ಭಾರತದಲ್ಲಿನ ಹಿಂಸಾಚಾರ ಸಾವು ಪ್ರಕರಣಗಳಿಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅಮೇರಿಕಾ

ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಹೆಚ್ಚಿರುವ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ಸಾವುಗಳ ಬಗ್ಗೆ ಯುಎಸ್ ಹೌಸ್ ವಿದೇಶಾಂಗ ವ್ಯವಹಾರಗಳ ಸಮಿತಿ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

Last Updated : Feb 26, 2020, 11:20 PM IST
ಭಾರತದಲ್ಲಿನ ಹಿಂಸಾಚಾರ ಸಾವು ಪ್ರಕರಣಗಳಿಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅಮೇರಿಕಾ  title=
file photo

ನವದೆಹಲಿ: ಈಶಾನ್ಯ ದೆಹಲಿಯ ಕೆಲವು ಭಾಗಗಳಲ್ಲಿ ಹೆಚ್ಚಿರುವ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ಸಾವುಗಳ ಬಗ್ಗೆ ಯುಎಸ್ ಹೌಸ್ ವಿದೇಶಾಂಗ ವ್ಯವಹಾರಗಳ ಸಮಿತಿ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಮಿತಿಯ ಅಧ್ಯಕ್ಷ ಎಲಿಯಟ್ ಎಂಗಲ್ 'ಕಳೆದ ಎರಡು ದಿನಗಳಿಂದ ಭಾರತದಲ್ಲಿ ಕೋಮು ಹಿಂಸಾಚಾರದಿಂದ ಸಾವನ್ನಪ್ಪಿದ್ದಾರೆ. ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ, ಆದರೆ ಅವರು ಶಾಂತಿಯುತವಾಗಿರಬೇಕು ಮತ್ತು ಪೊಲೀಸರು ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು 'ಎಂದು ಹೇಳಿದ್ದಾರೆ.

ಇನ್ನೊಂದೆಡೆ ಯುಎಸ್ ಸೆನೆಟರ್ ಎಲಿಜಬೆತ್ ವಾರೆನ್ 'ಭಾರತದಂತಹ ಪ್ರಜಾಪ್ರಭುತ್ವ ಪಾಲುದಾರರೊಂದಿಗೆ ಸಂಬಂಧವನ್ನು ಬಲಪಡಿಸುವುದು ಮುಖ್ಯವಾಗಿದೆ. ಆದರೆ ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ನಮ್ಮ ಮೌಲ್ಯಗಳ ಬಗ್ಗೆ ನಾವು ಸತ್ಯವಾಗಿ ಮಾತನಾಡಲು ಶಕ್ತರಾಗಿರಬೇಕು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರವು ಎಂದಿಗೂ ಸ್ವೀಕಾರಾರ್ಹವಲ್ಲ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹಿಂದಿನ ದಿನ ದೆಹಲಿ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಹೊರಗಿನ ದುಷ್ಕರ್ಮಿಗಳು ಗಲಭೆಯಲ್ಲಿ ತೊಡಗಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಸೈನ್ಯವನ್ನು ಕರೆಸಿಕೊಳ್ಳುವುದು ಅಗತ್ಯವೆಂದು ತೋರುತ್ತದೆ. ಏತನ್ಮಧ್ಯೆ, ಈಶಾನ್ಯ ದೆಹಲಿಯಲ್ಲಿ ಜನಸಮೂಹ ದಾಳಿಗೆ ಕಾರಣವಾಗುವ ಪ್ರಚೋದನಕಾರಿ ಭಾಷಣಗಳನ್ನು ನೀಡಿದ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ನೋಂದಣಿ ವಿಳಂಬದ ಬಗ್ಗೆ ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಮತ್ತು ಈ ಬಗ್ಗೆ ಪ್ರಜ್ಞಾಪೂರ್ವಕ ನಿರ್ಧಾರ ತೆಗೆದುಕೊಂಡು ಗುರುವಾರ ತಿಳಿಸುವಂತೆ ಪೊಲೀಸ್ ಆಯುಕ್ತರನ್ನು ಕೇಳಿದೆ. ನ್ಯಾಯಾಲಯವು ಪರಿಸ್ಥಿತಿ ತುಂಬಾ ಅಹಿತಕರ ಮತ್ತು "1984 ರಂತೆ ಮತ್ತೊಂದು ಗಲಭೆಯನ್ನು ನಾವು ಅನುಮತಿಸಲು ಸಾಧ್ಯವಿಲ್ಲ" ಎಂದು ಹೇಳಿದೆ. ಇದೇ ವೇಳೆ ಆಡಳಿತಯಂತ್ರ ಬಹಳ ಜಾಗರೂಕರಾಗಿರಬೇಕು' ಎಂದು ಹೇಳಿದೆ.

ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಬುಧವಾರ 27 ಕ್ಕೆ ಏರಿತು, ಕನಿಷ್ಠ 250 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾನುವಾರದಿಂದ ಪ್ರಾರಂಭವಾದ ಹಿಂಸಾಚಾರಕ್ಕೆ ತುತ್ತಾದ ಈಶಾನ್ಯ ದೆಹಲಿ ಪ್ರದೇಶ ಅಕ್ಷರಶಃ ರಣಭೂಮಿಯಾಗಿತ್ತು.

Trending News