ಬಸವತತ್ವವೇ ಶಾಶ್ವತ; ಯೋಗ ವಿಜ್ಞಾನವನ್ನು ಕಲಿತು ಅಭ್ಯಸಿಸಿ: ಸಿಎಂ ಸಿದ್ದರಾಮಯ್ಯ ಕರೆ

ಬಳ್ಳಾರಿ: ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ "ಯೋಗ ರತ್ನ-2024" ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

Written by - Prashobh Devanahalli | Last Updated : Jun 20, 2024, 10:17 PM IST
    • ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು
    • ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾದೆ
    • ಸ್ವಾಮೀಜಿಗಳ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದರು
ಬಸವತತ್ವವೇ ಶಾಶ್ವತ; ಯೋಗ ವಿಜ್ಞಾನವನ್ನು ಕಲಿತು ಅಭ್ಯಸಿಸಿ: ಸಿಎಂ ಸಿದ್ದರಾಮಯ್ಯ ಕರೆ title=
CM Siddaramaiah

ಬಳ್ಳಾರಿ: ವರ್ಗರಹಿತ, ಜಾತಿ ರಹಿತ ಸಮ ಸಮಾಜದ ಮೌಲ್ಯವನ್ನು ಮನುಕುಲದಲ್ಲಿ ಬಿತ್ತಿದ ಬಸವ ತತ್ವವೇ ಶಾಶ್ವತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶ್ವಾಸಯೋಗ ಸಂಸ್ಥೆ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಆಯೋಜಿಸಿದ್ದ "ಯೋಗ ರತ್ನ-2024" ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಣೆ ಮಾಡುವುದಕ್ಕೆ ಮೊದಲೇ ನಾನು ರಾಜ್ಯದಲ್ಲಿ ಯೋಗ ದಿನವನ್ನು ಆಚರಿಸುವ ಮೂಲಕ ಯೋಗ ವಿಜ್ಞಾನವನ್ನು ಜನರಲ್ಲಿ ವಿಸ್ತರಿಸುವ ಕಾರ್ಯಕ್ಕೆ ಮುಂದಾದೆ ಎಂದರು.

ಇದನ್ನೂ ಓದಿ: ವಿರಾಟ್ ಕೊಹ್ಲಿ ಸ್ವಾರ್ಥಿ, ಆತ ದಾಖಲೆಗಳಿಗಷ್ಟೇ ಆಡುತ್ತಾನೆ: ಕ್ರಿಕೆಟಿಗನ ಶಾಕಿಂಗ್ ಹೇಳಿಕೆ

ಸಮಾಜದ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತುಡಿಯುತ್ತಿರುವ ಸ್ವಾಮೀಜಿಗಳು ಒಟ್ಟಾಗಿ ತಮ್ನನ್ನು ಮತ್ತು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಒಪ್ಪಿ ಆಶೀರ್ವದಿಸಿದಕ್ಕಾಗಿ ಸ್ವಾಮೀಜಿಗಳ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ಅರ್ಪಿಸಿದರು.  

ನಿಮ್ಮ ಮನಸ್ಸು , ದೇಹ, ಅಧ್ಯಾತ್ಮಿಕ ಚೈತನ್ಯ ಆರೋಗ್ಯಕರವಾಗಿ ಇರಬೇಕಾದರೆ ಯೋಗ ವಿಜ್ಞಾನದ ಜ್ಞಾನವನ್ನು ಕಲಿತು, ಪ್ರಾಕ್ಟೀಸ್ ಮಾಡಬೇಕು. ಇದರಿಂದ ಮನಸ್ಸು, ದೇಹ ಮತ್ತು ದೇಶ ರೋಗ ರಹಿತವಾಗಿ ಸಮಾಜಮುಖಿಯಾಗಿ ಬೆಳೆಯುತ್ತದೆ ಎಂದರು.

ಪರಸ್ಪರ ಮನುಷ್ಯ ಗೌರವ, ಮನುಷ್ಯ ಪ್ರೇಮ ತ್ಯಾಗ ವಿಜ್ಞಾನದಿಂದ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:  ಸೂರ್ಯಕುಮಾರ್ ಅರ್ಧಶತಕ, ಪಾಂಡ್ಯ ಸಿಕ್ಸರ್ ಅಬ್ಬರ: ಸೂಪರ್ 8ರಲ್ಲಿ ಟೀಂ ಇಂಡಿಯಾ ‘ಸೂಪರ್’ ಬ್ಯಾಟಿಂಗ್

ವಚನಾನಂದ ಸ್ವಾಮಿಗಳು, ಇಳಕಲ್ ಮಠದ ಶರಣರು ಸೇರಿ 50 ಮಂದಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್, ಸಂಸದ ಈ.ತುಕಾರಾಂ, ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News