ಭಾರತವು ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿನಿಧಿಸುತ್ತದೆ-ಪ್ರಧಾನಿ ಮೋದಿ

ಪ್ರಜಾಪ್ರಭುತ್ವದ ಶಕ್ತಿಯು ಜಗತ್ತಿಗೆ ಒಂದು ಸ್ಪಷ್ಟ ಸಂದೇಶವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ಹೇಳಿದ್ದಾರೆ.

Written by - Zee Kannada News Desk | Last Updated : Dec 10, 2021, 07:56 PM IST
  • ಪ್ರಜಾಪ್ರಭುತ್ವದ ಶಕ್ತಿಯು ಜಗತ್ತಿಗೆ ಒಂದು ಸ್ಪಷ್ಟ ಸಂದೇಶವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ಹೇಳಿದ್ದಾರೆ.
  • 'ಪ್ರಜಾಪ್ರಭುತ್ವದ ಶೃಂಗಸಭೆ' ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಮಾತನಾಡುತ್ತಾ ಪ್ರಧಾನಿ ಈ ಹೇಳಿಕೆಗಳನ್ನು ನೀಡಿದ್ದಾರೆ
ಭಾರತವು ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿನಿಧಿಸುತ್ತದೆ-ಪ್ರಧಾನಿ ಮೋದಿ title=
file photo

ನವದೆಹಲಿ: ಪ್ರಜಾಪ್ರಭುತ್ವದ ಶಕ್ತಿಯು ಜಗತ್ತಿಗೆ ಒಂದು ಸ್ಪಷ್ಟ ಸಂದೇಶವನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ಹೇಳಿದ್ದಾರೆ.

'ಪ್ರಜಾಪ್ರಭುತ್ವದ ಶೃಂಗಸಭೆ' ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಮಾತನಾಡುತ್ತಾ ಪ್ರಧಾನಿ ಈ ಹೇಳಿಕೆಗಳನ್ನು ನೀಡಿದ್ದಾರೆ.ಶೃಂಗಸಭೆಯಲ್ಲಿ ಪ್ರಜಾಪ್ರಭುತ್ವದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡ ಪ್ರಧಾನಿ ಮೋದಿ, 'ಪ್ರಜಾಪ್ರಭುತ್ವವು ಜನರಿಂದ ಅಥವಾ ಜನರಿಗಾಗಿ ಅಲ್ಲ, ಆದರೆ ಜನರೊಂದಿಗೆ ಮತ್ತು ಜನರೊಳಗೆ ಇದೆ' ಎಂದು ಹೇಳಿದರು.

ಇದನ್ನೂ ಓದಿ : ಈ ಐದು ರೂಪಾಯಿ ಬದಲಿಸಲಿದೆ ಅದೃಷ್ಟ, ಒಂದು ನಾಣ್ಯದ ಬದಲಿಗೆ ಸಿಗಲಿದೆ 10 ಲಕ್ಷ ರೂಪಾಯಿ

ಭಾರತದ ಸ್ವಾತಂತ್ರ್ಯ ಹೋರಾಟವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾರಣವಾದ ಹೋರಾಟವಾಗಿದೆ, ಇದು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಹೇಳಿದರು.ಭಾರತದ ಸ್ವಾತಂತ್ರ್ಯವು ಕಳೆದ 75 ವರ್ಷಗಳಲ್ಲಿ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣದಲ್ಲಿ ಸರಿ ಸಾಟಿಯಿಲ್ಲದೆ ಕಥನಕ್ಕೆ ಕಾರಣವಾಗಿದೆ ಎಂದು ಮೋದಿ ಹೇಳಿದರು.

'ಭಾರತದ ಪ್ರಜಾಪ್ರಭುತ್ವವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಮಾಜಿಕ-ಆರ್ಥಿಕ ಸೇರ್ಪಡೆಯ ಕಥೆಯಾಗಿದೆ; ಇದು ನಿರಂತರ ಸುಧಾರಣೆಗಳ ಕಥೆಯಾಗಿದೆ ಎಂದು ಮೋದಿ ಹೇಳಿದರು.ಪ್ರಜಾಸತ್ತಾತ್ಮಕ ಮೌಲ್ಯಗಳು ಭಾರತೀಯರಲ್ಲಿ ಅಂತರ್ಗತವಾಗಿವೆ ಮತ್ತು ಅದಕ್ಕಾಗಿಯೇ ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ಭಾರತೀಯ ಜನರ ಪ್ರಜಾಸತ್ತಾತ್ಮಕ ಮನೋಭಾವವನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ' ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಈ RD ಯೋಜನೆಗಳಲ್ಲಿ ನಿಮಗೆ ಸಿಗಲಿದೆ ಶೇ.8.5 ರಷ್ಟು ವಾರ್ಷಿಕ ಬಡ್ಡಿಯ ಲಾಭ

ವಿಶ್ವಾದ್ಯಂತ ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಬೆದರಿಕೆಗಳನ್ನು ಚರ್ಚಿಸಲು ಮತ್ತು ಎದುರಿಸಲು 100 ಕ್ಕೂ ಹೆಚ್ಚು ಜಾಗತಿಕ ನಾಯಕರು ಭಾಗವಹಿಸಿದ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಆಯೋಜಿಸಿದ್ದ 'ಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆ'ಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಶುಕ್ರವಾರದಂದು ಮಾತನಾಡಿದರು.

ಇದನ್ನೂ ಓದಿ : ಈ ಐದು ರೂಪಾಯಿ ಬದಲಿಸಲಿದೆ ಅದೃಷ್ಟ, ಒಂದು ನಾಣ್ಯದ ಬದಲಿಗೆ ಸಿಗಲಿದೆ 10 ಲಕ್ಷ ರೂಪಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News