ಬಡವರ ವಿರೋಧಿ, ಅಲ್ಪಸಂಖ್ಯಾತ ಸಮುದಾಯ ದ್ವೇಷಿ ಬಜೆಟ್: ಸಚಿವ ಜಮೀರ್ ಅಹಮದ್ ಖಾನ್ ಟೀಕೆ

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿ ಎಸ್ ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ʼನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ ಎಂದು ಹೇಳಿದ್ದಾರೆ.  

Written by - Prashobh Devanahalli | Last Updated : Jul 23, 2024, 08:42 PM IST
    • ಬಜೆಟ್ ಬಡ ಜನರ ವಿರೋಧಿ ಎಂದ ಸಚಿವ ಜಮೀರ್ ಅಹಮದ್ ಖಾನ್
    • ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಸಮರ್ಪಕ ಅನುದಾನ ನಿಗದಿ ರೂಪಿಸಿಲ್ಲ
    • ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಟೀಕೆ
ಬಡವರ ವಿರೋಧಿ, ಅಲ್ಪಸಂಖ್ಯಾತ ಸಮುದಾಯ ದ್ವೇಷಿ ಬಜೆಟ್: ಸಚಿವ ಜಮೀರ್ ಅಹಮದ್ ಖಾನ್ ಟೀಕೆ  title=
File Photo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡ ಜನರ ವಿರೋಧಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಟೀಕಿಸಿದ್ದಾರೆ.

ಇದನ್ನೂ ಓದಿ:  Cinnamon Water: ಮೆದುಳಿನಿಂದ ಹೃದಯದವರೆಗೂ ತುಂಬಾ ಲಾಭದಾಯಕ ಈ ಆಯುರ್ವೇದ ಪಾನೀಯ

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿ ಎಸ್ ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ʼನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ ಎಂದು ಹೇಳಿದ್ದಾರೆ.

ಬಡವರು ಕಟ್ಟಿಕೊಳ್ಳುವ ಮನೆಗೆ ಶೇ. 18 ರಷ್ಟು ಜಿಎಸ್ʼಟಿ ವಿಧಿಸುತ್ತಿದ್ದು ಜಿಎಸ್ʼಟಿ ವಿನಾಯಿತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದರು. ಆದರೂ ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಬಡವರ ಮನೆಗೆ ಸಬ್ಸಿಡಿ ಹೆಸರಿನಲ್ಲಿ ಕೇಂದ್ರದಿಂದ 1.50 ಲಕ್ಷ ರೂ. ಕೊಟ್ಟು ಜಿ ಎಸ್ ಟಿ ಹೆಸರಿನಲ್ಲಿ 1 ಲಕ್ಷ 20 ಸಾವಿರ ಪಡೆಯಲಾಗುತ್ತಿದೆ. ಇದು ಬಡವರ ಪರ ಕಾಳಜಿಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:  ಮಂತ್ರಿ ಜೊತೆ ನನ್ನ ಪತ್ನಿಗೆ ಅಫೇರ್... ಅದಕ್ಕೆ ಅವಳನ್ನ ಕೊಂದುಬಿಟ್ಟೆ! ನಟ ಸಂಜಯ್‌ ದತ್‌ ಸೆನ್ಸೇಷನಲ್‌ ಹೇಳಿಕೆ ವೈರಲ್‌

ಕೇಂದ್ರ ಬಜೆಟ್ʼನಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಸಮರ್ಪಕ ಅನುದಾನ ನಿಗದಿ ಅಥವಾ ಯೋಜನೆ ರೂಪಿಸಿಲ್ಲ. ಇದು ಆ ಸಮುದಾಯಗಳ ಬಗ್ಗೆ ಬಿಜೆಪಿ ಗೆ ಇರುವ ದ್ವೇಷಕ್ಕೆ ಸಾಕ್ಷಿ, ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಗೆ 2200 ಕೋಟಿ ರೂ. ಇಟ್ಟಿದೆ. ಆದರೆ ಕೇಂದ್ರ ಸರ್ಕಾರ ಇಡೀ ದೇಶಕ್ಕೆ 3164 ಕೋಟಿ ರೂ. ಇಟ್ಟಿದೆ. ಅಲ್ಪಸಂಖ್ಯಾತ ಸಮುದಾಯ ಈ ದೇಶದ ಪ್ರಜೆಗಳಲ್ಲವೇ? ಎಂದು ಸಚಿವರು ಪ್ರೆಶ್ನೆ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News