ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಬಳಿ ಕಳೆದ ರಾತ್ರಿ ಅಪಘಾತವಾಗಿದೆ. ಕಲಬುರಗಿಯಲ್ಲಿ ಮದುವೆ ಮುಗಿಸಿ ಹಾವನೂರ ಗ್ರಾಮಕ್ಕೆ ತೆರಳುತ್ತಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಸಿದ್ದಮ್ಮ ಮತ್ತು ಶಿವಕುಮಾರ ಎನ್ನುವವರಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು 15 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿಯ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆಸಿದೆ.
ಮದುವೆಗೆ ಹೋದವರಿಗೆ ಕಾದಿತ್ತು ಜವರಾಯನ ಅಟ್ಟಹಾಸ