ಬರೀ ಘೋಷಣೆ ಕೂಗಿ, ಕೇಸರಿ ಶಾಲು ಹಾಕಿಕೊಂಡರೆ ಹಿಂದುತ್ವ ಅಲ್ಲ; ಹಿಂದುತ್ವ ಬಿಜೆಪಿಗರ ಸ್ವತ್ತೂ ಅಲ್ಲ: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಆಕ್ರೋಶ

ಬಿಜೆಪಿ ಅನ್ನೋ ಪಕ್ಷ, ಹಿಂದೂ ಮಹಾಸಭಾಗಳಂತಹ ಸಂಘಟನೆಗಳು ಹುಟ್ಟುವುದಕ್ಕಿಂತ ಮೊದಲೇ ಈ ಧಾರ್ಮಿಕ ಆಚರಣೆಗಳು ಇವೆ. ಈ ಮೊದಲು ಗಂಗಾರತಿ, ಅಯೋಧ್ಯೆಯೂ ಇತ್ತು. ಇವೆಲ್ಲವೂ ಬಿಜೆಪಿ ಬಂದ ಮೇಲೆ ಬಂದಿದ್ದಲ್ಲ. ಸಂಪ್ರದಾಯ, ಧಾರ್ಮಿಕ ಆಚರಣೆಗಳು ಬಿಜೆಪಿ ಮತ್ತು ಅಶೋಕ್ ಅವರ ಗುತ್ತಿಗೆ ಅಲ್ಲ.

Written by - Bhavishya Shetty | Last Updated : Sep 23, 2024, 02:31 PM IST
    • ಗಂಗಾರತಿ, ಕಾವೇರಿ ಆರತಿ ಇವೆಲ್ಲವೂ ಬಿಜೆಪಿಗರ ಗುತ್ತಿಗೆ ಅಲ್ಲ
    • ನಮ್ಮ ಪೂರ್ವಜರು ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ
    • ಬಿಜೆಪಿ ವಿರುದ್ಧ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಆಕ್ರೋಶ
ಬರೀ ಘೋಷಣೆ ಕೂಗಿ, ಕೇಸರಿ ಶಾಲು ಹಾಕಿಕೊಂಡರೆ ಹಿಂದುತ್ವ ಅಲ್ಲ; ಹಿಂದುತ್ವ ಬಿಜೆಪಿಗರ ಸ್ವತ್ತೂ ಅಲ್ಲ: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಆಕ್ರೋಶ title=
File Photo

Minister N Cheluvarayaswamy: ಹಿಂದೂ ಧಾರ್ಮಿಕ ಆಚರಣೆ, ಹಿಂದೂ ಸಂಪ್ರದಾಯಗಳು ಗಂಗಾರತಿ, ಕಾವೇರಿ ಆರತಿ ಇವೆಲ್ಲವೂ ಬಿಜೆಪಿಗರ ಗುತ್ತಿಗೆ ಅಲ್ಲ. ಅನಾದಿ ಕಾಲದಿಂದಲೂ ನಮ್ಮ ಪೂರ್ವಜರು ಆಚರಣೆ ಮಾಡಿಕೊಂಡು ಬರುತ್ತಿದ್ದಾರೆ. ವಾರಾಣಸಿ, ಹರಿದ್ವಾರಗಳಲ್ಲಿ ಈ ಆಚರಣೆ ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.

ಇದನ್ನೂ ಓದಿ: ಒಂದೇ ಎಸೆತಕ್ಕೆ ಬರೋಬ್ಬರಿ 286 ರನ್...‌ ಇಡೀ ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ದಾಖಲೆ ಇದು! ಈ ಚಿತ್ರವಿಚಿತ್ರ ದಾಖಲೆ ಬರೆದವರು ಯಾರು ಗೊತ್ತಾ?

ಬಿಜೆಪಿ ಅನ್ನೋ ಪಕ್ಷ, ಹಿಂದೂ ಮಹಾಸಭಾಗಳಂತಹ ಸಂಘಟನೆಗಳು ಹುಟ್ಟುವುದಕ್ಕಿಂತ ಮೊದಲೇ ಈ ಧಾರ್ಮಿಕ ಆಚರಣೆಗಳು ಇವೆ. ಈ ಮೊದಲು ಗಂಗಾರತಿ, ಅಯೋಧ್ಯೆಯೂ ಇತ್ತು. ಇವೆಲ್ಲವೂ ಬಿಜೆಪಿ ಬಂದ ಮೇಲೆ ಬಂದಿದ್ದಲ್ಲ. ಸಂಪ್ರದಾಯ, ಧಾರ್ಮಿಕ ಆಚರಣೆಗಳು ಬಿಜೆಪಿ ಮತ್ತು ಅಶೋಕ್ ಅವರ ಗುತ್ತಿಗೆ ಅಲ್ಲ. ಎಲ್ಲ ಪರಂಪರೆಗಳನ್ನು ಕಾಂಗ್ರೆಸ್ ಪಕ್ಷವು ಮುಂದುವರಿಸಿಕೊಂಡು ಬಂದಿರುವುದಕ್ಕೆ ಇಂದು ಬಿಜೆಪಿಯವರು ಈ ವಿಷಯವನ್ನು ಇಟ್ಟುಕೊಂಡು ಎಗರಾಡುತ್ತಿದ್ದಾರೆ. ಇದರ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಧಾರ್ಮಿಕ ಆಚರಣೆ ನೆಪದಲ್ಲಿ ಕಿಡಿಗೇಡಿ ಕೆಲಸ ಮಾಡಿದರೆ ಕಾನೂನು ಕ್ರಮವನ್ನು ಕೈಗೊಳ್ಳುವುದು ಆಯಾ ಸರ್ಕಾರಗಳ ಜವಾಬ್ದಾರಿಯಾಗುತ್ತದೆ. ಇದು ಅವರ ಸರ್ಕಾರ ಇದ್ದರೂ ಸರಿ, ನಮ್ಮ ಸರ್ಕಾರ ಇದ್ದರೂ ಸರಿ. ಕಾನೂನು ಬಾಹಿರ ಘಟನೆಗಳು ಆದಾಗ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದು ಗಣೇಶ ಕಾರ್ಯಕ್ರಮವಾಗಲಿ ಅಥವಾ ಇನ್ಯಾವುದೇ ಕಾರ್ಯಕ್ರಮಗಳಾಗಲಿ, ಈ ನೆಲದ ಕಾನೂನನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದರೆ ಅದನ್ನು ಹಾಗೆ ಪಾಲನೆ ಮಾಡಲಾಗಿದೆ, ಹೀಗೆ ಪಾಲನೆ ಮಾಡಲಾಗಿದೆ ಎಂದು ವ್ಯಂಗ್ಯವಾಡುವುದು ಈ ಹಿಂದೆ ಉಪ ಮುಖ್ಯಮಂತ್ರಿ, ಗೃಹ ಸಚಿವರಾಗಿದ್ದ ಅಶೋಕ್ ಅವರಿಗೆ ಶೋಭೆಯಲ್ಲ ಎಂದರು.

ಗಂಗಾರತಿ ಇರಲಿ, ದಸರಾ ಆಚರಣೆ ಇರಲಿ,  ಜಾತ್ರೆ ಸಮಾರಂಭಗಳಿದ್ದರೂ ಸಹ ಬಿಜೆಪಿಯವರು ತಮ್ಮ ಸ್ವತ್ತು ಎಂಬ ರೀತಿ ನೋಡುತ್ತಿದ್ದಾರೆ. ಇದು ಈ ನೆಲದ ವಾಸಿಗಳ ಹಕ್ಕಾಗಿದೆ. ಇದನ್ನು ಎಲ್ಲರೂ ಮಾಡುವಂತದ್ದಾಗಿದೆ. ಉತ್ತರ ಭಾರತದಲ್ಲಿ ಮಾಡುತ್ತಿರುವುದನ್ನು ದಕ್ಷಿಣ ಭಾರತದಲ್ಲಿ ಮಾಡಬೇಕು. ಅದನ್ನು ವ್ಯವಸ್ಥಿತವಾಗಿ ಮಾಡಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಒಂದು ದಿಟ್ಟ ಹೆಜ್ಜೆ ಇಟ್ಟಿದೆ. ಅದನ್ನು ಅಶೋಕ್ ಅವರು ಅಭಿನಂದನೆ ಮಾಡುತ್ತಾರೆ, ಪ್ರಶಂಸೆ ವ್ಯಕ್ತಪಡಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಇವರು ಹೀಗೆ ಮಾತನಾಡುತ್ತಾರೆ ಎಂದರೆ ಅದರ ಬಗ್ಗೆ ಇವರಿಗೆ ಎಷ್ಟು ಕಾಳಜಿ ಇದೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು.

ಬಿಜೆಪಿಯವರ ಈ ವರ್ತನೆಯನ್ನು ಗಮನಿಸಿದರೆ ಇವರು ನಿಜವಾದ ಧಾರ್ಮಿಕ ವಿರೋಧಿಗಳು ಎಂಬುದು ಗೊತ್ತಾಗುತ್ತದೆ. ಇವರು ಎಲ್ಲ ವಿಷಯಕ್ಕೂ ರಾಜಕೀಯ ಬಣ್ಣ ರಾಜಕೀಯ ಲೇಪನ  ಮಾಡುತ್ತಾರೆಂದು ಅನಿಸುತ್ತದೆ. ಕಾಂಗ್ರೆಸ್ ನವರು ಇಂಥದ್ದೊಂದು ಮಹತ್ಕಾರ್ಯವನ್ನು ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಂತೂ ಮಾಡಲು ಆಗಲಿಲ್ಲ. ಇದನ್ನು ನಾವು ಬೆಂಬಲಿಸಬೇಕು, ಪ್ರಶಂಸೆ ವ್ಯಕ್ತಪಡಿಸೋಣ ಎಂದು ಅಶೋಕ್ ಅವರು ಹೇಳಬಹುದಿತ್ತು. ಆದರೆ ಇವರು ಮಾಡುತ್ತಿರುವುದೇನು? ಬರೀ ಟೀಕೆ, ವ್ಯಂಗ್ಯ!! ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: ಕಾನ್ಪುರ ಟೆಸ್ಟ್ ನಲ್ಲಿ ಈ ಫಾಸ್ಟ್ ಬೌಲರ್ ಗಳಿಗೆ ಕೊಕ್ !ತಂಡಕ್ಕೆ  ಮಾರಕ ಬೌಲರ್ ಎಂಟ್ರಿ !ಹೀಗಿರಲಿದೆ  ಟೀಂ ಇಂಡಿಯಾದ ಪ್ಲೇಯಿಂಗ್ 11 

ಇವರ ಒಂದು ಕೀಳುಮಟ್ಟದ ಮನಸ್ಥಿತಿ ಜನಕ್ಕೆ ಗೊತ್ತಾಗುತ್ತಿದೆ. ಕೇವಲ ಘೋಷಣೆಗಳನ್ನು ಕೂಗಿದರೆ, ಕೇಸರಿ ಶಾಲು ಹಾಕಿಕೊಂಡರೆ,  ಮೆರವಣಿಗೆಗಳನ್ನು ಮಾಡಿದರೆ ಹಿಂದುತ್ವ ಅಲ್ಲ. ವ್ಯವಸ್ಥಿತವಾಗಿ ಆಚರಣೆಗಳನ್ನು ಮಾಡುವುದು, ಧಾರ್ಮಿಕ ಮತ್ತು ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗುವುದು ಮುಖ್ಯವಾಗಿದೆ. ಈ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಡುತ್ತಿದ್ದಾರೆ. ಇದನ್ನು ಅಭಿನಂದಿಸುವ ಕೆಲಸವನ್ನು ನೀವು ಮೊದಲು ಮಾಡಿ. ನೀವು ನಿಜವಾಗಿ ಸಂಸ್ಕಾರವಂತರಾಗಿದ್ದರೆ ಇದನ್ನು ಬೆಂಬಲಿಸಬೇಕಿತ್ತು. ಆದರೆ ಆ ಸಂಸ್ಕಾರ ಇದ್ದಂತೆ ಕಾಣುತ್ತಿಲ್ಲ ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News