BBK11: ʼಸ್ವರ್ಗʼವಾಸಿಗಳಿಗೆ ʼನರಕʼ ತೋರಿಸಿದ ಚೈತ್ರಾ ಕುಂದಾಪುರ ಮೊದಲ ವಾರವೇ ನಾಮಿನೇಟ್!

Bigg Boss Kannada Season 11: ನಾಮಿನೇಷನ್‌ಗೆ ಬಿಗ್‌ಬಾಸ್ ಸೂಚಿಸಿದ ಬೆನ್ನಲ್ಲೇ ಸ್ವರ್ಗವಾಸಿಗಳು ಚೈತ್ರಾ ಕುಂದಾಪುರ ವಿರುದ್ಧವೇ ಮತ ಚಲಾಯಿಸಿದ್ದಾರೆ. ಪರಿಣಾಮ ಚೈತ್ರಾ ಕುಂದಾಪುರ ಅವರು ಈ ಆವೃತ್ತಿಯಲ್ಲಿ ಮೊದಲು ನಾಮಿನೇಟ್ ಆಗಿರುವ ಸ್ಪರ್ಧಿಯಾಗಿದ್ದಾರೆ.

Written by - Puttaraj K Alur | Last Updated : Oct 1, 2024, 07:58 PM IST
  • ʼಸ್ವರ್ಗʼವಾಸಿಗಳಿಗೆ ʼನರಕʼ ತೋರಿಸಿದ ಚೈತ್ರಾ ಕುಂದಾಪುರ ಮೊದಲ ವಾರವೇ ನಾಮಿನೇಟ್‌
  • ಆರಂಭದಲ್ಲಿಯೇ ಬಿಗ್ ಬಾಸ್ ಮನೆಗೆ ಬಿಸಿ ಏರಿಸಿರುವ ಚೈತ್ರಾ ಕುಂದಾಪುರ ನಾಮಿನೇಟ್
  • ಚೈತ್ರಾ ಕುಂದಾಪುರ ಮಾತು, ಗೇಮ್ ಪ್ಲಾನ್‌ಗೆ ಕಕ್ಕಾಬಿಕ್ಕಿಯಾದ ಸ್ವರ್ಗವಾಸಿಗಳು
BBK11: ʼಸ್ವರ್ಗʼವಾಸಿಗಳಿಗೆ ʼನರಕʼ ತೋರಿಸಿದ ಚೈತ್ರಾ ಕುಂದಾಪುರ ಮೊದಲ ವಾರವೇ ನಾಮಿನೇಟ್! title=
ಚೈತ್ರಾ ಕುಂದಾಪುರ ನಾಮಿನೇಟ್

Bigg Boss Kannada Season 11: ಭಾರೀ ಕುತೂಹಲ ಹಾಗೂ ಸಖತ್ ನಿರೀಕ್ಷೆ ಮೂಡಿಸಿದ್ದ ಬಿಗ್ ಬಾಸ್ 11ನೇ ಆವೃತ್ತಿ ಆರಂಭಗೊಂಡಿದೆ. ʼಸ್ವರ್ಗ ಹಾಗೂ ನರಕʼ ಪರಿಕಲ್ಪನೆಯಲ್ಲಿ ಈ ಬಾರಿಯ ಬಿಗ್ ಬಾಸ್ ಮನೆಯು ಆರಂಭದಲ್ಲೇ ರಣಾಂಗಣವಾಗುತ್ತಿದೆ. ನರಕದಲ್ಲಿರುವ ಸ್ಪರ್ಧಿ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿಯ ಚೈತ್ರಾ ಕುಂದಾಪುರ ಈಗಾಗಲೇ ಸ್ವರ್ಗವಾಸಿಗಳಿಗೆ ನರಕವನ್ನೇ ತೋರಿಸಿದ್ದಾರೆ.

ಆರಂಭದಲ್ಲಿಯೇ ಬಿಗ್ ಬಾಸ್ ಮನೆಗೆ ಬಿಸಿ ಏರಿಸಿರುವ ಚೈತ್ರಾ ಕುಂದಾಪುರ ಇದೀಗ ನಾಮಿನೇಟ್ ಆಗಿದ್ದಾರೆ. ಬಿಗ್ ಬಾಸ್ 11ರ ಮೊದಲ ವಾರದಲ್ಲಿ ನಾಮಿನೇಟ್ ಆದ ಮೊದಲ ಹಾಗೂ ಏಕೈಕ ಸ್ಪರ್ಧಿ ಎನಿಸಿಕೊಂಡಿದ್ದಾರೆ. 

ಇದನ್ನೂ ಓದಿ: ಡಿವೋರ್ಸ್‌ ನಂತರ ಬಿಗ್‌ಬಾಸ್‌ ಮನೆಗೆ ಸ್ಮಾರ್ಟ್‌ ಆಗಿ ಎಂಟ್ರಿ ಕೊಟ್ಟ ಶಿಶಿರ್‌ ಶಾಸ್ತ್ರಿ ಅವರ ಮಾಜಿ ಪತ್ನಿ ಯಾರು ಗೊತ್ತಾ? ಈಕೆ ಕೂಡ ಫೇಮಸ್‌ ನಟಿ

ಸ್ವರ್ಗವಾಸಿಗಳ ತೀವ್ರ ತಲೆನೋವಿಗೆ ಕಾರಣವಾಗಿದ್ದ ಚೈತ್ರಾ ಕುಂದಾಪರ ಎಲಿಮಿನೇಶನ್‌ಗೆ ಸ್ವರ್ಗವಾಸಿಗಳು ಒಕ್ಕೊರಲಿನಿಂದ ಮತ ಹಾಕಿದ್ದಾರೆ. ಪರಿಣಾಮ ಮೊದಲ ವಾರದ ನಾಮಿನೇಶನ್ ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿರುವ ಏಕೈಕ ಹೆಸರು ಅಂದ್ರೆ ಅದು ಚೈತ್ರಾ ಕುಂದಾಪುರ. ನಾಮಿನೇಶನ್‌ನಲ್ಲಿ ಚೈತ್ರಾ ಕಾಣಿಸಿಕೊಂಡಿದ್ದಾರೆ, ಆದರೆ ಬಿಗ್ ಬಾಸ್ ಮನೆಯಲ್ಲಿ ಅವರ ಆಟಕ್ಕೆ ಕರುನಾಡಿನ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪರ-ವಿರೋಧಗಳಿದ್ದರೂ ಆಟದ ವಿಚಾರದಲ್ಲಿ ಚೈತ್ರಾ ಅವರು ಜನರಿಂದ ಹೆಚ್ಚಿನ ಮತಗಳನ್ನು ಪಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಆರಂಭದಲ್ಲಿ ಚೈತ್ರಾ ಕುಂದಾಪುರ ಅವರ ಆಟಕ್ಕೆ ಆರಾಮವಾಗಿದ್ದ ಸ್ವರ್ಗವಾಸಿಗಳು ಇದೀಗ ಬಹುದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚೈತ್ರಾರ ಮಾತು, ಗೇಮ್ ಪ್ಲಾನ್‌ಗೆ ಸ್ವರ್ವವಾಸಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಬಿಗ್‌ಬಾಸ್‌ ಮನೆಯಲ್ಲಿ ಸ್ವರ್ಗವಾಸಿಗಳಿಗಿಂತ ನರಕವಾಸಿಗಳೇ ಹೆಚ್ಚಿನ ಖುಷಿ, ಸಂಭ್ರಮದಲ್ಲಿರುವಂತೆ ಕಂಡುಬರುತ್ತಿದೆ. ಸ್ವರ್ಗದಲ್ಲಿದ್ದರೂ ಸ್ವರ್ಗವಾಸಿಗಳು ಮಾತ್ರ ತಲೆನೋವಿನಲ್ಲೇ ದಿನ ದೂಡುವಂತಾಗಿದೆ.

ಇದನ್ನೂ ಓದಿ: ಧನಂಜಯ ಮೀಟ್ಸ್ ಧನಂಜಯ.. ಮೈಸೂರು ದಸರಾ ಸಂಭ್ರಮದಲ್ಲಿ ಡಾಲಿ !

ಹಣ್ಣು ತೊಳೆದುಕೊಡುವಂತೆ ಉಗ್ರಂ ಮಂಜು ನೀಡಿದ ಆಜ್ಞೆಯಿಂದ ಚೈತ್ರಾ ಕುಂದಾಪುರ ಅಸಮಾಧಾನಗೊಂಡಿದ್ದರು. ಇದಕ್ಕೆ ಪ್ರತಿಯಾಗಿ ಚೈತ್ರಾ ಅವರು ಹಣ್ಣು ತೊಳೆಯುವ ಬದಲು ಅದನ್ನು ಕಚ್ಚಿ ಎಸೆದಿದ್ದಾರೆ. ನಿಯಮ ಮೀರಿದ ಹಾಗೂ ದರ್ಪದ ನಡತೆಗೆ ಉಗ್ರಂ ಮಂಜು ಸೇರಿ ಸ್ವರ್ಗವಾಸಿಗಳು ಗರಂ ಆಗಿದ್ದು, ಚೈತ್ರಾರ ವಿರುದ್ದ ಮುಗಿಬಿದ್ದಿದ್ದರು. ಆದರೆ ಚೈತ್ರಾರನ್ನು ಮಾತಿನಲ್ಲಿ ಮೀರಿಸಲು ಸಾಧ್ಯವಾಗದೆ ಸುಸ್ತಾಗಿದ್ದಾರೆ. ಪರಿಣಾಮ ಸ್ವರ್ಗವಾಸಿಗಳ ಲಕ್ಷುರಿ ಐಟಂಗೆ ಕತ್ತರಿ ಬಿದ್ದಿದೆ.

ನಾಮಿನೇಶನ್‌ಗೆ ಬಿಗ್‌ಬಾಸ್ ಸೂಚಿಸಿದ ಬೆನ್ನಲ್ಲೇ ಸ್ವರ್ಗವಾಸಿಗಳು ಚೈತ್ರಾ ಕುಂದಾಪುರ ವಿರುದ್ಧವೇ ಮತ ಚಲಾಯಿಸಿದ್ದಾರೆ. ಪರಿಣಾಮ ಚೈತ್ರಾ ಕುಂದಾಪುರ ಅವರು ಈ ಆವೃತ್ತಿಯಲ್ಲಿ ಮೊದಲು ನಾಮಿನೇಟ್ ಆಗಿರುವ ಸ್ಪರ್ಧಿಯಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News