ನಲಪಾಡ್ ನ್ಯಾಯಾಂಗ ಬಂಧನ ಮಾ.21ರವರೆಗೆ ವಿಸ್ತರಣೆ

ಶಾಸಕ ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ವಿಧಿಸಿರುವ ನ್ಯಾಯಾಂಗ ಬಂಧನವನ್ನು ಮಾರ್ಚ್ 21ರವರೆಗೆ ವಿಸ್ತರಿಸಿ ಬುಧವಾರ ಕೋರ್ಟ್ ಆದೇಶ ನೀಡಿದೆ. 

Last Updated : Mar 7, 2018, 12:28 PM IST
ನಲಪಾಡ್ ನ್ಯಾಯಾಂಗ ಬಂಧನ ಮಾ.21ರವರೆಗೆ ವಿಸ್ತರಣೆ title=

ಬೆಂಗಳೂರು: ಯುಬಿ ಸಿಟಿಯಲ್ಲಿ ಯುವಕ ವಿದ್ವತ್‌ ಮೇಲೆ ನಡೆದ ಹಲ್ಲೆ ಪ್ರಕರಣದ ಸಂಬಂಧ ಶಾಸಕ ಹ್ಯಾರಿಸ್‌ ಅವರ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ವಿಧಿಸಿರುವ ನ್ಯಾಯಾಂಗ ಬಂಧನವನ್ನು ಮಾರ್ಚ್ 21ರವರೆಗೆ ವಿಸ್ತರಿಸಿ ಬುಧವಾರ ಕೋರ್ಟ್ ಆದೇಶ ನೀಡಿದೆ. 

ಪ್ರಕರಣ ಕುರಿತು ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಸದ್ಯ ಪರಪ್ಪನ ಅಗ್ರಹಾರದ ಅತಿಥಿಯಾಗಿರುವ ನಲಪಾಡ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಕ್ಕೆ ಹಾಜರಾಗಿದ್ದರು. 

ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ತಲೆಮರೆಸಿಕೊಂಡಿದ್ದ ನಲಪಾಡ್ ಫೆ.19ರಂದು ಪೊಲೀಸರಿಗೆ ಶರಣಾಗಿದ್ದರು. 

ಈ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್ ಸೇರಿದಂತೆ 7 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. 

Trending News