'ಕರ್ನಾಟಕ ಬಂದ್ ನಡೆದೇ ನಡೆಯುತ್ತೆ, ಯಾರಿಂದಲೂ ತಡೆಯಲು ಸಾಧ್ಯವಿಲ್ಲ'

ಸರ್ಕಾರದ ವಿರುದ್ಧ ಗುಡುಗಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್

Last Updated : Nov 22, 2020, 03:40 PM IST
  • ಸರ್ಕಾರದ ವಿರುದ್ಧ ಗುಡುಗಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್
  • ಡಿ. 5 ರಂದು ಕರೆಕೊಟ್ಟ ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ, ಯಾರಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ
  • ಕೂಡಲೇ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆಯಿಂದ ಹಿಂದೆ ಸರಿಯಬೇಕು
'ಕರ್ನಾಟಕ ಬಂದ್ ನಡೆದೇ ನಡೆಯುತ್ತೆ, ಯಾರಿಂದಲೂ ತಡೆಯಲು ಸಾಧ್ಯವಿಲ್ಲ' title=

ಬೆಂಗಳೂರು: ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ವಿರೋಧಿಸಿ ಡಿ. 5 ರಂದು ಕರೆಕೊಟ್ಟ ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ, ಯಾರಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಮರಾಠ(Maratha) ಪ್ರಾಧಿಕಾರ ರಚನೆ ಖಂಡಿಸಿ ಇಂದು ನಗರದ ಮೈಸೂರ್ ಬ್ಯಾಂಕ್ ಸರ್ಕಲ್‌ ನಲ್ಲಿ ಪ್ರತಿಭಟನೆ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಗಾವಿ ಲೋಕಸಭಾ ಬೈಎಲೆಕ್ಷನ್: ಬಿಜೆಪಿಯಿಂದ ಮಾಜಿ ಸಿಎಂಗೆ ಟಿಕೆಟ್..!?

ಕೂಡಲೇ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆಯಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಬಳ್ಳಾರಿ, ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮಗನ ಸೋಲನ್ನು ನೆನೆದು ಕಣ್ಣೀರಿಟ್ಟ ಮಾಜಿ ಸಿಎಂ ಕುಮಾರಸ್ವಾಮಿ!

Trending News