ಡಿ. 5 ರಂದು 'ಕರ್ನಾಟಕ ಬಂದ್' ಪಕ್ಕಾ: ವಾಟಾಳ್ ನಾಗರಾಜ್

ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ರ ಕರ್ನಾಟಕ ಬಂದ್

Last Updated : Nov 25, 2020, 01:16 PM IST
  • ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ರ ಕರ್ನಾಟಕ ಬಂದ್
  • ಡಿಸೆಂಬರ್ 5 ರ ಕರ್ನಾಟಕ ಬಂದ್ ಶತಸಿದ್ಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್
  • ಡಿ. 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ
ಡಿ. 5 ರಂದು 'ಕರ್ನಾಟಕ ಬಂದ್' ಪಕ್ಕಾ: ವಾಟಾಳ್ ನಾಗರಾಜ್ title=

ಬೆಂಗಳೂರು: ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 5 ರ ಕರ್ನಾಟಕ ಬಂದ್ ಶತಸಿದ್ಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಡಿ. 5 ರಂದು ಕರ್ನಾಟಕ ಬಂದ್(Karnataka Bandh) ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ವಾಟಾಳ್ ನಾಗರಾಜ್ ಅವರು ವಿವಿಧ ಸಂಘಟನೆಗಳ ಜೊತೆಗೆ ಮಹತ್ವದ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ       ಮಾತನಾಡಿದ ವಾಟಾಳ್ ನಾಗರಾಜ್, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡುವುದು ಖಚಿತ. ಇದನ್ನು ತಡೆಯಲು ಸಾಧ್ಯವಿಲ್ಲ. ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದರು.

ಹೈಕಮಾಂಡ್‌ಗೆ ಸಡ್ಡು ಹೊಡೆದ್ರಾ ಸಿಎಂ ಬಿಎಸ್‌ವೈ..!?

ದಲಿತ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಡಿಸೆಂಬರ್ 5 ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು, ಎಲ್ಲಾರು ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

India vs Australia: #ಕನ್ನಡದಲ್ಲಿ_ಕಾಮೆಂಟರಿ ನೀಡಲು ಟ್ವಿಟರ್ ಅಭಿಯಾನ

Trending News