ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ : ಇಂದು ಸಿಎಂ ಹೊಸ ಗೈಡ್ ಲೈನ್ ಪ್ರಕಟಿಸುವ ಸಾಧ್ಯತೆ 

ನವೆಂಬರ್‌ನಲ್ಲಿ ಕೋವಿಡ್ -19 ಅಂಕಿಅಂಶಗಳಿಗೆ ಸಂಬಂಧಿಸಿದ ವಿವರಗಳನ್ನು ಇಂದು ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಹೇಳಿದರು.

Written by - Channabasava A Kashinakunti | Last Updated : Dec 9, 2021, 12:15 PM IST
  • ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ

    ರಾಜ್ಯದಲ್ಲಿ ಹೊಸ ಕೋವಿಡ್ -19 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬಹುದು
  • ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ : ಇಂದು ಸಿಎಂ ಹೊಸ ಗೈಡ್ ಲೈನ್ ಪ್ರಕಟಿಸುವ ಸಾಧ್ಯತೆ  title=

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ ಮತ್ತು ಈ ತಿಂಗಳು ಮತ್ತು ಮುಂದಿನ ವರ್ಷದ ಜನವರಿಯಲ್ಲಿ ಸಂಭವನೀಯ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಹೊಸ ಕೋವಿಡ್ -19 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಸುಳಿವು ನೀಡಿದ್ದಾರೆ. 

ಬುಧವಾರ ತಜ್ಞರು ಮತ್ತು ಆರೋಗ್ಯ ಅಧಿಕಾರಿಗಳನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ(Basavaraj Bommai), ನವೆಂಬರ್‌ನಲ್ಲಿ ಕೋವಿಡ್ -19 ಅಂಕಿಅಂಶಗಳಿಗೆ ಸಂಬಂಧಿಸಿದ ವಿವರಗಳನ್ನು ಇಂದು ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ಹೇಳಿದರು. "ಓಮಿಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದಂತೆ ಏನಾಗುತ್ತಿದೆ ಮತ್ತು ಕೋವಿಡ್-19 ಕ್ಲಸ್ಟರ್‌ಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕ್ಯಾಬಿನೆಟ್ ಮುಂದೆ ಇರಿಸಲಾಗುವುದು ಮತ್ತು ಅದರ ಪ್ರಕಾರ ಹೊಸ ಮಾರ್ಗಸೂಚಿಗಳನ್ನು ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ : SR More passes Away : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಎಸ್ ಆರ್ ಮೋರ್ ನಿಧನ

ನಿನ್ನೆ ರಾಜ್ಯದಲ್ಲಿ 399 ಹೊಸ ಕೋವಿಡ್ -19 ಪ್ರಕರಣಗಳನ್ನು(Covid-19 Cases) ವರದಿಯಾಗಿವೆ, ಹಿಂದಿನ ದಿನ ಏನಂದ್ರೆ ಮಂಗಳವಾರ ವರದಿಯಾದ 299 ರಿಂದ ಹೆಚ್ಚಳ ಮತ್ತು 6 ಸಾವುಗಳು ಸಂಭವಿಸಿವೆ. ಹೊಸ ಪ್ರಕರಣಗಳು ವರದಿಯಾದ ಜಿಲ್ಲೆಗಳ ಪೈಕಿ ಬೆಂಗಳೂರು ನಗರ 244, ಮೈಸೂರು 38, ಕೊಡಗು 30, ದಕ್ಷಿಣ ಕನ್ನಡ 15, ಚಿಕ್ಕಮಗಳೂರು 14, ಇತರರು ನಂತರದ ಸ್ಥಾನದಲ್ಲಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,255 ಆಗಿದೆ.

ಹೊಸ ಮಾರ್ಗಸೂಚಿಗಳನ್ನು ತಯಾರಿಸಲಾಗುತ್ತಿದೆಯೇ ಅಂಬಾ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ(CM Bommai), ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಏಕೆಂದರೆ ಕೋವಿಡ್-19 ಪ್ರಕರಣಗಳು ಕೆಲವೇ ಜಿಲ್ಲೆಗಳಲ್ಲಿ ಕಂಡುಬರುತ್ತವೆ ಆದರೆ ಇತರ ಸ್ಥಳಗಳಲ್ಲಿ ಅದು ನಿಯಂತ್ರಣದಲ್ಲಿದೆ. “ನಾವು ಯಾವುದೇ ಹೊಸ ಮಾರ್ಗಸೂಚಿಗಳನ್ನು ತರಬೇಕಾದರೆ ಅದು ಇಡೀ ರಾಜ್ಯಕ್ಕೆ ಇರಬೇಕು. ಕೇಂದ್ರವೂ ಮಾರ್ಗಸೂಚಿಗಳನ್ನು ಹೊರಡಿಸಿದೆ. ಡಿಸೆಂಬರ್ ಮತ್ತು ಜನವರಿಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವುದು ಮತ್ತು ಹೊಸ ಮಾರ್ಗಸೂಚಿಗಳ ಅಗತ್ಯವನ್ನು ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗುವುದು, ”ಎಂದು ವಿವರಿಸಿದರು.

ಇದನ್ನೂ ಓದಿ : Basavaraj Bommai : ರಾಜ್ಯದಲ್ಲಿ ಕೋವಿಡ್-19 ಹೊಸ ಮಾರ್ಗಸೂಚಿ : ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ತಜ್ಞರು ನೈಟ್ ಕರ್ಫ್ಯೂ(Night Curfew), ಜನ ಸೇರುವ ಪ್ರದೇಶ ಅಥವಾ ಜನರ ಓಡಾಟದ ನಿರ್ಬಂಧಗಳಂತಹ ನಿರ್ಬಂಧಗಳನ್ನು ವಿಧಿಸದಂತೆ ಸೂಚಿಸಿದ್ದಾರೆ ಏಕೆಂದರೆ ಪ್ರಸ್ತುತ ಪರಿಸ್ಥಿತಿಯು ಈ ಕ್ರಮಗಳನ್ನು ಸಮರ್ಥಿಸುವುದಿಲ್ಲ. ಬದಲಾಗಿ, ಪರೀಕ್ಷೆಗಳನ್ನು ಹೆಚ್ಚಿಸುವುದು, ನೆಗೆಟಿವ್ ಪ್ರಕರಣಗಳನ್ನು ನಿರ್ಬಂಧಿಸುವುದು, ಸಂಪರ್ಕ ಪತ್ತೆಹಚ್ಚುವಿಕೆ ಮುಂತಾದವುಗಳ ಮೇಲೆ ಹೆಚ್ಚು ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News