ಪ್ರತ್ಯೇಕ ಲಿಂಗಾಯತ ಧರ್ಮ: ಕೇಂದ್ರ ಸರ್ಕಾರಕ್ಕೆ ತಜ್ಞರ ವರದಿ ಶಿಫಾರಸ್ಸು

    

Last Updated : Mar 19, 2018, 03:50 PM IST
ಪ್ರತ್ಯೇಕ ಲಿಂಗಾಯತ ಧರ್ಮ: ಕೇಂದ್ರ ಸರ್ಕಾರಕ್ಕೆ ತಜ್ಞರ ವರದಿ ಶಿಫಾರಸ್ಸು title=

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ನೇಮಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಲ್ಲಿಸಿದ್ದ ವರದಿಯನ್ನು ರಾಜ್ಯ ಸರ್ಕಾರವು ಅಂಗಿಕರಿಸಿದ್ದು ಇದನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಪ್ರತ್ಯೇಕ ಲಿಂಗಾಯತ್ ಧರ್ಮದ ಸ್ಥಾಪನೆಗೆ ಬೇಡಿಕೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತಾಗಿ  ಸಮಗ್ರ ಅಧ್ಯಯನ ಮಾಡಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ ಕೋರಿತ್ತು, ನಂತರ ಸಮಿತಿಯು ಅಧ್ಯಯನ ಮಾಡಿ  ಪ್ರತ್ಯೇಕ ಲಿಂಗಾಯತ ಧರ್ಮದ ಸ್ಥಾಪನೆ ವಿಚಾರವಾಗಿ ಒಪ್ಪಿಗೆ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇಂದು ಈ ವರದಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ಸಭೆ ಕರೆದು ಕೊನೆಗೂ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒಪ್ಪಿಗೆ ನೀಡಿದೆ.

ಈ ಪ್ರತ್ಯೇಕ ಲಿಂಗಾಯತ ಧರ್ಮದ ವರದಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಜಗದೀಶ್ ಶೆಟ್ಟರ ಈ ವರದಿಯನ್ನು ರಾಜ್ಯ ಸರ್ಕಾರವು ಚುನಾವಣಾ ಹಿನ್ನಲೆಯಲ್ಲಿ  ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇದರಿಂದ ಯಾರಿಗೂ ಲಾಭವಿಲ್ಲ ಎಂದು ಅವರು ತಿಳಿಸಿದರು. 

Trending News