NWKRTC : ಹುಬ್ಬಳ್ಳಿಗೆ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಬಸ್ ವ್ಯವಸ್ಥೆ

Hubli : ಮಾರ್ಚ್ 8 ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. 

Written by - Zee Kannada News Desk | Last Updated : Mar 3, 2024, 08:57 PM IST
  • ಅನುಕೂಲಕ್ಕಾಗಿ ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
  • ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
  • ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ.
NWKRTC : ಹುಬ್ಬಳ್ಳಿಗೆ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಬಸ್ ವ್ಯವಸ್ಥೆ  title=

Special bus system for Hubli : ಈ ತಿಂಗಳ ಮಾರ್ಚ್ 8 ರಂದು ಮಹಾ ಶಿವರಾತ್ರಿ ಹಬ್ಬ ಹಾಗೂ ಸಾಲು ಸಾಲು ಸಾರ್ವಜನಿಕ ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಬಾರಿ ಮಾರ್ಚ್ 8 ರಂದು ಶುಕ್ರವಾರ ಮಹಾ ಶಿವರಾತ್ರಿ, ಮಾರ್ಚ್ 9 ರಂದು ಎರಡನೇ ಶನಿವಾರ ಹಾಗೂ ಮಾರ್ಚ್ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿದ್ದು, ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನು ಓದಿ : Krishi Thapanda :  'ಆಫ್ರಿಕಾದಲ್ಲಿ ಕ್ರಿಷಿ' ಸೀರೆಯಲ್ಲಿ ಕ್ಯಾಮೆರಾ ಹಿಡಿದು ನಿಂತ ಬೆಡಗಿ : ಫೋಟೋಸ್ ಇಲ್ಲಿವೆ 

ಸರ್ಕಾರಿ, ಖಾಸಗಿ ಉದ್ಯೋಗಿಗಳು, ಇತರೆ ಕಾರ್ಯ ನಿಮಿತ್ಯ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಹಲವರು ಶಿವರಾತ್ರಿ ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಮಾರ್ಚ್ 7 ರ ಗುರುವಾರ ಹಾಗೂ ಮಾರ್ಚ್ 8 ಶುಕ್ರವಾರ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಇದನ್ನು ಓದಿ : Indian Horticultural Research Institute : ಬೆಂಗಳೂರಿನ ಹೆಸರಘಟ್ಟದಲ್ಲಿ ಮಾರ್ಚ್ 5 ರಿಂದ ತೋಟಗಾರಿಕಾ ಮೇಳ 2024

ಅದೇ ರೀತಿ ರಜೆ ಮುಗಿಸಿ ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮಾರ್ಚ್ 10ರ ಭಾನುವಾರ ಹಾಗೂ ಮಾರ್ಚ್ 11 ರಂದು ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News