Pramodh Madhwaraj : ಪ್ರಮೋದ್ ಮಧ್ವರಾಜ್ ರಾಜೀನಾಮೆ : ಶೀಘ್ರ ಬಿಜೆಪಿಗೆ

ಪ್ರಮೋದ್ ಮಧ್ವರಾಜ್ ಉಡುಪಿಯ ಮಾಜಿ ಶಾಸಕರು ಮತ್ತು ಮಾಜಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾಗಿದ್ದಾರೆ. 

Written by - Zee Kannada News Desk | Last Updated : May 7, 2022, 04:58 PM IST
  • ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್
  • ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
  • ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಪತ್ರ ರವಾನಿಸಿದ್ದಾರೆ.
Pramodh Madhwaraj : ಪ್ರಮೋದ್ ಮಧ್ವರಾಜ್ ರಾಜೀನಾಮೆ : ಶೀಘ್ರ ಬಿಜೆಪಿಗೆ title=

ಉಡುಪಿ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಉಡುಪಿಯ ಮಾಜಿ ಶಾಸಕರು ಮತ್ತು ಮಾಜಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾಗಿದ್ದಾರೆ. 

ಇದನ್ನೂ ಓದಿ : Pramod Muthalik : 'ಛೋಟಾ ಪಾಕಿಸ್ತಾನ್ ಎಂದು ಕೂಗಿದವರನ್ನ ಎನ್ ಕೌಂಟರ್ ಮಾಡಿ'

ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಪತ್ರ ರವಾನಿಸಿದ್ದಾರೆ. 

ಪ್ರಮೋದ್ ಮಧ್ವರಾಜ್ ಅವ್ರು ಇಂದು ಮಧ್ಯಾಹ್ನ ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಪ್ರಮೋದ್ ಮಧ್ವರಾಜ್, 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದ, ಸಿದ್ದರಾಮಯ್ಯ ಸಂಪುಟದಲ್ಲಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಸಚಿವರಾಗಿದ್ದರು.

ಇದನ್ನೂ ಓದಿ : Basanagouda Patil Yatnal : 'ಡಿಕೆ ಶಿವಕುಮಾರ್ ಗೆ ನನ್ನ ಬಗ್ಗೆ ಭಯ ಶುರುವಾಗಿದೆ'

ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಡುಪಿ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ 72,902 ಮತಗಳನ್ನು ಪಡೆದು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News