DK Shivakumar : 'ಈಶ್ವರಪ್ಪ ಸುಳ್ಳು ಕಂಪನಿ ಚೇರ್ ಮೆನ್'

ನಾಳೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ರಾಜೀನಾಮೆ ಬಗ್ಗೆ ನಾನು ಹೆಚ್ಚು ಮಾತನಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

Written by - Zee Kannada News Desk | Last Updated : Apr 14, 2022, 07:12 PM IST
  • ನಾಳೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಈಶ್ವರಪ್ಪ ಹೇಳಿದ್ದಾರೆ
  • ಈಶ್ವರಪ್ಪ ರಾಜೀನಾಮೆ ಬಗ್ಗೆ ನಾನು ಹೆಚ್ಚು ಮಾತನಾಡಿಲ್ಲ
  • ನಾವು ಹೋರಾಟ ಮಾಡ್ತಿರೋದು ಈಶ್ವರಪ್ಪ ಅವ್ರನ್ನ ಬಂಧಿಸಬೇಕು ಅಂತ
DK Shivakumar : 'ಈಶ್ವರಪ್ಪ ಸುಳ್ಳು ಕಂಪನಿ ಚೇರ್ ಮೆನ್' title=

ಬೆಂಗಳೂರು : ನಾಳೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ರಾಜೀನಾಮೆ ಬಗ್ಗೆ ನಾನು ಹೆಚ್ಚು ಮಾತನಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಭ್ರಷ್ಟಾಚಾರದಿಂದ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರ ಆರೋಪದಡಿ, ಈಶ್ವರಪ್ಪ ಮೇಲೆ ಕೇಸ್ ಹಾಕಬೇಕು. ಈಶ್ವರಪ್ಪರನ್ನ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : Big Breaking: ನಾಳೆ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ

ಸುಳ್ಳು ಕಂಪನಿ ಚೇರ್ ಮೆನ್ ಈಶ್ವರಪ್ಪ. ನೂರು ಸರಿ ಸುಳ್ಳು ಹೇಳಿ ನಿಜ ಮಾಡಬೇಕೆಂದು ಈಶ್ವರಪ್ಪನವರು ಹೇಳಿಕೆ ಕೊಟ್ಟಿದ್ದರು. ನಾವು ಹೋರಾಟ ಮಾಡ್ತಿರೋದು ಈಶ್ವರಪ್ಪ ಅವ್ರನ್ನ ಬಂಧಿಸಬೇಕು ಅಂತ. ಹೈಕೋರ್ಟ್ ಹಾಲಿ ನ್ಯಾಯಾಧೀಶ ನೇತೃತ್ವದಲ್ಲಿ ಪ್ರಕರಣ ತನಿಖೆಯಾಗಬೇಕು. ನಮ್ಮ ಹೋರಾಟ ಇಲ್ಲಿಗೆ ನಿಲ್ಲಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ. ರಾಜ್ಯದ ಜನರ ಸ್ವಾಭಿಮಾನ ಜಯ ಇದೆ. ನಿಮ್ಮ ಸರ್ಕಾರ ಕಳಂಕಿತರಲ್ಲ ಆದ್ರೆ ಕೂಡಲೇ ಈಶ್ವರಪ್ಪನನ್ನ ಬಂಧಿಸಿ ಎಂದು ಸಿಎಂ ಬೊಮ್ಮಾಯಿಗೆ ಒತ್ತಾಯ ಮಾಡಿದರು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News