ಟೀಂ ಇಂಡಿಯಾ ಸೋಲಲು ಬಹುದೊಡ್ಡ ಕಾರಣವೇ ಇವರು; ಕೀವೀಸ್‌ ವಿರುದ್ಧ ಸೋಲುಂಡ ಬಳಿಕ ಪಬ್ಲಿಕ್‌ನಲ್ಲೇ ಅಸಮಾಧಾನ ಹೊರಹಾಕಿದ ಕ್ಯಾಪ್ಟನ್ ರೋಹಿತ್‌ ಶರ್ಮಾ

Rohit Sharma: ನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್ ಪಂದ್ಯದ ಸೋಲಿನ ನಂತರ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಈ ವಿಷಯದ ಮಾತನಾಡಿದರು.  

Written by - Bhavishya Shetty | Last Updated : Oct 26, 2024, 09:09 PM IST
    • ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಚ್ಚರಿಯ ಹೇಳಿಕೆ
    • ನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್ ಪಂದ್ಯದ ಸೋಲಿನ ನಂತರ ರೋಹಿತ್ ಶರ್ಮಾ ಸುದ್ದಿಗೋಷ್ಠಿ
    • ತವರಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ 113 ರನ್‌ಗಳಿಂದ ಸೋತಿದೆ
ಟೀಂ ಇಂಡಿಯಾ ಸೋಲಲು ಬಹುದೊಡ್ಡ ಕಾರಣವೇ ಇವರು; ಕೀವೀಸ್‌ ವಿರುದ್ಧ ಸೋಲುಂಡ ಬಳಿಕ ಪಬ್ಲಿಕ್‌ನಲ್ಲೇ ಅಸಮಾಧಾನ ಹೊರಹಾಕಿದ ಕ್ಯಾಪ್ಟನ್ ರೋಹಿತ್‌ ಶರ್ಮಾ  title=
Rohit Sharma

Rohit Sharma Statement on WTC Final: ಒಂದು ಕಡೆ ಎಲ್ಲಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2025 ತಲುಪಲು ಪ್ರಯತ್ನಿಸುತ್ತಿದ್ದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತ್ರ ಈ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. "ಟೀಂ ಇಂಡಿಯಾ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಗ್ಗೆ ಯೋಚಿಸುತ್ತಿಲ್ಲ" ಎಂದು ಹೇಳಿದ್ದಾರೆ.

ಇದನ್ನೂ ಓದಿ:  ನ್ಯೂಜಿಲೆಂಡ್‌ ವಿರುದ್ಧ ಸೋಲುಂಡ ಭಾರತ WTC ಪಾಯಿಂಟ್ ಟೇಬಲ್‌ನಲ್ಲಿ ಈಗ ಎಷ್ಟನೇ ಸ್ಥಾನದಲ್ಲಿದೆ?

ನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್ ಪಂದ್ಯದ ಸೋಲಿನ ನಂತರ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಈ ವಿಷಯದ ಮಾತನಾಡಿದರು.

ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ 113 ರನ್‌ಗಳಿಂದ ಸೋತಿದೆ. ಇದಕ್ಕೂ ಮುನ್ನ ತಂಡ ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋತಿತ್ತು. ಎರಡನೇ ಪಂದ್ಯದ ಸೋಲಿನೊಂದಿಗೆ ಭಾರತ ಸರಣಿಯನ್ನೂ ಕಳೆದುಕೊಂಡಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ನ್ಯೂಜಿಲೆಂಡ್ 2-0 ಮುನ್ನಡೆ ಸಾಧಿಸಿದೆ. ನ್ಯೂಜಿಲೆಂಡ್ ತಂಡವು ಟೆಸ್ಟ್ ಸರಣಿಯಲ್ಲಿ ಭಾರತವನ್ನು ತವರಿನಲ್ಲಿ ಸೋಲಿಸುವಲ್ಲಿ ಯಶಸ್ವಿಯಾಗಿರುವುದು ಇದೇ ಮೊದಲು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು ಆತಿಥೇಯರ ಸೋಲಿಗೆ ಬಹುದೊಡ್ಡ ಕಾರಣ.

ನ್ಯೂಜಿಲೆಂಡ್ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಸೋತ ನಂತರವೂ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಇದೆ. ಆದರೆ  ಶೇಕಡಾವಾರು (ಪಿಸಿಟಿ) ನಷ್ಟ ಅನುಭವಿಸಿದೆ. ಭಾರತವು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ಅದರ ನಡುವಿನ ಅಂಕಗಳ ಶೇಕಡಾವಾರು (ಪಿಸಿಟಿ) ವ್ಯತ್ಯಾಸವು ಅತ್ಯಲ್ಪವಾಗಿದೆ. ಭಾರತದ ಅಂಕಗಳ ಶೇಕಡಾವಾರು (ಪಿಸಿಟಿ) 68.06 ರಿಂದ 62.82 ಕ್ಕೆ ಕುಸಿದಿದ್ದರೆ, ಪ್ರಸ್ತುತ ಚಾಂಪಿಯನ್ ಆಸ್ಟ್ರೇಲಿಯಾ 62.50 PCT ಹೊಂದಿದೆ.

ಇದನ್ನೂ ಓದಿ: ಒಣದ್ರಾಕ್ಷಿಯನ್ನು ಇದರಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದ ಕೂಡಲೇ ತಿಂದರೆ... ಬಿಳಿಕೂದಲು 5 ದಿನದಲ್ಲಿ ಕಡುಕಪ್ಪಾಗಿ ಮೊಣಕಾಲುದ್ದ ಬೆಳೆಯುತ್ತೆ

ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, WTC ಫೈನಲ್ ತಲುಪುವ ಸಾಧ್ಯತೆಗಳ ಬಗ್ಗೆ ಹೇಳಿಕೆ ನೀಡಿದರು. "ಸದ್ಯ ನಮ್ಮ ಗಮನ ವಾಂಖೆಡೆ ಸ್ಟೇಡಿಯಂ ಮೇಲಿದೆ, ಬದಲಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಗ್ಗೆ ಯೋಚಿಸುತ್ತಿಲ್ಲ. ವಾಂಖೆಡೆಯಲ್ಲಿ ಆಡುತ್ತೇವೆ ಮತ್ತು ಟೆಸ್ಟ್ ಗೆಲ್ಲಲು ಬಯಸುತ್ತೇವೆ. ಇದೊಂದು ಸಾಮೂಹಿಕ ವೈಫಲ್ಯ. ನಾನು ಯಾರನ್ನೂ ದೂರುವುದಿಲ್ಲ, ನಮ್ಮ ಮುಂದಿರುವ ಸವಾಲನ್ನು ಸ್ವೀಕರಿಸುವಲ್ಲಿ ತಂಡ ವಿಫಲವಾಗಿದೆ" ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News