ಸಂವಿಧಾನ ಜಾಗೃತಿ ಅಭಿಯಾನದ ಎರಡು ಇವೆಂಟ್ ಇಂಡಿಯನ್ ಬುಕ್ ಆಫ್ ರೆಕಾರ್ಡ್‍ಗೆ ಸೇರ್ಪಡೆ

ಭಾರತ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಂವಿಧಾನದ ಮಹತ್ವವನ್ನು ಪ್ರತಿ ಸಾಮಾನ್ಯ ಪ್ರಜೆಗೂ ತಲುಪಿಸುವ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸಂವಿಧಾನದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಆಯೋಜಿಸಲು ಆದೇಶಿಸಿತ್ತು.

Written by - Manjunath N | Last Updated : Feb 23, 2024, 11:20 PM IST
  • ಭಾರತ, ಸಂಸತ್ತನ್ನು ಬಿಡಿಸಿ ರಾಜ್ಯದಲ್ಲಿ 2ನೇ ಬಾರಿಗೆ ಮರಳು ಶಿಲ್ಪಕಲೆ ಮೂಲಕ ಸಂವಿಧಾನ ಜಾಥಾವನ್ನು ಮಾಡಿಸಲಾಯಿತು.
  • ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗೋಡೆಗಳ ಮೇಲೆ “ಸಂವಿಧಾನ ಕುರಿತು” ಚಿತ್ರ ಬಿಡಿಸುವ ಸ್ಪರ್ಧೆಯನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಯಿತು.
 ಸಂವಿಧಾನ ಜಾಗೃತಿ ಅಭಿಯಾನದ ಎರಡು ಇವೆಂಟ್ ಇಂಡಿಯನ್ ಬುಕ್ ಆಫ್ ರೆಕಾರ್ಡ್‍ಗೆ ಸೇರ್ಪಡೆ title=

ಧಾರವಾಡ: ಭಾರತ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಸಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಂವಿಧಾನದ ಮಹತ್ವವನ್ನು ಪ್ರತಿ ಸಾಮಾನ್ಯ ಪ್ರಜೆಗೂ ತಲುಪಿಸುವ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸಂವಿಧಾನದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಆಯೋಜಿಸಲು ಆದೇಶಿಸಿತ್ತು.

ಅದರಂತೆ ಧಾರವಾಡ ಜಿಲ್ಲೆಯಲ್ಲಿ ಜನವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಅವರು ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರಕ್ಕೆ ಪುμÁ್ಪರ್ಣೆ ಮಾಡುವ ಮೂಲಕ ಚಾಲನೆ ನೀಡಿದರು

ಜಿಲ್ಲೆಯಲ್ಲಿ ಇಂದು ಸಂವಿಧಾನ ಜಾಗೃತ ಜಾಥಾ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಮುಕ್ತಾಯಗೊಂಡಿದ್ದು, ಇದೇ ತಿಂಗಳ 24 ಮತ್ತು 25 ರಂದು ಜರಗುವ ರಾಜ್ಯ ಮಟ್ಟದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸ್ಥಬ್ದ ಚಿತ್ರದ ವಾಹನ ತೆರಳಿ, ಭಾಗವಹಿಸಲಿದೆ. ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಅತ್ಯಂತ ಯಶಸ್ವಿಯಾಗಿದ್ದು, ಜಾಥಾದ ವಿನೂತನ ಕಾರ್ಯಕ್ರಮಗಳಲ್ಲಿ ಎರಡು ಇವೆಂಟ್‍ಗಳು ಇಂಡಿಯಾ ಬುಕ್ ಆಫ್ ರೆಕಾರ್ಡಗೆ ಸೇರಿದ್ದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ಇದನ್ನೂ ಓದಿ: Bald Head Remedy: ಬೋಳು ತಲೆ ಸಮಸ್ಯೆಯಿಂದ ಶಾಶ್ವತ ಮುಕ್ತಿ ಪಡೆಯಬೇಕೆ? ಈ ಮನೆಎಣ್ಣೆ ಟ್ರೈ ಮಾಡಿ ನೋಡಿ!

ಒಟ್ಟು 29 ದಿನಗಳ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜನೆ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆಯಲ್ಲಿ ರಾಜ್ಯದ 31 ಜಿಲ್ಲೆಗಳನ್ನು ಸರಕಾರದಿಂದ ಪರಿಗಣಿಸಲಾಗಿದ್ದು, ಅವುಗಳಲ್ಲಿ ಧಾರವಾಡ ಜಿಲ್ಲೆ ಒಟ್ಟು 22 ದಿನಗಳ ಕಾಲ ರಾಜ್ಯಕ್ಕೆ ಹಾಗೂ ಬೆಳಗಾವಿ ವಿಭಾಗಕ್ಕೆ ಸಂವಿಧಾನ ಜಾಗೃತಿ ಜಾಥಾ ಆಯೋಜನೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಸಂವಿಧಾನ ಜಾಗೃತಿ ಜಾಥಾ: ಭಾರತದ ಸಂವಿಧಾನದ ಮಹತ್ವ, ಸಂವಿಧಾನವು ನೀಡಿರುವ ಹಕ್ಕು, ಸ್ವಾತಂತ್ರ್ಯಗಳು, ಅಧಿಕಾರಗಳು ಮತ್ತು ಸಂವಿಧಾನದಿಂದಲೇ ಭಾರತದ ಮತ್ತು ರಾಜ್ಯದ ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕøತಿಕ, ಶೈಕ್ಷಣಿಕ ಮತ್ತು ಸರ್ವಾಂಗೀಣ ಅಭಿವೃದ್ಧಿ ಎಂಬ ಸಂದೇಶವನ್ನು ಎಲ್ಲರಿಗೂ ತಿಳಿಯಪಡಿಸುವ ಮತ್ತು ಅರಿವು ಮೂಡಿಸುವುದು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜನವರಿ 26, 2024 ರಿಂದ ಫೆಬ್ರವರಿ 24, 2024ರ ವರೆಗೆ ಜಿಲ್ಲೆಗಳಲ್ಲಿನ ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಧಾರವಾಡ ಜಿಲ್ಲೆಯ 146 ಗ್ರಾಮ ಪಂಚಾಯತಗಳು, 7 ಸ್ಥಳೀಯ ನಗರ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲಾ ವಾರ್ಡ್‍ಗಳು ಸೇರಿ ಒಟ್ಟು 1,528 ಕಿ.ಮೀ. ಗಳುದ್ದಕ್ಕೂ ಜಾಥಾ ಸಂಚರಿಸಿದೆ. ಜಾಥಾ ಸಂಚರಿಸುವ ಸಂದರ್ಭದಲ್ಲಿ ಜಿಲ್ಲೆಯ ಸ್ಥಳೀಯ, ಐತಿಹಾಸಿಕ ವ್ಯಕ್ತಿಗಳು, ಸ್ಥಳೀಯ ಕಲೆ, ಸಂಸ್ಕøತಿ ಇತ್ಯಾದಿಗಳನ್ನು ಒಳಗೊಂಡಿರುವ ವಿಷಯಗಳ ಬಗ್ಗೆ ಹಾಗೂ ಭಾರತ ಸಂವಿಧಾನದ “ಅನುಚ್ಚೇದ 41”ರ ರಾಜನಿರ್ದೇಶಕ ತತ್ವದ ಮಹತ್ವ ಕುರಿತು ಉಪನ್ಯಾಸ ಮತ್ತು ವಿವಿಧ ಕಲಾ ತಂಡಗಳಿಂದ ಕಲಾ ಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿತ್ತು.

ಈ ಐತಿಹಾಸಿಕ ಮತ್ತು ಸ್ಪೂರ್ತಿದಾಯಕವಾದ ಕಾರ್ಯಕ್ರಮದ ಪ್ರಯುಕ್ತ ಫೆಬ್ರವರಿ 15, ರಂದು ರಾಜ್ಯದಲ್ಲಿ ಪ್ರಥಮ ಬಾರಿಗೆ ತೃತಿಯ ಲಿಂಗಿಗಳ ಜಾಥಾವನ್ನು ಹುಬ್ಬಳ್ಳಿಯ ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿವರೆಗೂ ತೃತಿಯ ಲಿಂಗಿಗಳ, ದೇವದಾಸಿ ಮಹಿಳೆಯರ, ಪರಿತ್ಯಕ್ತ ಮಹಿಳೆಯರ, ಅಂಗನವಾಡಿ ಕಾರ್ಯಕರ್ತರ, ಆಶಾ ಕಾರ್ಯಕರ್ತರ ಮತ್ತು ದಮನಿತ ಮಹಿಳೆಯರ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿ ಮೊದಲ ಬಾರಿಗೆ ಫೆಬ್ರವರಿ 16, 2024ರಂದು ಧಾರವಾಡ ನಗರ ಕೆ.ಸಿ.ಡಿ. ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯವರೆಗೆ ಸುಮಾರು 500 ಕ್ಕೂ ಹೆಚ್ಚು ಜನ ಅಂಗವಿಕಲರು ಸಂವಿಧಾನ ಜಾಗೃತಿಗಾಗಿ, ತಮ್ಮ ತ್ರಿಚಕ್ರ ವಾಹನಗಳೊಂದಿಗೆ ರ್ಯಾಲಿಯನ್ನು ಏರ್ಪಡಿಸಿದ್ದರು.

“ಪಾರಂಪರಿಕ ನಡಿಗೆ” ಮತ್ತು “ಪಂಜಿನ ಮೆರವಣಿಗೆ” ಇಂಡಿಯಾ ಬುಕ್ ಆಫ್ ರೆಕಾರ್ಡ (Indian Book of Record)ಗೆ ಸೇರ್ಪಡೆ: ದೇಶದಲ್ಲಿ ಪ್ರಥಮ ಬಾರಿಗೆ ಫೆಬ್ರವರಿ 17, 2024ರಂದು ಧಾರವಾಡದಲ್ಲಿ ಕೆ.ಸಿ.ಡಿ. ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್‍ರವರು ಸ್ಥಾಪಿಸಿರುವ ವಿದ್ಯಾರ್ಥಿ ನಿಲಯದವರೆಗೂ “ಪಾರಂಪರಿಕ ನಡಿಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ 10,000ಕ್ಕೂ ಅಧಿಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ನಾಯಕರು, ಪದಾಧಿಕಾರಿಗಳು, ಸಾರ್ವಜನಿಕರು, ಅಧಿಕಾರಿಗಳು ಭಾಗವಹಿಸಿದ್ದರು. ಈ “ಪಾರಂಪರಿಕ ನಡಿಗೆ” ಕಾರ್ಯಕ್ರಮವು “Indian Book of Record” ಗೆ ಸೇರ್ಪಡೆಯಾಗಿದೆ.

ಫೆ.19, 2024 ರಂದು ದೇಶದಲ್ಲಿ ಪ್ರಥಮ ಬಾರಿಗೆ 15,000 ಕ್ಕೂ ಹೆಚ್ಚು ಜನರಿಂದ “ಪಂಜಿನ ಮೆರವಣಿಗೆ”ಯನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್‍ನಿಂದ ರಾಣಿ ಚೆನ್ನಮ್ಮ ವೃತ್ತದವರೆಗೂ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವು ಸಹ “Indian Book of Record” ಗೆ ಸೇರ್ಪಡೆಯಾಗಿದೆ.

ಫೆ.19, 2024 ಮರಳು (Sand Art) ದಲ್ಲಿ ಭಾರತದ ಸಂವಿಧಾನ ಮತ್ತು ಭಾರತ, ಸಂಸತ್ತನ್ನು ಬಿಡಿಸಿ ರಾಜ್ಯದಲ್ಲಿ 2ನೇ ಬಾರಿಗೆ ಮರಳು ಶಿಲ್ಪಕಲೆ ಮೂಲಕ ಸಂವಿಧಾನ ಜಾಥಾವನ್ನು ಮಾಡಿಸಲಾಯಿತು. ಮತ್ತು ಫೆ 23, 2024 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗೋಡೆಗಳ ಮೇಲೆ “ಸಂವಿಧಾನ ಕುರಿತು” ಚಿತ್ರ ಬಿಡಿಸುವ ಸ್ಪರ್ಧೆಯನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಯಿತು.

ಸಂವಿಧಾನ ಘೋಷ ವಾಕ್ಯ (Constitution Quotation) ರಚನೆ ಎಂಬ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಉತ್ತಮ ಘೋಷವಾಕ್ಯಗಳನ್ನು ಸಲ್ಲಿಸಿದವರಿಗೆ ಬಹುಮಾನ ವಿತರಿಸಲಾಗುತ್ತಿದೆ. ಸಂವಿಧಾನದ ಬಗ್ಗೆ ಒಂದು ನಿಮಿಷದ ಭಾಷಣ (“One minute on our Constitution”) ಎಂಬ ಸ್ಪರ್ಧೆಯನ್ನು 18-30 ವರ್ಷ ಒಳಗಿರುವ ಯುವಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದು, ಉತ್ತಮವಾದ ವಿಡಿಯೋವನ್ನು ಕಳುಹಿಸಿರುವ, ಉತ್ತಮ ಮಾಹಿತಿ ಮತ್ತು ವಿಷಯ ಮಂಡನೆ ಸಮರ್ಥವಾಗಿ ಮಾಡಿರುವವರಿಗೆ ಜಿಲ್ಲಾಡಳಿತ ವತಿಯಿಂದ ಪ್ರಥಮ, ದ್ವಿತಿಯ ಹಾಗೂ ತೃತಿಯ ಬಹುಮಾನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕಸೂರಿ ಮೆಂತ್ಯ ಮನೆಯಲ್ಲಿ ತಯಾರಿಸುವ ಮಾರ್ಗ ಇಲ್ಲಿದೆ..!

ಜಿಲ್ಲೆಯಲ್ಲಿ ಸುಮಾರು 2,30,000 ಸಂವಿಧಾನ ಪೀಠಿಕೆಯ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗಿದೆ. 2 ಲಕ್ಷಕ್ಕೂ ಅಧಿಕ ಮಕ್ಕಳು (ಶಾಲಾ-ಕಾಲಾಜು),

ಕಳೆದ ಒಂದು ಬತಿಂಗಳಿಂದ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ನಾಯಕರು, ಪದಾಧಿಕಾರಿಗಳು, ಸಾರ್ವಜನಿಕರು, ಅಧಿಕಾರಿಗಳು ್ಲ ಭಾಗವಹಿಸಿದ್ದಾರೆ. ಸಂವಿಧಾನ ಜಾಗೃತಿ ಜಾಥಾದ ಅರಿವು ಮೂಡಿಸುವ ಚಟುವಟಿಕೆಗಳಲ್ಲಿ ರಾಜ್ಯಕ್ಕೆ ಹಾಗೂ ಬೆಳಗಾವಿ ವಿಭಾಗ ಮಟ್ಟದಲ್ಲಿ ಧಾರವಾಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.

ಇಂಡಿಯನ್ ಬುಕ್ ಆಫ್ ರೆಕಾರ್ಡ ಪ್ರಮಾಣಪತ್ರ : ನಾಳೆ ಫೆ.24 ರಂದು ಹುಬ್ಬಳ್ಳಿಯ ಮಹಾನಗರ ಪಾಲಿಕೆ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ದೆಹಲಿಯ ಇಂಡಿಯಾ ಬುಕ್ಕ್ ಆಫ್ ರೆಕಾರ್ಡ ಸಂಸ್ಥೆಯ ತೀರ್ಪುಗಾರ ನರವಿಜಯ ಅವರಿಂದ ಜಿಲ್ಲೆಯ ಪರವಾಗಿ ಎರಡು ವಿಶೇಷ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಗಾಗಿ, ಇಂಡಿಯನ್ ಬುಕ್ ಆಫ್ ರೆಕಾರ್ಡ ಪ್ರಮಾಣಪತ್ರ ಪಡೆಯಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಧಾರವಾಡದ ಅಪರ ನಿರ್ದೇಶಕ ಅಲ್ಲಾಭಕಾಷ ಎಂ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News