/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಬೆಂಗಳೂರು : ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿ ಕಲಬುರ್ಗಿ  ಹೈಕೋರ್ಟ್ ವಿಭಾಗೀಯ ಪೀಠ (Kalburgi Bench) ಆದೇಶ ನೀಡಿದೆ. ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ರಾಜ್ಯ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ ಮುಂದಿನ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸಲು ಹೇಳಿ  ಹೈಕೋರ್ಟ್ ಆದೇಶ ಹೊರಡಿಸಿದೆ. 

ಮಿಣಜಗಿ ತಾಂಡದ ತಾರಾಬಾಯಿ ಎಂಬವರು ತನ್ನ ಪುತ್ರ ಸುರೇಧ್ ಕಾಣೆಯಾಗಿದ್ದಾನೆ ಎಂದು, ಅಕ್ಟೋಬರ್ 20ರಂದು ದೂರು ನೀಡಲು ಕಲಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ತೆರಳಿದ್ದರು.  ಆದರೆ ಅಲ್ಲಿಯ ಇನ್ಸ್‌ಪೆಕ್ಟರ್‌ ಮಹಿಳೆಯಿಂದ ದೂರು ಸ್ವೀಕರಿಸಲಿಲ್ಲ. ಅಲ್ಲದೆ, ಕಾಣೆಯಾದ ಯುವಕನನ್ನು ಪತ್ತೆ  ಮಾಡಲೂ ಇಲ್ಲ. ತನ್ನ ಮಗನಿಗಾಗಿ ಹುಡುಕಾಟ ನಡೆಸಿ ಬೇಸತ್ತ  ತಾಯಿ, ಕೊನೆಗೆ ಹೈಕೋರ್ಟ್ ನಲ್ಲಿ (High Court) ಹೆಬಿಯಸ್ ಕಾರ್ಪಸ್ (Hebeas Corpus) ಅರ್ಜಿ ಸಲ್ಲಿಸಿದ್ದರು. ತನ್ನ ಮಗನನ್ನು ಹುಡುಕಿ ನ್ಯಾಯಾಲಯದ ಮುಂಜೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. ಇದಾದ ಬಳಿಕ ನ್ಯಾಯಾಲಯದ (court) ಆದೇಶದ ಮೇರೆಗೆ ಕಾಣೆಯಾದ ಯುವಕನನ್ನು ಪತ್ತೆ ಹಚ್ಚಿದ ಪೊಲೀಸರು ನ.3ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. 
ALSO READ : High Court: ಬಿಎಸ್ ವೈ ಸರ್ಕಾರಕ್ಕೆ ಶಾಕ್​ ಕೊಟ್ಟ ಹೈಕೋರ್ಟ್..!

ಆದರೆ ಮಗ ಕಾಣೆಯಾಗಿದ್ದಾನೆಂದು ಬಂದ ತಾಯಿ, ತನ್ನ ಪುತ್ರನನ್ನು ಹುಡುಕಲು ಕೋರ್ಟ್ ಮೆಟ್ಟಿಲು ಏರುವಂಥ ಸ್ಥಿತಿ ಬಂದಿರುವ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು. ಯುವಕನ ತಾಯಿ ತಾರಾಬಾಯಿ ದೂರು ನೀಡಲು ಠಾಣೆಗೆ ಬಂದಿರುವ ಬಗ್ಗೆ ಪೊಲೀಸರು ಒಪ್ಪಿಕೊಳ್ಳುತ್ತಾರೆ. ಆದರೆ ದೂರು ಮಾತ್ರ ಸ್ವೀಕರಿಸಲಿಲ್ಲ. ಇದು ಕರ್ತವ್ಯಲೋಪವನ್ನು  ತೋರಿಸುತ್ತದೆ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿತು. 
ALSO READ : ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು: ಅಧ್ಯಕ್ಷ - ಉಪಾಧ್ಯಕ್ಷರಿಗೆ 'ಬಿಗ್ ಶಾಕ್'..!

ನ್ಯಾಯಮೂರ್ತಿ ಎಸ್ ಸುನಿಲ್ ದತ್ತ್ ಯಾದವ್ ಮತ್ತು ನ್ಯಾ. ಪಿ ಕೃಷ್ಣಭಟ್ ಅವರಿದ್ದ ನ್ಯಾಯಪೀಠ ಇನ್ಸ್ ಪೆಕ್ಟರ್ ಗೆ ರಸ್ತೆ ಗುಡಿಸುವ ಶಿಕ್ಷೆ ನೀಡಿ  ಆದೇಶ ನೀಡಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G

iOS Link - https://apple.co/3loQYe
 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Police inspector to clean streetfor not filing FIR rules karnataka high court
News Source: 
Home Title: 

ದೂರು ಸ್ವೀಕರಿಸದ ಇನ್ಸ್ ಪೆಕ್ಟರ್ ಗೆ ಬೀದಿ ಗುಡಿಸುವ ಶಿಕ್ಷೆ ನೀಡಿದ ನ್ಯಾಯಾಲಯ

ದೂರು ಸ್ವೀಕರಿಸದ ಇನ್ಸ್ ಪೆಕ್ಟರ್ ಗೆ ಬೀದಿ ಗುಡಿಸುವ ಶಿಕ್ಷೆ ನೀಡಿದ ನ್ಯಾಯಾಲಯ
Caption: 
ದೂರು ಸ್ವೀಕರಿಸದ ಇನ್ಸ್ ಪೆಕ್ಟರ್ ಗೆ ಬೀದಿ ಗುಡಿಸುವ ಶಿಕ್ಷೆ ನೀಡಿದ ನ್ಯಾಯಾಲಯ (file photoe)
Yes
Is Blog?: 
No
Tags: 
Facebook Instant Article: 
Yes
Highlights: 

 ಒಂದು ವಾರ ರಸ್ತೆ ಸ್ವಚ್ಛಗೊಳಿಸುವಂತೆ ಇನ್ಸ್‌ಪೆಕ್ಟರ್ ಗೆ ಶಿಕ್ಷೆ

ಕಲಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ಶಿಕ್ಷೆ

ಕಲಬುರ್ಗಿ ಹೈಕೋರ್ಟ್ ನ ವಿಭಾಗೀಯ ಪೀಠದಿಂದ ಆದೇಶ

 

Mobile Title: 
ದೂರು ಸ್ವೀಕರಿಸದ ಇನ್ಸ್ ಪೆಕ್ಟರ್ ಗೆ ಬೀದಿ ಗುಡಿಸುವ ಶಿಕ್ಷೆ ನೀಡಿದ ನ್ಯಾಯಾಲಯ
Zee Kannada News Desk
Publish Later: 
No
Publish At: 
Thursday, December 24, 2020 - 16:24
Created By: 
Ranjitha RK
Updated By: 
Ranjitha RK
Published By: 
Ranjitha RK
Request Count: 
4