/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

"ಸೈಕೋ ಶಂಕರ" ಮ‌ೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತು. 

"ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು.ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವಿದೆ‌. ಚಿತ್ರದಲ್ಲಿ ಮೂರು ತಿರುವುಗಳಿವೆ.ಯಾರು ಊಹಿಸಲಾಗದ ಕ್ಲೈಮ್ಯಾಕ್ಸ್ ‌ಸಹ ಇದೆ.ಚಿತ್ರ ಮೇನಲ್ಲಿ ತೆರೆಗೆ ಬರುತ್ತಿದೆ ಎಂದ ನಿರ್ದೇಶಕ ನಾಗೇಂದ್ರ ಅರಸ್, ತಾವು ಈ ಚಿತ್ರದಲ್ಲಿ ನಟಿಸಿರುವುದಾಗಿ ಹೇಳಿದರು.

ಇದನ್ನೂ ಓದಿ-Budh Rashi Parivartan: ಬುಧನ ರಾಶಿ ಬದಲಾವಣೆ ಈ 6 ರಾಶಿಗಳ ಭಾಗ್ಯ ಬದಲಾಯಿಸಲಿದೆ

"ಸೈಕೋ ಶಂಕರ" ನನಗೆ ಅಂದುಕೊಂಡ ಯಶಸ್ಸು ತಂದುಕೊಡಲಿಲ್ಲ.ಈಗ ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ನಟಿಸಿದ್ದೇನೆ.ಕಥೆ ತುಂಬಾ ಚೆನ್ನಾಗಿದೆ, ಕ್ಲೈಮ್ಯಾಕ್ಸ್ ನೋಡಿದವರು ಅಚ್ಚರಿಯಾಗುವುದಂತು ಖಚಿತ. ಇದು ತಂತ್ರಜ್ಞರೇ ಸೇರಿ ಮಾಡಿರುವ ಸಿನಿಮಾ ಅಂದರೆ ತಪ್ಪಾಗಲಾರದು.ನಾನು ಮ್ಯಾನ್ ಲಿಯೋ ಸ್ಟುಡಿಯೋ ನಡೆಸುತ್ತಿದ್ದೇನೆ.ನಾಗೇಂದ್ರ ಅರಸ್ ಸಂಕಲನಕಾರರೂ ಹೌದು.ಶ್ರೀಧರ್ ಕಶ್ಯಪ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ ಅನುಭವವಿದೆ. ಹೀಗೆ ಹಲವು ತಂತ್ರಜ್ಞರ ಹಾಗೂ ಕಲಾವಿದರ ಸಮಾಗಮದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು ನಾಯಕ ಪ್ರಣವ್ ಸೂರ್ಯ.

No description available.

ಇದನ್ನೂ ಓದಿ- Shukra Gochar April 2022: ಪ್ರೀತಿ-ಹಣ-ರೋಮಾನ್ಸ್ ನಿಂದ ತುಂಬಲಿದೆ ಈ 3 ರಾಶಿಗಳ ಜನರ ಜೀವನ

ಮೂಲತಃ ವಿಜ್ಞಾನಿ ಆಗಿರುವ ದಿವ್ಯ ಚಂದ್ರಧರ, ರಾಜಕೀಯ ಹಾಗೂ ಉದ್ಯಮಿಯಾಗಿರುವ ಶಶಿಕುಮಾರ್ ಹಾಗೂ ಆಹಾರ ಉದ್ಯಮ ನಡೆಸುತ್ತಿರುವ ಯೋಗೀಶ್ ಕೆ. ಗೌಡ ಈ ಚಿತ್ರಕ್ಕೆ ಹಣ ಹಾಕಿದ್ದಾರೆ.ಮೂವರು ಸಹ ಈ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಚಿತ್ರದ ಹಾಡುಗಳ ಬಗ್ಗೆ ಶ್ರೀಧರ್ ಕಶ್ಯಪ್ ಮಾತನಾಡುತ್ತಾ ಈ ಚಿತ್ರದಲ್ಲಿ ಆರು ಹಾಡುಗಳಿವೆ, ನಿರ್ದೇಶಕ ಜೋಗಿ ಪ್ರೇಮ್, ರಾಜೇಶ್ ಕೃಷ್ಣನ್, ದಿವ್ಯ ಆಲೂರ್, ಐಶ್ವರ್ಯ ರಂಗರಾಜನ್, ಸಂಗೀತ ಕಟ್ಟಿ, ಮ್ಯಾಥ್ಯೂಸ್ ಮನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕರು ಮಾಹಿತಿ ನೀಡಿದರು.

ನಾಯಕಿ ಪ್ರಿಯಾಂಕ, ನಟ ವಿಸಿಎನ್ ಮಂಜುರಾಜ್ ಸೂರ್ಯ, ನಟಿ ಗಗನ ಹಾಗೂ ಸಂಕಲನಕಾರ ಎನ್.ಎಂ. ವಿಶ್ವ "ಕಂಡ್ಹಿಡಿ ನೋಡನ" ಚಿತ್ರದ ಬಗ್ಗೆ ಮಾತನಾಡಿದರು. ವಿನೋದ್ ಜೆ .ರಾಜ್ ಈ ಚಿತ್ರದ ಛಾಯಾಗ್ರಹಕರು.No description available.

ಪ್ರಣವ ಸೂರ್ಯ, ಎಸ್.ಕೆ.ನಾಗೇಂದ್ರ ಅರಸ್, ವಿಜಯ್ ಚೆಂಡೂರ್, ಗಿರಿಜಾ ಲೋಕೇಶ್, ಪ್ರಿಯಾಂಕ, ಶಿಲ್ಪ ಬರಿಕೆ, ಗಗನ ಮಧು, VCN ಮಂಜುರಾಜ್ ಸೂರ್ಯ ಹಾಗೂ ಆದರ್ಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಾಯಕ ಪ್ರಣವ ಸೂರ್ಯ  ಕ್ರಿಯೇಟಿವ್ ಹೆಡ್ ಆಗಿ ಸಹ ಕಾರ್ಯನಿರ್ವಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Section: 
English Title: 
Kandidi Nodana Movie Press Conference,
News Source: 
Home Title: 

"ಕಂಡಿಡಿ ನೋಡನ"ದಲ್ಲಿದೆಯಂತೆ ವಿಭಿನ್ನ ಕ್ಲೈಮ್ಯಾಕ್ಸ್...ಏನದು..!?

"ಕಂಡಿಡಿ ನೋಡನ"ದಲ್ಲಿದೆಯಂತೆ ವಿಭಿನ್ನ ಕ್ಲೈಮ್ಯಾಕ್ಸ್...ಏನದು..!?
Yes
Is Blog?: 
No
Tags: 
Facebook Instant Article: 
Yes
Highlights: 

ನಿರ್ದೇಶಕ ಜೋಗಿ ಪ್ರೇಮ್, ರಾಜೇಶ್ ಕೃಷ್ಣನ್, ದಿವ್ಯ ಆಲೂರ್, ಐಶ್ವರ್ಯ ರಂಗರಾಜನ್, ಸಂಗೀತ ಕಟ್ಟಿ, ಮ್ಯಾಥ್ಯೂಸ್ ಮನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕರು ಮಾಹಿತಿ ನೀಡಿದರು.

Mobile Title: 
"ಕಂಡಿಡಿ ನೋಡನ"ದಲ್ಲಿದೆಯಂತೆ ವಿಭಿನ್ನ ಕ್ಲೈಮ್ಯಾಕ್ಸ್...ಏನದು..!?
Manjunath N
YASHODHA POOJARI
Publish Later: 
No
Publish At: 
Saturday, April 23, 2022 - 18:58
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No