ಕಿರಿಕ್‌ ಬೆಡಗಿಯ ʼಕ್ರೀಂʼ ಚಿತ್ರದ ಟ್ರೇಲರ್ ರಿಲೀಸ್‌..! ಇಲ್ಲಿದೆ ನೋಡಿ

ನಟಿ ಸಂಯುಕ್ತ ಹೆಗಡೆ ನಟನೆಯ ಅಭಿಷೇಕ್ ಬಸಂತ್ ನಿರ್ದೇಶನದ ಕ್ರೀಂ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಸಸ್ಪೇನ್ಸ್‌ ಥ್ರಿಲ್ಲರ್‌ ಕಥಾಹಂದರದ ಈ ಸಿನಿಮಾ ಕುತೂಹಲ ಮೂಡಿಸುತ್ತಿದೆ. 

Written by - YASHODHA POOJARI | Edited by - Krishna N K | Last Updated : Feb 16, 2024, 07:50 PM IST
  • ʼಕ್ರೀಂʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ
  • ನಟಿ ಸಂಯುಕ್ತ ಹೆಗಡೆ ನಾಯಕಿಯಾಗಿ ನಟಿಸಿರುವ ʼಕ್ರೀಂʼ ಚಿತ್ರ
  • ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರಿಂದ ಈ ಚಿತ್ರದ ಟ್ರೇಲರ್ ಅನಾವರಣ
ಕಿರಿಕ್‌ ಬೆಡಗಿಯ ʼಕ್ರೀಂʼ ಚಿತ್ರದ ಟ್ರೇಲರ್ ರಿಲೀಸ್‌..! ಇಲ್ಲಿದೆ ನೋಡಿ title=

Kreem kannada movie : ʼಕಿರಿಕ್ ಪಾರ್ಟಿʼ ಚಿತ್ರದ ಖ್ಯಾತಿಯ ನಟಿ ಸಂಯುಕ್ತ ಹೆಗಡೆ ನಾಯಕಿಯಾಗಿ ನಟಿಸಿರುವ ʼಕ್ರೀಂʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಮಾರ್ಚ್ ಒಂದರಂದು ಬಿಡುಗಡೆಯಾಗಲಿದೆ. ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರಿಂದ ಈ ಚಿತ್ರದ ಟ್ರೇಲರ್ ಅನಾವರಣವಾಯಿತು. 

ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಅವರು ಬರೆದಿದ್ದಾರೆ. ಈ ಚಿತ್ರದ ಪ್ರಮುಖಪಾತ್ರದಲ್ಲೂ ಅಗ್ನಿ ಶ್ರೀಧರ್ ನಟಿಸಿಸಿದ್ದಾರೆ.

ಇದನ್ನೂ ಓದಿ:ನವರಸನಾಯಕ ಈಗ ರಂಗನಾಯಕ ; ಮಾರ್ಚ್ 8 ಕ್ಕೆ‌ಆಟ ಶುರು

ನನಗೆ ಬರವಣಿಗೆಯಲ್ಲಿ ಹೆಚ್ಚು ಆಸಕ್ತಿ. ನಟನೆಯಲ್ಲಿ ನನಗೆ ಆಸಕ್ತಿ ಇರಲಿಲ್ಲ ಎಂದು ಮಾತು ಆರಂಭಿಸಿದ ಅಗ್ನಿ ಶ್ರೀಧರ್, ನಿರ್ಮಾಪಕ ದೇವೇಂದ್ರ ಅವರು ನನ್ನನ್ನು ಈ ಪಾತ್ರ ನಿರ್ವಹಣೆ ಮಾಡಲು ಹೆಚ್ಚು ಒತ್ತಾಯಿಸಿದರು. ನಾನು ಆಗಲ್ಲ ಎಂದು ಹೇಳಿದೆ.  ನಿರ್ಮಾಪಕರು ಹಾಗೂ ನನ್ನ ಹತ್ತಿರದವರ ಒತ್ತಾಯಕ್ಕೆ ನಾನು ನಟಿಸಲು ಒಪ್ಪಿಕೊಂಡೆ. ಈ ವಿಷಯವನ್ನು ಚಿತ್ರ ಬಿಡುಗಡೆಯಾಗುವವರೆಗೂ ಗೌಪ್ಯವಾಗಿಡೋಣ ಅಂತ ಹೇಳಿದ್ದೆ. ಆದರೆ ನಿರ್ಮಾಪಕರು ಟ್ರೇಲರ್ ನಲ್ಲೇ ನನ್ನನ್ನು ತೋರಿಸಿಬಿಟ್ಟಿದ್ದಾರೆ. ಇನ್ನು "ಕ್ರೀಂ" ಎಂದರೆ ಬೀಜಾಕ್ಷರ ಮಂತ್ರ. ಈ  ಚಿತ್ರದ ಕಥೆ ಹಣ ಹಾಗೂ ಅಧಿಕಾರಕ್ಕಾಗಿ ನಡೆಯುವ ಹೆಣ್ಣುಮಕ್ಕಳ ಬಲಿಯನ್ನು ಕುರಿತಾದ ಕಥಾಹಂದರ ಹೊಂದಿದೆ. ಈಗಲೂ ಕೂಡ ನಮ್ಮ ಊರು, ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಈ ಕೃತ್ಯ ನಡೆಯುತ್ತಲೇ ಇದೆ. ಇಂತಹ ಸೂಕ್ಷ್ಮ ವಿಚಾರವನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ.‌ ಅಭಿಷೇಕ್ ಬಸಂತ್ ಸೇರಿದಂತೆ ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಹಾಗೂ ಸಂಯುಕ್ತ ಹೆಗಡೆ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು.

 

ನಾನು ಸಮಯಕ್ಕೆ ಹೆಚ್ಚು ಬೆಲೆ ಕೊಡುತ್ತೇನೆ. ಹಾಗಾಗಿ ಎಲ್ಲಾ ಕಲಾವಿದರ  ಸಹಕಾರದಿಂದ ಚಿತ್ರೀಕರಣ ನಿಗದಿಯಂತೆ ಮುಕ್ತಾಯವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನನ್ನ ಮೊದಲ ನಿರ್ದೇಶನ ಮಾಡಬೇಕೆಂಬ ಆಸೆಯಿತ್ತು‌.‌ ಅಗ್ನಿ ಶ್ರೀಧರ್ ಅವರ ಈ ಕಥೆ ಬಹಳ ಇಷ್ಟವಾಯಿತು. ನನ್ನ ಮೊದಲ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಅಭಿಷೇಕ್ ಬಸಂತ್.

ಇದನ್ನೂ ಓದಿ:ಜ್ಯೂ. ಎನ್‌ಟಿಆರ್‌ ನಟನೆಯ ʼದೇವರʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌..!

ಐದು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಸಿನಿಮಾ ಇದು. ನಾನು ಈವರೆಗೂ ಮಾಡಿರದ ಪಾತ್ರವಿದು. ಆಕ್ಷನ್ ಕೂಡ ಮಾಡಿದ್ದೇನೆ ಎಂದು ಸಂಯುಕ್ತ ಹೆಗಡೆ ತಿಳಿಸಿದರು. 

ನಮ್ಮ ಚಿತ್ರದಲ್ಲಿ ನಟಿಸಬೇಕಿದ್ದ ಖಳನಟರೊಬ್ಬರು ಕಾರಣಾಂತರದಿಂದ ನಟಿಸಲು ಆಗಲ್ಲ ಎಂದಾಗ ನಾನು ಹಾಗೂ ನಿರ್ದೇಶಕರು ಬಹಳ ಒತ್ತಡದಲ್ಲಿದ್ದೆವು. ಆಗ ನನಗೆ ಈ ಪಾತ್ರವನ್ನು ಅಗ್ನಿ ಶ್ರೀಧರ್ ಅವರು ಮಾಡಿದರೆ ಚೆನ್ನಾಗಿರುತ್ತದೆ ಎಂದು ಅನಿಸಿತು. ಅವರ ಬಳಿ ನೀವೇ ಈ ಪಾತ್ರ ಮಾಡಬೇಕು ಎಂದು ಹೇಳಿದಾಗ ಅವರು ಒಪ್ಪಲಿಲ್ಲ.‌ ನಂತರ ಬಹಳ ಕಷ್ಟಪಟ್ಟು ಅವರನ್ನು ಒಪ್ಪಿಸಿದ್ದೆವು. ಚಿತ್ರತಂಡದ ಸಹಕಾರದಿಂದ "ಕ್ರೀಂ" ಚಿತ್ರ ಚೆನ್ನಾಗಿ ಬಂದಿದೆ. ಇದೇ ಮಾರ್ಚ್ ಒಂದರಂದು ಬಿಡುಗಡೆಯಾಗುತ್ತಿದೆ ಎಂದರು ನಿರ್ಮಾಪಕ ದೇವೇಂದ್ರ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News