BS Yediyurappa : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿ ಸುದ್ದಿ..!

ಈ ವರ್ಷ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 19,370 ಕೋಟಿ ರೂ. ಸಾಲ

Last Updated : Jun 22, 2021, 02:59 PM IST
  • ರಾಜ್ಯ ಸರ್ಕಾರವು ಕೋವಿಡ್ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಸಿಹಿಸುದ್ದಿ
  • ಈ ವರ್ಷ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 19,370 ಕೋಟಿ ರೂ. ಸಾಲ
  • ಸಹಕಾರ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಏರ್ಪಡಿಸಿದ್ದ ರೈತ ಸ್ಪಂದ ಕಾರ್ಯಕ್ರಮ
BS Yediyurappa : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿ ಸುದ್ದಿ..! title=

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಈ ವರ್ಷ 30.26 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 19,370 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ಸಹಕಾರ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಏರ್ಪಡಿಸಿದ್ದ ರೈತ ಸ್ಪಂದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa), ರಾಜ್ಯದ ರೈತರಿಗೆ ಅಲ್ಪಾವಧಿ ಬೆಳೆಸಾಲ ಮತ್ತು 60 ಸಾವಿರ ರೈತರಿಗೆ ಶೇ. 3 ರ ಬಡ್ಡಿದರದಲ್ಲಿ 1,440 ಕೋಟಿ ರೂ. ಮಧ್ಯಮಾವಧಿ/ದೀರ್ಘಾವಧಿ ಸಾಲ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Reopen School-College : ರಾಜ್ಯದಲ್ಲಿ 'ಶಾಲಾ-ಕಾಲೇಜು' ಆರಂಭದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು!

ಇನ್ನು ರಾಜ್ಯದ 40 ಲಕ್ಷ ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪುಗಳಿಗೆ 1,400 ಕೋಟಿ ರೂ. ಸಾಲ(Loan) ವಿತರಿಸುವ ಗುರಿ ಹೊಂದಲಾಗಿದೆ. ಮೇ.ಅಂತ್ಯಕ್ಕೆ 6,700 ಗುಂಪುಗಳಿಗೆ 233.33 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ : Interstate Bus Travel : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News