Muda Scam: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಮುಡಾ ಪ್ರಕರಣದಲ್ಲಿ ʼಸಿದ್ದುʼಗೆ ಬಿಗ್‌ ಶಾಕ್!

Muda Scam: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬಿಗ್‌ ಶಾಕ್‌ ಉಂಟಾಗಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿಯನ್ನು ಎತ್ತಿಹಿಡಿದಿರುವ ಹೈಕೋರ್ಟ್‌, ಸಿದ್ದರಾಮಯ್ಯರ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. 

Written by - Puttaraj K Alur | Last Updated : Sep 24, 2024, 12:39 PM IST
  • ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌
  • ಸಿದ್ದರಾಮಯ್ಯರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌
  • ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ
Muda Scam: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಮುಡಾ ಪ್ರಕರಣದಲ್ಲಿ ʼಸಿದ್ದುʼಗೆ ಬಿಗ್‌ ಶಾಕ್! title=
ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌!

Muda Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು​ ವಜಾಗೊಳಿಸಿದೆ. ಇದೀಗ ಸಿಎಂ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. 

ಹೈಕೋರ್ಟ್ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯರ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17A’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17A’ ಅಡಿಯ ಆದೇಶವು ಸಮರ್ಪಕವಾಗಿದೆ ಎಂದಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಸಿದ್ದರಾಮರ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯರ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ, ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿದ್ದರಾಮಯ್ಯನವರು ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಅಂತಾ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಬಿ‌ಬಿಎಂಪಿಗೆ ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯ

ಸುದೀರ್ಘ ವಾದ–ಪ್ರತಿವಾದ

ಮುಡಾ ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು 6 ದಿನಗಳ ಸುದೀರ್ಘ ವಾದ-ಪ್ರತಿವಾದ ಆಲಿಸಿತ್ತು. ಸಿದ್ದರಾಮಯ್ಯರ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡಿಸಿದ್ದರು. 

ಸಿದ್ದರಾಮಯ್ಯ ಪರ ವಕೀಲರ ವಾದವೇನು?

ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ಪಾತ್ರ ಏನಿದೆ ಅನ್ನೋದರ ಬಗ್ಗೆ ರಾಜ್ಯಪಾಲರು ತಿಳಿಸಿಲ್ಲವೆಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದರು. ಯಾವುದಾದರೂ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆಯೇ ಎಂದು ಹೇಳಿಲ್ಲ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ವಿಶೇಷ ಸಂದರ್ಭದಲ್ಲಷ್ಟೇ ಬಳಸಬೇಕು. ಒಂದು ವೇಳೆ ಆ ರೀತಿ ಬಳಸಿದಾಗ ಅದಕ್ಕೆ ಕಾರಣಗಳನ್ನು ನೀಡಬೇಕು. ಆದರೆ ಪ್ರಕ್ರಿಯೆ ಪಾಲಿಸದೇ ತರಾತುರಿಯಲ್ಲಿ ಆದೇಶ ನೀಡಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ ʼ17Aʼ ಅಡಿ ಪೊಲೀಸ್ ಅಧಿಕಾರಿಗಳಿಗೆ ಅನುಮತಿ ನೀಡಬಹುದೇ ಹೊರತು, ಖಾಸಗಿ ವ್ಯಕ್ತಿಗಳಿಗೆ ನೀಡುವಂತಿಲ್ಲ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ಒಪ್ಪಬೇಕಿತ್ತು. ಏಕೆ ಒಪ್ಪಿಲ್ಲವೆಂಬುದಕ್ಕೆ ರಾಜ್ಯಪಾಲರು ಸೂಕ್ತ ಕಾರಣ ನೀಡಿಲ್ಲ. ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ದೂರಿಗೆ ಅನುಮತಿ ನೀಡದೇ ಸಿದ್ದರಾಮಯ್ಯರ ವಿರುದ್ಧ ಮಾತ್ರ ಅನುಮತಿ ನೀಡಿ ತಾರತಮ್ಯ ನೀತಿ ಅನುಸರಿಸಿದ್ದಾರೆ. ದೂರುದಾರರ ಹಿನ್ನೆಲೆ ಪರಿಗಣಿಸದೇ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಕಾನೂನುಬಾಹಿರ. ವಿಪಕ್ಷಗಳು ರಾಜ್ಯಪಾಲರ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ. ಹೀಗೆ ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.

ಪ್ರತಿವಾದ ಏನಿತ್ತು..?

ಸಿಎಂ ಸಿದ್ದರಾಮಯ್ಯರ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ ʼ17Aʼ ಅಡಿ ಪರಿಶೀಲಿಸಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣ ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಮುಡಾ ಹಗರಣ: ಹೈಕೋರ್ಟ್‌ನಲ್ಲಿ ಮಹತ್ವದ ತೀರ್ಪು

ಏನಿದು ವಿವಾದ?

ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಿಯವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ನೀಡಿದ್ದರು. ಇದು ಒಟ್ಟು 1,48,104 ಚದರಡಿ ಇತ್ತು. ಇದರ ಬದಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರಡಿ ಜಾಗ ನೀಡಿರುವುದೇ ಈ ವಿವಾದದ ಕೇಂದ್ರಬಿಂದುವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 

Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News