ಕಂಗನಾ v/s IPS ಡಿ.ರೂಪಾ : ಇಬ್ಬರ ನಡುವೆ ಹೊತ್ತಿ ಉರಿತಿದೆ ಪಟಾಕಿ ಕಿಡಿ..!

ನಟಿ ಕಂಗನಾ ರನೌತ್  ಇಂದು ರೂಪಾ ಅವರ ಹೇಳಿಕೆ ಟೀಕಿಸಿ ಸರಣಿ ಟ್ವೀಟ್‌

Last Updated : Nov 18, 2020, 03:33 PM IST
  • ಪಟಾಕಿಯ ಕುರಿತಂತೆ ಐಪಿಎಸ್​ ಅಧಿಕಾರಿ ಡಿ. ರೂಪಾ ಟ್ವಿಟರ್​ನಲ್ಲಿ ಮಾಡಿರುವ ಪೋಸ್ಟ್
  • ನಟಿ ಕಂಗನಾ ರನೌತ್ ಇಂದು ರೂಪಾ ಅವರ ಹೇಳಿಕೆ ಟೀಕಿಸಿ ಸರಣಿ ಟ್ವೀಟ್‌
  • ವಾದ, ಪ್ರತಿವಾದದ ಸರಣಿ ಮುಂದುವರೆದಿದ್ದು, ಎಲ್ಲಿಯವರೆಗೆ ಬಂದು ನಿಲ್ಲುತ್ತದೋ ಸದ್ಯಕ್ಕಂತೂ ಗೊತ್ತಿಲ್ಲ…
ಕಂಗನಾ v/s IPS ಡಿ.ರೂಪಾ : ಇಬ್ಬರ ನಡುವೆ ಹೊತ್ತಿ ಉರಿತಿದೆ ಪಟಾಕಿ ಕಿಡಿ..! title=

ಬೆಂಗಳೂರು: ಪಟಾಕಿಯ ಕುರಿತಂತೆ ಐಪಿಎಸ್​ ಅಧಿಕಾರಿ ಡಿ. ರೂಪಾ ಟ್ವಿಟರ್​ನಲ್ಲಿ ಮಾಡಿರುವ ಪೋಸ್ಟ್​ ಒಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೀಗ ನಟಿ ಕಂಗನಾ ರಣಾವತ್(Kangana Ranaut)​ ಎಂಟ್ರಿ ನೀಡುವ ಮೂಲಕ ಪಟಾಕಿಯ ಕಿಡಿ ಹೊತ್ತಿ ಉರಿಯತೊಡಗಿದೆ!

ಪಟಾಕಿ ಬ್ಯಾನ್​ ಮಾಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅದನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಡಿ. ರೂಪಾ ಪೋಸ್ಟ್​ ಮಾಡಿದ್ದರು. ನವೆಂಬರ್‌ 14ರಂದು ಹಾಕಿದ್ದ ಈ ಪೋಸ್ಟ್​ನಲ್ಲಿ ಅವರು, 'ಪಟಾಕಿ ಸಿಡಿಸುವುದು ಹಿಂದೂ ಸಂಸ್ಕೃತಿಯೊಂದಿಗೆ ಮೊದಲಿನಿಂದಲೂ ಬಂದದ್ದೇನಲ್ಲ. ಮಹಾಕಾವ್ಯಗಳು, ಪುರಾಣಗಳಲ್ಲಿಯೂ ಪಟಾಕಿಯ ಕುರಿತಂತೆ ಯಾವುದೇ ಉಲ್ಲೇಖವಿಲ್ಲ. ಪಟಾಕಿ ಭಾರತಕ್ಕೆ ಕಾಲಿಟ್ಟಿದ್ದು ಯುರೋಪಿಯನ್ನರ ಜತೆ' ಎಂದು ಬರೆದುಕೊಂಡಿದ್ದರು.

ಏಳು ಖಾಲಿ ಸಚಿವ ಸ್ಥಾನಕ್ಕೆ 10 ಶಾಸಕರ ಲಾಬಿ: ಇಲ್ಲಿದೆ ಸಚಿವಾಕಾಂಕ್ಷಿಗಳ ಪಟ್ಟಿ..!

ಈ ಪೋಸ್ಟ್​ಗೆ ಇದಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ನಟಿ ಕಂಗನಾ ರನೌತ್  ಇಂದು ರೂಪಾ ಅವರ ಹೇಳಿಕೆಗಳನ್ನು ಟೀಕಿಸಿ ಸರಣಿ ಟ್ವೀಟ್‌ ಮಾಡುವ ಮೂಲಕ ಚರ್ಚೆಗೆ ಇನ್ನಷ್ಟು ಆಸ್ಪದ ಕೊಟ್ಟಿದ್ದಾರೆ.

ಅಷ್ಟಕ್ಕೂ ಕಂಗನಾ ಎಂಟ್ರಿ ಕೊಡಲು ಕಾರಣವೇನೆಂದರೆ, ಡಿ.ರೂಪಾ ಅವರು ತಮ್ಮ ಪೋಸ್ಟ್​ ವಿರುದ್ಧ ಕಮೆಂಟ್​ ಹಾಕಿರುವವರ ಟ್ವಿಟರ್​ ಖಾತೆಯನ್ನು ಬ್ಲಾಕ್​ ಮಾಡುವುದಾಗಿ ಹೇಳಿದ್ದ ಕಾರಣ. ಈ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿ 'ಪುರಾಣಗಳಲ್ಲಿ ಪಟಾಕಿಯ ಪ್ರಸ್ತಾಪವಿರುವ ಬಗ್ಗೆ ದಾಖಲೆಗಳನ್ನು ಒದಗಿಸಿದ್ದರೂ, ಅವುಗಳನ್ನು ರೂಪಾ ಅವರು ಒಪ್ಪಲಿಲ್ಲ. ಬದಲಿಗೆ ಬ್ಲಾಕ್​ ಮಾಡುವುದಾಗಿ ಹೇಳುತ್ತಿದ್ದಾರೆ ಎಂದಿದ್ದಾರೆ.

ಡಿಕೆಶಿ ಪುತ್ರಿ ಐಶ್ವರ್ಯ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್..!

ಈ ಮಾತಿಗೆ ಸಮ್ಮತಿ ಸೂಚಿಸಿರುವ ನಟಿ ಕಂಗನಾ' ಸಾಮಾನ್ಯ ಜನರ ಮೂಲಭೂತ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಡಿ.ರೂಪಾ ಅವರಂತಹ ಜನರನ್ನು ನೇಮಿಸುತ್ತದೆ. ಆದರೆ, ಅವರು ನೋಡಿದರೆ ಸತ್ಯ ಆಧಾರಗಳಿಂದ ವಾದದಲ್ಲಿ ಗೆಲ್ಲುವ ಬದಲು ಖಾತೆಗಳನ್ನೇ ಬ್ಲಾಕ್​ ಮಾಡಿದ್ದಾರೆ, ನಿಮಗೆ ನಾಚಿಗೆಯಾಗಬೇಕು' ಎಂದಿದ್ದಾರೆ.

ಮಹಾರಾಷ್ಟ್ರ ಡಿಸಿಎಂಗೆ 'ಖಡಕ್ ಎಚ್ಚರಿಕೆ' ನೀಡಿದ ಸಿಎಂ ಬಿಎಸ್‍ವೈ!

ಅಷ್ಟು ಸಾಲದು ಎಂಬಂತೆ, 'ಮೀಸಲಾತಿಯ ಅಡ್ಡ ಪರಿಣಾಮಕ್ಕೆ ಉದಾಹರಣೆ ಇದು. ಯೋಗ್ಯರಲ್ಲದವರಿಗೆ ಅಧಿಕಾರ ದೊರೆತರೆ ಅವರು ಶಮನಗೊಳಿಸುವ ಕಾರ್ಯಕ್ಕಿಂತ ಘಾಸಿ ಮಾಡುತ್ತಾರೆ. ಅವರ ವೈಯಕ್ತಿಕ ಜೀವನದ ಬಗ್ಗೆ ನನಗೆ ಏನೊಂದೂ ತಿಳಿದಿಲ್ಲ, ಆದರೆ ಅವರ ಅಸಾಮರ್ಥ್ಯದಿಂದಾಗಿ ಹತಾಶೆ ಹೊರಬರುತ್ತಿರುವುದು ಖಂಡಿತ' ಎಂದಿದ್ದಾರೆ.

BREAKING NEWS: ರಾಜ್ಯದಲ್ಲಿ 'ಹೊಸ ಜಿಲ್ಲೆ' ರಚನೆಗೆ ಸಚಿವ ಸಂಪುಟ ಒಪ್ಪಿಗೆ..!

ಸದ್ಯ ಈ ವಾದ, ಪ್ರತಿವಾದದ ಸರಣಿ ಮುಂದುವರೆದಿದ್ದು, ಎಲ್ಲಿಯವರೆಗೆ ಬಂದು ನಿಲ್ಲುತ್ತದೋ ಸದ್ಯಕ್ಕಂತೂ ಗೊತ್ತಿಲ್ಲ…

Trending News