"ಒಡೆದ ಮನಸುಗಳ ಸಮ್ಮಿಲನ" ವಿರಾಟ್‌ ಕೊಹ್ಲಿಯನ್ನು ಅಪ್ಪಿಕೊಂಡು ಭಾವುಕರಾದ ಗೌತಮ್‌ ಗಂಭೀರ್‌! ವಿಡಿಯೋ ನೋಡಿ

Gautam Gambhir hugging Virat Kohli: ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಜಯ ಸಾಧಿಸಿದೆ. ಫಲಿತಾಂಶ ಅಸಾಧ್ಯವೆನಿಸಿದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ.   

Written by - Zee Kannada News Desk | Last Updated : Oct 2, 2024, 07:12 AM IST
  • ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
  • ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಕೊಹ್ಲಿಯನ್ನು ಅಪ್ಪಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.
  • ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
"ಒಡೆದ ಮನಸುಗಳ ಸಮ್ಮಿಲನ" ವಿರಾಟ್‌ ಕೊಹ್ಲಿಯನ್ನು ಅಪ್ಪಿಕೊಂಡು ಭಾವುಕರಾದ ಗೌತಮ್‌ ಗಂಭೀರ್‌! ವಿಡಿಯೋ ನೋಡಿ title=

Gautam Gambhir hugging Virat Kohli: ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಕಾನ್ಪುರದಲ್ಲಿ ನಡೆದ ಎರಡನೇ ಟೆಸ್ಟ್ ನಲ್ಲಿ ಅಸಾಮಾನ್ಯ ಪ್ರದರ್ಶನ ತೋರಿದ ಭಾರತ 7 ವಿಕೆಟ್ ಗಳ ಜಯ ಸಾಧಿಸಿದೆ. ಫಲಿತಾಂಶ ಅಸಾಧ್ಯವೆನಿಸಿದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಕ್ರಮಣಕಾರಿ ಆಟ ಪ್ರದರ್ಶಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ. 

ಸರಣಿ ಗೆಲುವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ಪಾಯಿಂಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಗೆಲುವಿಗೆ ಭಾರತದ ಆಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಪಂದ್ಯ ಮುಗಿದ ಕ್ಷಣವೇ ಒಬ್ಬರನ್ನೊಬ್ಬರು ಅಪ್ಪಿಕೊಂಡು ಗೆಲುವನ್ನು ಸಂಭ್ರಮಿಸಿದ್ದಾರೆ. ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಕೊಹ್ಲಿಯನ್ನು ಅಪ್ಪಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ. ಈ ದೃಶ್ಯ ನೆಟ್ಟಿಗರನ್ನು ಆಕರ್ಷಿಸಿದೆ.

ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮೈದಾನದಲ್ಲಿ ಹಲವು ಬಾರಿ ಜಗಳ ಮಾಡಿಕೊಂಡಿದ್ದರು,  ಜೊತೆಗೆ ಸಮಯ ಸಿಕ್ಕಾಗಲೆಲ್ಲಾ ಗಂಭೀರ್ ಕೊಹ್ಲಿಯನ್ನು ಟೀಕಿಸುತ್ತಿದ್ದರು. ಐಪಿಎಲ್ 2023 ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್‌ನ ಮೆಂಟರ್ ಆಗಿದ್ದ ಗಂಭೀರ್, ಮೈದಾನದಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಜಗಳವಾಡಿದ್ದರು.

ಒಂದು ವರ್ಷದ ನಂತರ ಗಂಭೀರೆ ಈ ಜಗಳವನ್ನು ಕೊನೆಗೊಳಿಸಿದರು. ಐಪಿಎಲ್ 2024 ರ ಸೀಸನ್ ಸಂದರ್ಭದಲ್ಲಿ, ಅವರು ವಿರಾಟ್ ಕೊಹ್ಲಿಯನ್ನು ವಿಶೇಷ ರೀತಿಯಲ್ಲಿ ಅಭಿನಂದಿಸಿದ್ದರು, ಕೊಹ್ಲಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಈ ಇಬ್ಬರು ತಮ್ಮ ಹಳೆಯ ಜಗಳ ಮರೆತು ಆತ್ಮೀಯ ಗೆಳೆಯರಾಗಿ ಮುಂದುವರೆದಿದ್ದಾರೆ.

95 ರನ್‌ಗಳ ಅಲ್ಪ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ ಎರಡನೇ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 96 ರನ್ ಗಳಿಸಿ ಜಯ ಸಾಧಿಸಿತು. ನಾಯಕ ರೋಹಿತ್ ಶರ್ಮಾ (8) ಮತ್ತು ಶುಭಮನ್ ಗಿಲ್ (6) ವಿಫಲರಾದರು.. ಯಶಸ್ವಿ ಜೈಸ್ವಾಲ್ (45 ಎಸೆತಗಳಲ್ಲಿ 8 ಬೌಂಡರಿ, 51 ಸಿಕ್ಸರ್) ಅರ್ಧಶತಕದೊಂದಿಗೆ ಮಿಂಚಿದರು. 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News