/kannada/photo-gallery/symptoms-that-appear-on-the-skin-when-blood-sugar-is-high-249392 ಬ್ಲಡ್‌ ಟೆಸ್ಟ್ ಅಗತ್ಯವೇ ಇಲ್ಲ... ಚರ್ಮದ ಮೇಲೆ ಈ ಗುರುತುಗಳು ಕಾಣಿಸಿಕೊಳ್ಳುತ್ತಿದ್ದರೆ ನಿಮಗೆ ಡಯಾಬಿಟಿಸ್ ಹೆಚ್ಚಾಗಿರುವುದು ಖಚಿತ! ಬ್ಲಡ್‌ ಟೆಸ್ಟ್ ಅಗತ್ಯವೇ ಇಲ್ಲ... ಚರ್ಮದ ಮೇಲೆ ಈ ಗುರುತುಗಳು ಕಾಣಿಸಿಕೊಳ್ಳುತ್ತಿದ್ದರೆ ನಿಮಗೆ ಡಯಾಬಿಟಿಸ್ ಹೆಚ್ಚಾಗಿರುವುದು ಖಚಿತ! 249392

ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್'ಗೆ ದೂರು ನೀಡಿದ ಶಾಸಕ ಚಿಮ್ಮನಕಟ್ಟಿ

ಈ ಬಾರಿಯ ಚುನಾವಣೆಯಲ್ಲಿ ನಾನೇ ನಿಲ್ಲುತ್ತೇನೆ- ಚಿಮ್ಮನಕಟ್ಟಿ

Last Updated : Apr 11, 2018, 10:40 AM IST
ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್'ಗೆ ದೂರು ನೀಡಿದ ಶಾಸಕ ಚಿಮ್ಮನಕಟ್ಟಿ title=

ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜತೆ ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಬಾದಾಮಿಯ ಹಾಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.

ಸಿಎಂ ನನ್ನ ಆರೋಗ್ಯದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೈಕಮಾಂಡ್ ಗೆ ದೂರು ನೀಡುರುವ ಚಿಮ್ಮನಕಟ್ಟಿ, ಈ ಬಾರಿಯ ಚುನಾವಣೆಯಲ್ಲಿ ಬಾದಾಮಿಯಿಂದ ತಾವೇ ಸ್ಪರ್ಧಿಸುವುದಾಗಿಯೂ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಚಿಮ್ಮನಕಟ್ಟಿ ಈ ಬಗ್ಗೆ ತಮ್ಮ ಅಳಲು ತೋಡಿಕೊಂಡಿರುವುದಲ್ಲದೆ, ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜತೆ ಬಾದಾಮಿ ಕ್ಷೇತ್ರವನ್ನು ಆಯ್ಕೆ ಮಾಡಬಾರದು. ಬೇಕಾದ ಕಡೆ ಸ್ಪರ್ಧಿಸಲು ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.