9, 2024 - 11:17
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No
Word Count: 
282